Homeಅಂತರಾಷ್ಟ್ರೀಯಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಬ್ಯಾಂಕಾಕ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ ಪ್ರಬಲ ಭೂಕಂಪದಿಂದ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾನ್ಮಾರ್‌ನಲ್ಲಿ ಕೇಂದ್ರಿತವಾಗಿರುವ 7.7 ತೀವ್ರತೆಯ ಪ್ರಬಲ ಭೂಕಂಪದ ನಂತರ ಥಾಯ್ ರಾಜಧಾನಿಯ ಉತ್ತರದಲ್ಲಿದ್ದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ಧರಾಶಾಹಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯ ಪ್ರದೇಶದಲ್ಲಿ ಕೇಂದ್ರಿತವಾಗಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದೆ.

ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಕಂಪನ

ಎಎಫ್‌ಪಿ ಪತ್ರಕರ್ತರ ಪ್ರಕಾರ, ಭೂಕಂಪದ ನಂತರ ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳ ಛಾವಣಿ ತುಂಡುಗಳು ರಸ್ತೆಯಲ್ಲಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ನೇಪಿಡಾವ್‌ 20 ಪಥಗಳ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ಯೋಜಿತವಾಗಿ ನಿರ್ಮಿಸಿದ ನಗರವಾಗಿದೆ.

ಭೂಕಂಪ ಸಂಭವಿಸಿ ಕಟ್ಟಡಗಳು ನಡುಗಲು ಪ್ರಾರಂಭಿಸಿದಾಗ ಪತ್ರಕರ್ತರ ತಂಡ ನೇಪಿಡಾವ್‌ನಲ್ಲಿರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿತ್ತು.

ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿ ಹೋಗುತ್ತಿದ್ದಂತೆ ಸೀಲಿಂಗ್‌ನಿಂದ ಛಾವಣಿ ತುಂಡುಗಳು ಬಿದ್ದವು ಮತ್ತು ಗೋಡೆಗಳು ಬಿರುಕು ಬಿಟ್ಟವು. ಈ ವೇಳೆ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು. ಇನ್ನು ಕೆಲವರು ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ಮೊಬೈಲ್ ಫೋನ್‌ಗಳನ್ನು ಎತ್ತಿಕೊಂಡರು ಎಂದು ಪತ್ರಕರ್ತರ ತಂಡ ಭೂಕಂಪದ ಸಂದರ್ಭವನ್ನು ವಿವರಿಸಿದೆ.

ಮ್ಯಾನ್ಮಾರ್‌ನಲ್ಲಿ ಸುಮಾರು ಅರ್ಧ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಭೂಕಂಪದ ನಂತರ ಸಾವು ನೋವುಗಳ ಬಗ್ಗೆ ತಕ್ಷಣಕ್ಕೆ ಖಚಿತ ವರದಿಗಳು ಬಂದಿಲ್ಲ. ಆದರೆ, ಉತ್ತರ ಥೈಲ್ಯಾಂಡ್‌ನ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ನಲ್ಲಿ ಭೂಕಂಪದಿಂದ ಜನರು ಭಯಭೀತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಟ್ಟಡಗಳಿಗೆ ಹಾನಿ

ಭೂಕಂಪದಿಂದಾಗಿ ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ಅಲ್ಲಿನ ನಗರಗಳಲ್ಲಿ ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲೂ ಶುಕ್ರವಾರ ಕಂಪನದ ಅನುಭವವಾಗಿದೆ ಎಂದು ಬೀಜಿಂಗ್‌ನ ಭೂಕಂಪನ ಸಂಸ್ಥೆ ತಿಳಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.9 ರಷ್ಟಿತ್ತು ಎಂದು ಅದು ಹೇಳಿದೆ.

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...