Homeಮುಖಪುಟವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

ವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಡೆಹಿಡಿಯಲು ಬಲವಾದ ಪ್ರಕರಣವನ್ನು ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಮಂಗಳವಾರ ಕೋರ್ಟ್ ವಿಚಾರಣೆ ನಡೆಸಿದೆ. ವಕ್ಫ್ ಕಾಯ್ದೆಗೆ ತಡೆ

“ಪ್ರತಿಯೊಂದು ಕಾನೂನಿನ ಪರವಾಗಿ ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ. ಮಧ್ಯಂತರ ಪರಿಹಾರ ಬೇಕು ಎಂದರೆ, ನೀವು ಬಲವಾದ ಮತ್ತು ಎದ್ದುಕಾಣುವಂತೆ ಪ್ರಕರಣವನ್ನು ರೂಪಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ.” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.

ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾದಗಳನ್ನು ಆಲಿಸಿದ ನಂತರ ಬುಧವಾರದವರೆಗೆ ವಿಷಯವನ್ನು ಮುಂದೂಡಿದೆ. ಅದಾಗ್ಯೂ, ಈ ವೇಳೆ ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಲಾಗಿಲ್ಲ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೇಂದ್ರದ ಬಿಜೆಪಿ ತಂದಿರುವ ಈ ಕಾಯ್ದೆಯು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಮತ್ತು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಅರ್ಜಿಗಳು ಹೇಳುತ್ತವೆ. ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ದತ್ತಿಯಾಗಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ವಿಭಾಗಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯನಿರ್ವಹನೆಯನ್ನು ಬದಲಾಯಿಸುವುದು ಸೇರಿವೆ.

ವಿವಾದಿತ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಪಡೆದ ಅದು ಏಪ್ರಿಲ್ 8 ರಂದು ಜಾರಿಗೆ ಬಂದಿತು.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಹಲವಾರು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವದ ವಿಚಾರದಲ್ಲಿ ಪ್ರಶ್ನಿಸಿದ್ದಾರೆ.

ಮಂಗಳವಾರ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಧ್ಯಂತರ ಪರಿಹಾರವನ್ನು ಪರಿಗಣಿಸುವಾಗ ವಿಚಾರಣೆಯನ್ನು ಮೂರು ಪ್ರಮುಖ ಪ್ರಶ್ನೆಗಳಿಗೆ ಸೀಮಿತಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ. ಆದಾಗ್ಯೂ, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಈ ಕ್ರಮವನ್ನು ವಿರೋಧಿಸಿದ್ದು, ತಿದ್ದುಪಡಿಗಳನ್ನು ವಿಶಾಲ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಕ್ಫ್ ಆಸ್ತಿಗಳನ್ನು ನೋಂದಾಯಿಸಲು ಕಠಿಣ ಮತ್ತು ಅನ್ಯಾಯದ ಷರತ್ತುಗಳನ್ನು ವಿಧಿಸುವ ಮೂಲಕ ಸರ್ಕಾರ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಇತರ ಧಾರ್ಮಿಕ ಗುಂಪುಗಳ ದತ್ತಿಗಳಿಗೆ ವ್ಯತಿರಿಕ್ತವಾಗಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಕ್ಫ್ ಕಾಯ್ದೆಗೆ ತಡೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...