Homeಮುಖಪುಟವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

ವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಡೆಹಿಡಿಯಲು ಬಲವಾದ ಪ್ರಕರಣವನ್ನು ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಮಂಗಳವಾರ ಕೋರ್ಟ್ ವಿಚಾರಣೆ ನಡೆಸಿದೆ. ವಕ್ಫ್ ಕಾಯ್ದೆಗೆ ತಡೆ

“ಪ್ರತಿಯೊಂದು ಕಾನೂನಿನ ಪರವಾಗಿ ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ. ಮಧ್ಯಂತರ ಪರಿಹಾರ ಬೇಕು ಎಂದರೆ, ನೀವು ಬಲವಾದ ಮತ್ತು ಎದ್ದುಕಾಣುವಂತೆ ಪ್ರಕರಣವನ್ನು ರೂಪಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ.” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.

ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾದಗಳನ್ನು ಆಲಿಸಿದ ನಂತರ ಬುಧವಾರದವರೆಗೆ ವಿಷಯವನ್ನು ಮುಂದೂಡಿದೆ. ಅದಾಗ್ಯೂ, ಈ ವೇಳೆ ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಲಾಗಿಲ್ಲ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೇಂದ್ರದ ಬಿಜೆಪಿ ತಂದಿರುವ ಈ ಕಾಯ್ದೆಯು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಮತ್ತು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಅರ್ಜಿಗಳು ಹೇಳುತ್ತವೆ. ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ದತ್ತಿಯಾಗಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ವಿಭಾಗಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯನಿರ್ವಹನೆಯನ್ನು ಬದಲಾಯಿಸುವುದು ಸೇರಿವೆ.

ವಿವಾದಿತ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಪಡೆದ ಅದು ಏಪ್ರಿಲ್ 8 ರಂದು ಜಾರಿಗೆ ಬಂದಿತು.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಹಲವಾರು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವದ ವಿಚಾರದಲ್ಲಿ ಪ್ರಶ್ನಿಸಿದ್ದಾರೆ.

ಮಂಗಳವಾರ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಧ್ಯಂತರ ಪರಿಹಾರವನ್ನು ಪರಿಗಣಿಸುವಾಗ ವಿಚಾರಣೆಯನ್ನು ಮೂರು ಪ್ರಮುಖ ಪ್ರಶ್ನೆಗಳಿಗೆ ಸೀಮಿತಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ. ಆದಾಗ್ಯೂ, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಈ ಕ್ರಮವನ್ನು ವಿರೋಧಿಸಿದ್ದು, ತಿದ್ದುಪಡಿಗಳನ್ನು ವಿಶಾಲ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಕ್ಫ್ ಆಸ್ತಿಗಳನ್ನು ನೋಂದಾಯಿಸಲು ಕಠಿಣ ಮತ್ತು ಅನ್ಯಾಯದ ಷರತ್ತುಗಳನ್ನು ವಿಧಿಸುವ ಮೂಲಕ ಸರ್ಕಾರ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಇತರ ಧಾರ್ಮಿಕ ಗುಂಪುಗಳ ದತ್ತಿಗಳಿಗೆ ವ್ಯತಿರಿಕ್ತವಾಗಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಕ್ಫ್ ಕಾಯ್ದೆಗೆ ತಡೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...