Homeಅಂತರಾಷ್ಟ್ರೀಯಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಬ್ಯಾಂಕಾಕ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ ಪ್ರಬಲ ಭೂಕಂಪದಿಂದ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾನ್ಮಾರ್‌ನಲ್ಲಿ ಕೇಂದ್ರಿತವಾಗಿರುವ 7.7 ತೀವ್ರತೆಯ ಪ್ರಬಲ ಭೂಕಂಪದ ನಂತರ ಥಾಯ್ ರಾಜಧಾನಿಯ ಉತ್ತರದಲ್ಲಿದ್ದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ಧರಾಶಾಹಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯ ಪ್ರದೇಶದಲ್ಲಿ ಕೇಂದ್ರಿತವಾಗಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದೆ.

ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಕಂಪನ

ಎಎಫ್‌ಪಿ ಪತ್ರಕರ್ತರ ಪ್ರಕಾರ, ಭೂಕಂಪದ ನಂತರ ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳ ಛಾವಣಿ ತುಂಡುಗಳು ರಸ್ತೆಯಲ್ಲಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ನೇಪಿಡಾವ್‌ 20 ಪಥಗಳ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ಯೋಜಿತವಾಗಿ ನಿರ್ಮಿಸಿದ ನಗರವಾಗಿದೆ.

ಭೂಕಂಪ ಸಂಭವಿಸಿ ಕಟ್ಟಡಗಳು ನಡುಗಲು ಪ್ರಾರಂಭಿಸಿದಾಗ ಪತ್ರಕರ್ತರ ತಂಡ ನೇಪಿಡಾವ್‌ನಲ್ಲಿರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿತ್ತು.

ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿ ಹೋಗುತ್ತಿದ್ದಂತೆ ಸೀಲಿಂಗ್‌ನಿಂದ ಛಾವಣಿ ತುಂಡುಗಳು ಬಿದ್ದವು ಮತ್ತು ಗೋಡೆಗಳು ಬಿರುಕು ಬಿಟ್ಟವು. ಈ ವೇಳೆ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು. ಇನ್ನು ಕೆಲವರು ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ಮೊಬೈಲ್ ಫೋನ್‌ಗಳನ್ನು ಎತ್ತಿಕೊಂಡರು ಎಂದು ಪತ್ರಕರ್ತರ ತಂಡ ಭೂಕಂಪದ ಸಂದರ್ಭವನ್ನು ವಿವರಿಸಿದೆ.

ಮ್ಯಾನ್ಮಾರ್‌ನಲ್ಲಿ ಸುಮಾರು ಅರ್ಧ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಭೂಕಂಪದ ನಂತರ ಸಾವು ನೋವುಗಳ ಬಗ್ಗೆ ತಕ್ಷಣಕ್ಕೆ ಖಚಿತ ವರದಿಗಳು ಬಂದಿಲ್ಲ. ಆದರೆ, ಉತ್ತರ ಥೈಲ್ಯಾಂಡ್‌ನ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ನಲ್ಲಿ ಭೂಕಂಪದಿಂದ ಜನರು ಭಯಭೀತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಟ್ಟಡಗಳಿಗೆ ಹಾನಿ

ಭೂಕಂಪದಿಂದಾಗಿ ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ಅಲ್ಲಿನ ನಗರಗಳಲ್ಲಿ ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲೂ ಶುಕ್ರವಾರ ಕಂಪನದ ಅನುಭವವಾಗಿದೆ ಎಂದು ಬೀಜಿಂಗ್‌ನ ಭೂಕಂಪನ ಸಂಸ್ಥೆ ತಿಳಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.9 ರಷ್ಟಿತ್ತು ಎಂದು ಅದು ಹೇಳಿದೆ.

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...