Homeಮುಖಪುಟಹೋರಾಟ ತೀವ್ರಗೊಳಿಸಲು ಗಟ್ಟಿ ನಿರ್ಧಾರ: ಮೇ ತಿಂಗಳಿನಲ್ಲಿ ಪಾರ್ಲಿಮೆಂಟ್ ಚಲೋಗೆ ರೈತರ ಕರೆ

ಹೋರಾಟ ತೀವ್ರಗೊಳಿಸಲು ಗಟ್ಟಿ ನಿರ್ಧಾರ: ಮೇ ತಿಂಗಳಿನಲ್ಲಿ ಪಾರ್ಲಿಮೆಂಟ್ ಚಲೋಗೆ ರೈತರ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನು ತರಬೇಕೆಂದು ಕಳೆದ 4 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ದಿನ ನಡೆಸಬೇಕಿದ್ದ ಪಾರ್ಲಿಮೆಂಟ್ ಚಲೋ ಜನವರಿ 26ರ ಅಹಿತಕರ ಘಟನೆಗಳಿಂದ ಮುಂದೂಡಲ್ಪಟ್ಟಿತ್ತು. ಈಗ ಅದನ್ನು ಮೇ ತಿಂಗಳಿನಲ್ಲಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

130ಕ್ಕೂ ಹೆಚ್ಚು ದಿನಗಳಿಂದ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಮೇ ತಿಂಗಳಿನಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆ ಆದ ನಂತರ ಸಂಸತ್ತಿಗೆ ಪಾದಾಯಾತ್ರೆ ನಡೆಸಲು ಕರೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲು ಮುಂದಾಗಿದೆ.

ಜನವರಿ 25 ರಂದು ಸಂಯುಕ್ತಾ ಕಿಸಾನ್ ಮೋರ್ಚಾದ ಸಂಚಾಲಕ ಡಾ. ದರ್ಶನ್ ಪಾಲ್ ಮಾತನಾಡಿ ”ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ” ಎಂದು ತಿಳಿಸಿದ್ದರು. ಆದರೆ ಜನವರಿ 26ರ ಕಿಸಾನ್ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಘಟನೆಗಳಿಂದಾಗಿ ಫೆಬ್ರವರಿ 1ರ ಪಾರ್ಲಿಮೆಂಟ್ ಚಲೋ ಹೋರಾಟವನ್ನು ಮುಂದೂಡಲಾಗಿತ್ತು.

ತದನಂತರ ರೈತ ಮುಖಂಡರು ತಮ್ಮ ಗಮನವನ್ನು ದೇಶದೆಲ್ಲೆಡೆ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳ ಕಡೆ ಹರಿಸಿದ್ದರು. ಹರಿಯಾಣ, ಉತ್ತರಪ್ರದೇಶ, ಪಂಜಾಬ್, ರಾಜಸ್ಥಾನ, ಉತ್ತರಖಂಡ, ತೆಲಂಗಾಣ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ನಡೆದು ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಘೋಷಿಸಿದ್ದವು. ಇಂದು ಕೂಡ ಕರ್ನಾಟಕದ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್ ನಡೆಯುತ್ತಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟ ನಿರತ ರೈತರು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಮತ ನೀಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಮೇ 02ಕ್ಕೆ ಫಲಿತಾಂಶ ಘೋಷಣೆಯಾಗಲಿದ್ದು ನಂತರ ರೈತ ಹೋರಾಟ ಮತ್ತೆ ದೇಶದ ಗಮನಸೆಳೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...