Homeಅಂತರಾಷ್ಟ್ರೀಯಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಬ್ಯಾಂಕಾಕ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ ಪ್ರಬಲ ಭೂಕಂಪದಿಂದ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾನ್ಮಾರ್‌ನಲ್ಲಿ ಕೇಂದ್ರಿತವಾಗಿರುವ 7.7 ತೀವ್ರತೆಯ ಪ್ರಬಲ ಭೂಕಂಪದ ನಂತರ ಥಾಯ್ ರಾಜಧಾನಿಯ ಉತ್ತರದಲ್ಲಿದ್ದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ಧರಾಶಾಹಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯ ಪ್ರದೇಶದಲ್ಲಿ ಕೇಂದ್ರಿತವಾಗಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದೆ.

ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಕಂಪನ

ಎಎಫ್‌ಪಿ ಪತ್ರಕರ್ತರ ಪ್ರಕಾರ, ಭೂಕಂಪದ ನಂತರ ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳ ಛಾವಣಿ ತುಂಡುಗಳು ರಸ್ತೆಯಲ್ಲಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ನೇಪಿಡಾವ್‌ 20 ಪಥಗಳ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ಯೋಜಿತವಾಗಿ ನಿರ್ಮಿಸಿದ ನಗರವಾಗಿದೆ.

ಭೂಕಂಪ ಸಂಭವಿಸಿ ಕಟ್ಟಡಗಳು ನಡುಗಲು ಪ್ರಾರಂಭಿಸಿದಾಗ ಪತ್ರಕರ್ತರ ತಂಡ ನೇಪಿಡಾವ್‌ನಲ್ಲಿರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿತ್ತು.

ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿ ಹೋಗುತ್ತಿದ್ದಂತೆ ಸೀಲಿಂಗ್‌ನಿಂದ ಛಾವಣಿ ತುಂಡುಗಳು ಬಿದ್ದವು ಮತ್ತು ಗೋಡೆಗಳು ಬಿರುಕು ಬಿಟ್ಟವು. ಈ ವೇಳೆ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು. ಇನ್ನು ಕೆಲವರು ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ಮೊಬೈಲ್ ಫೋನ್‌ಗಳನ್ನು ಎತ್ತಿಕೊಂಡರು ಎಂದು ಪತ್ರಕರ್ತರ ತಂಡ ಭೂಕಂಪದ ಸಂದರ್ಭವನ್ನು ವಿವರಿಸಿದೆ.

ಮ್ಯಾನ್ಮಾರ್‌ನಲ್ಲಿ ಸುಮಾರು ಅರ್ಧ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಭೂಕಂಪದ ನಂತರ ಸಾವು ನೋವುಗಳ ಬಗ್ಗೆ ತಕ್ಷಣಕ್ಕೆ ಖಚಿತ ವರದಿಗಳು ಬಂದಿಲ್ಲ. ಆದರೆ, ಉತ್ತರ ಥೈಲ್ಯಾಂಡ್‌ನ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ನಲ್ಲಿ ಭೂಕಂಪದಿಂದ ಜನರು ಭಯಭೀತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಟ್ಟಡಗಳಿಗೆ ಹಾನಿ

ಭೂಕಂಪದಿಂದಾಗಿ ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ಅಲ್ಲಿನ ನಗರಗಳಲ್ಲಿ ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲೂ ಶುಕ್ರವಾರ ಕಂಪನದ ಅನುಭವವಾಗಿದೆ ಎಂದು ಬೀಜಿಂಗ್‌ನ ಭೂಕಂಪನ ಸಂಸ್ಥೆ ತಿಳಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.9 ರಷ್ಟಿತ್ತು ಎಂದು ಅದು ಹೇಳಿದೆ.

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...