Homeಅಂತರಾಷ್ಟ್ರೀಯಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

- Advertisement -
- Advertisement -

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ ಪರಿಣಾಮ ಕಂಡು ಬಂದಿದೆ.

ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಕಟ್ಟಡಗಳಿಂದ ಹೊರಗೆ ಬಂಧಿದ್ದಾರೆ. ಭಾರತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬಾಂಗ್ಲಾದೇಶ ಹವಾಮಾನ ಇಲಾಖೆ ಮತ್ತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಭೂಕಂಪದ ತೀವ್ರತೆಯನ್ನು 5.7 ಎಂದು ಅಂದಾಜಿಸಿದೆ. ಆದರೆ, ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) 5.5 ತೀವ್ರತೆ ಗುರುತಿಸಿದೆ.

ಭೂಕಂಪದ ಕೇಂದ್ರಬಿಂದುವು ಢಾಕಾದಿಂದ ಸುಮಾರು 40 ಕಿಮೀ (25 ಮೈಲುಗಳು) ಪೂರ್ವಕ್ಕೆ ನರಸಿಂಗಡಿ ನಗರದ ಪತ್ತೆಯಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.

ಭೂಕಂಪದ ಕೇಂದ್ರ ಬಿಂದು ಬಾಂಗ್ಲಾದೇಶದ ನರಸಿಂಗಡಿಯಲ್ಲಿ ಪತ್ತೆಯಾಗಿದೆ ಅಂದರೆ, ಢಾಕಾದಿಂದ 10 ಕಿ.ಮೀ ಪೂರ್ವ-ಆಗ್ನೇಯ (ಇಎಸ್‌ಇ) ದೂರ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ಕಂಡು ಬಂದಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಭೂಕಂಪದಿಂದ ಜನರು ಭೀತಿಗೊಳಗಾಗಿದ್ದಾರೆ ಎಂದು ಭಾರತದ ವರದಿಗಳು ಹೇಳಿವೆ.

ಬಾಂಗ್ಲಾದೇಶದ ಬಂದ ಆರಂಭಿಕ ವರದಿಗಳು ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರೆ, ಢಾಕಾ ಮೂಲದ ಡಿಬಿಸಿ ಟೆಲಿವಿಷನ್ ಢಾಕಾದಲ್ಲಿ ಮಾತ್ರ ಆರು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಕಟ್ಟಡದ ಛಾವಣಿ ಮತ್ತು ಗೋಡೆಯ ಭಾಗಗಳು ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಪಾದಚಾರಿಗಳು ತಡೆಗೋಡೆ ಮೈಮೇಲೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಹೇಳಿದೆ.

ಢಾಕಾದಾದ್ಯಂತ ಸಂಭವಿಸಿದ ದುರ್ಘಟನೆಗಳಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಭೂಕಂಪದ ಸಮಯದಲ್ಲಿ ಕಟ್ಟಡಗಳು ತೀವ್ರವಾಗಿ ಕಂಪಿಸಿವೆ. ಜನರು ಮನೆ ಕಚೇರಿಗಳು ಮತ್ತು ಬಹುಮಹಡಿ ಕಟ್ಟಡಗಳಿಂದ ಹೊರಗೆ ಓಡಿಬಂದು, ಬಯಲು ಪ್ರದೇಶಗಳಲ್ಲಿ ಜಮಾಯಿಸಿದ್ದಾರೆ ಎಂದು ವರದಿ ವಿವರಿಸಿದೆ.

ಭಾರತ ಮತ್ತು ಯುರೇಷಿಯಾ ಟೆಕ್ಟೋನಿಕ್ ಪ್ಲೇಟ್‌ಗಳ ಡಿಕ್ಕಿಯಿಂದಾಗಿ ಉತ್ತರ ಮತ್ತು ಆಗ್ನೇಯ ಬಾಂಗ್ಲಾದೇಶಗಳನ್ನು ಭೂಕಂಪ ಪೀಡಿತ ವಲಯಗಳೆಂದು ಗುರುತಿಸಲಾಗಿದೆ. ಶುಕ್ರವಾರದ ಭೂಕಂಪ ಸಂಭವಿಸಿದ ಸೆಂಟ್ರಲ್ ರೀಜನ್ ಸಾಮಾನ್ಯವಾಗಿ ಕಡಿಮೆ ಭೂಕಂಪ ಸಂಭವಿಸುವ ಪ್ರದೇಶ ಯುಎಸ್‌ಜಿಎಸ್‌ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...