Homeಅಂತರಾಷ್ಟ್ರೀಯಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

- Advertisement -
- Advertisement -

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ ಪರಿಣಾಮ ಕಂಡು ಬಂದಿದೆ.

ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಕಟ್ಟಡಗಳಿಂದ ಹೊರಗೆ ಬಂಧಿದ್ದಾರೆ. ಭಾರತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬಾಂಗ್ಲಾದೇಶ ಹವಾಮಾನ ಇಲಾಖೆ ಮತ್ತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಭೂಕಂಪದ ತೀವ್ರತೆಯನ್ನು 5.7 ಎಂದು ಅಂದಾಜಿಸಿದೆ. ಆದರೆ, ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) 5.5 ತೀವ್ರತೆ ಗುರುತಿಸಿದೆ.

ಭೂಕಂಪದ ಕೇಂದ್ರಬಿಂದುವು ಢಾಕಾದಿಂದ ಸುಮಾರು 40 ಕಿಮೀ (25 ಮೈಲುಗಳು) ಪೂರ್ವಕ್ಕೆ ನರಸಿಂಗಡಿ ನಗರದ ಪತ್ತೆಯಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.

ಭೂಕಂಪದ ಕೇಂದ್ರ ಬಿಂದು ಬಾಂಗ್ಲಾದೇಶದ ನರಸಿಂಗಡಿಯಲ್ಲಿ ಪತ್ತೆಯಾಗಿದೆ ಅಂದರೆ, ಢಾಕಾದಿಂದ 10 ಕಿ.ಮೀ ಪೂರ್ವ-ಆಗ್ನೇಯ (ಇಎಸ್‌ಇ) ದೂರ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ಕಂಡು ಬಂದಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಭೂಕಂಪದಿಂದ ಜನರು ಭೀತಿಗೊಳಗಾಗಿದ್ದಾರೆ ಎಂದು ಭಾರತದ ವರದಿಗಳು ಹೇಳಿವೆ.

ಬಾಂಗ್ಲಾದೇಶದ ಬಂದ ಆರಂಭಿಕ ವರದಿಗಳು ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರೆ, ಢಾಕಾ ಮೂಲದ ಡಿಬಿಸಿ ಟೆಲಿವಿಷನ್ ಢಾಕಾದಲ್ಲಿ ಮಾತ್ರ ಆರು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಕಟ್ಟಡದ ಛಾವಣಿ ಮತ್ತು ಗೋಡೆಯ ಭಾಗಗಳು ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಪಾದಚಾರಿಗಳು ತಡೆಗೋಡೆ ಮೈಮೇಲೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಹೇಳಿದೆ.

ಢಾಕಾದಾದ್ಯಂತ ಸಂಭವಿಸಿದ ದುರ್ಘಟನೆಗಳಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಭೂಕಂಪದ ಸಮಯದಲ್ಲಿ ಕಟ್ಟಡಗಳು ತೀವ್ರವಾಗಿ ಕಂಪಿಸಿವೆ. ಜನರು ಮನೆ ಕಚೇರಿಗಳು ಮತ್ತು ಬಹುಮಹಡಿ ಕಟ್ಟಡಗಳಿಂದ ಹೊರಗೆ ಓಡಿಬಂದು, ಬಯಲು ಪ್ರದೇಶಗಳಲ್ಲಿ ಜಮಾಯಿಸಿದ್ದಾರೆ ಎಂದು ವರದಿ ವಿವರಿಸಿದೆ.

ಭಾರತ ಮತ್ತು ಯುರೇಷಿಯಾ ಟೆಕ್ಟೋನಿಕ್ ಪ್ಲೇಟ್‌ಗಳ ಡಿಕ್ಕಿಯಿಂದಾಗಿ ಉತ್ತರ ಮತ್ತು ಆಗ್ನೇಯ ಬಾಂಗ್ಲಾದೇಶಗಳನ್ನು ಭೂಕಂಪ ಪೀಡಿತ ವಲಯಗಳೆಂದು ಗುರುತಿಸಲಾಗಿದೆ. ಶುಕ್ರವಾರದ ಭೂಕಂಪ ಸಂಭವಿಸಿದ ಸೆಂಟ್ರಲ್ ರೀಜನ್ ಸಾಮಾನ್ಯವಾಗಿ ಕಡಿಮೆ ಭೂಕಂಪ ಸಂಭವಿಸುವ ಪ್ರದೇಶ ಯುಎಸ್‌ಜಿಎಸ್‌ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ...

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

'ಉಳುವವರಿಗೆ ಭೂಮಿ' ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ...

ದುಬೈ ಏರ್‌ಶೋನಲ್ಲಿ ಭಾರತದ ತೇಜಸ್‌ ಯುದ್ಧವಿಮಾನ ಪತನ ; ಪೈಲಟ್‌ ಸಾವು

ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ...

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ'...

ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸಲು ಸಮಯ ಮಿತಿ ನಿಗದಿ ಮಾಡುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ: ಸ್ಟಾಲಿನ್ 

ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಸಮಯ ಮಿತಿಯನ್ನು ನಿಗದಿಪಡಿಸಲು ಸಂವಿಧಾನದ 200ನೇ ವಿಧಿಗೆ ತಿದ್ದುಪಡಿ ತರಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಆಗ್ರಹಿಸಿದ್ದಾರೆ.  ರಾಷ್ಟ್ರಪತಿಗಳ ಉಲ್ಲೇಖಕ್ಕೆ ಉತ್ತರಿಸುವಾಗ ಸುಪ್ರೀಂ ಕೋರ್ಟ್‌ನ...

ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕೊಲೆಯತ್ನ ಆರೋಪದ ಮೇಲೆ ಕಲಬುರಗಿಯ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಅಫಜಲಪುರ ತಾಲೂಕಿನ ಶಿರವಾಳ ಸಮೀಪ ಗುರುವಾರ (ನವೆಂಬರ್ 20) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ನಾಟಿ ಔಷಧಿ...

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ...

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ...

‘ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.  ಸುಪ್ರೀಂ ಕೋರ್ಟ್‌ನ ಕೋರ್ಟ್ ನಲ್ಲಿ,  ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್...