Homeಕರ್ನಾಟಕರೈತರಿಂದ ತೀವ್ರ ವಿರೋಧ | ಕಾವೇರಿ 'ಆರತಿ' ಕಾಮಗಾರಿ ಸ್ಥಗಿತ

ರೈತರಿಂದ ತೀವ್ರ ವಿರೋಧ | ಕಾವೇರಿ ‘ಆರತಿ’ ಕಾಮಗಾರಿ ಸ್ಥಗಿತ

- Advertisement -
- Advertisement -

ರಾಜ್ಯದ ಕಾಂಗ್ರೆಸ್ ಸರ್ಕಾರದ ಉದ್ದೇಶಿತ ಕಾವೇರಿ ‘ಆರತಿ’ ಯೋಜನೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದರಿಂದ, ಕೆಆರ್‌ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನದ ದೋಣಿ ವಿಹಾರ ಕ್ರೀಡಾಂಗಣದಲ್ಲಿ ಪ್ರಾರಂಭಿಸಲಾಗಿದ್ದ ಕಾಮಗಾರಿಗಳು ಮಂಗಳವಾರ ಸ್ಥಗಿತಗೊಂಡಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ರೈತರಿಂದ ತೀವ್ರ ವಿರೋಧ

‘ಸೋಪಾನಕಟ್ಟೆ’ ನಿರ್ಮಾಣದ ಕಾಮಗಾರಿಯನ್ನು ಸುಮಾರು ಮೂರು ದಿನಗಳ ಹಿಂದೆ ಪ್ರಾರಂಭಿಸಲಾಗಿತ್ತು ಮತ್ತು ಮಣ್ಣು ಸುರಿದು ಸ್ಥಳವನ್ನು ಸಮತಟ್ಟು ಮಾಡಲಾಯಿತು. ಆದಾಗ್ಯೂ, ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಯಿತ್ತು. ಜೂನ್ 11 ರಂದು ಕೆಆರ್‌ಎಸ್ ಅಣೆಕಟ್ಟು ಬಳಿ ರೈತರು ಈ ಸಂಬಂಧ ಸಭೆ ನಡೆಸಲು ನಿರ್ಧರಿಸಲಾಗಿದ್ದರಿಂದ, ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ರೈತರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದು, ಜೂನ್ 6 ರಂದು ಮಂಡ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಜಯಂತ್ ತಿಳಿಸಿದ್ದಾರೆ.

ರೈತರು ಯೋಜನೆಯನ್ನು ವಿರೋಧಿಸಿದ್ದರಿಂದ, ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಅಧಿಕಾರಿಗಳು ಮೌಖಿಕ ಆದೇಶಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತಾವಿತ ಮನೋರಂಜನಾ ಉದ್ಯಾನವನ ಮತ್ತು ಕಾವೇರಿ ಆರತಿ ಯೋಜನೆ ಎರಡಕ್ಕೂ ತೀವ್ರ ವಿರೋಧ ವ್ಯಕ್ತಪಡಿಸಿದ ರೈತ ಮುಖಂಡರು ಮತ್ತು ಪ್ರಗತಿಪರ ಸಂಘಟನೆಗಳ ಸದಸ್ಯರು ಬುಧವಾರ ಅಣೆಕಟ್ಟಿನ ಬಳಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು.

ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಯೋಜಿತ ಪ್ರದರ್ಶನದ ಕುರಿತು ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳೊಂದಿಗೆ ವಿವರವಾದ ಚರ್ಚೆ ನಡೆಸಿದರು. ಪ್ರತಿಭಟನೆಯ ನಿರೀಕ್ಷೆಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಅದಾಗ್ಯೂ, ರೈತರ ವಿರೋಧದ ಹೊರತಾಗಿಯೂ, ಮಂಡ್ಯ ಶಾಸಕ ರವಿಕುಮಾರ್ ಕೆಆರ್‌ಎಸ್ ಅಣೆಕಟ್ಟಿನಲ್ಲಿ ಪ್ರಸ್ತಾವಿತ ಕಾವೇರಿ ಆರತಿ ಮತ್ತು ಮನೋರಂಜನಾ ಉದ್ಯಾನವನ ಯೋಜನೆಯನ್ನು ಸಮರ್ಥಿಸಿಕೊಂಡಕಿದ್ದು, ಇದು ಜಿಲ್ಲೆಯ ಅಭಿವೃದ್ಧಿ ಮತ್ತು ಉದ್ಯೋಗದ ಮಹತ್ವದ ಮೂಲಕ್ಕೆ ಒಂದು ಪ್ರಮುಖ ಹೆಜ್ಜೆ ಎಂದು ಬಣ್ಣಿಸಿದ್ದಾರೆ ಎಂದು ವರದಿ ಹೇಳಿದೆ. ಅಣೆಕಟ್ಟಿನ ಸುರಕ್ಷತೆಯ ಬಗ್ಗೆ ರೈತ ಸಂಘಟನೆಗಳು ಎತ್ತಿರುವ ಕಳವಳಗಳನ್ನು ಆಧಾರರಹಿತವೆಂದು ತಳ್ಳಿಹಾಕಿದ್ದಾರೆ.

ಯೋಜನೆಗೆ 100 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದಕ್ಕಾಗಿ ರೈತ ಸಂಘಟನೆಗಳು ಸರ್ಕಾರವನ್ನು ಟೀಕಿಸಿದ್ದು, ಕೇವಲ 20 ಕೋಟಿ ರೂ.ಗಳಿಗೆ ಯೋಜನೆಯನ್ನು ಪೂರ್ಣಗೊಳಿಸಬಹುದು ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ಹೇಳಿದೆ.

ಈ ಆರೋಪವನ್ನು ಕೂಡಾ ಶಾಸಕ ರವಿಕುಮಾರ್ ನಿರಾಕರಿಸಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ವೆಚ್ಚವನ್ನು ಸಮರ್ಥಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. “ನೀವು ಕೇವಲ 100 ಕೋಟಿ ರೂ.ಗಳನ್ನು ಗಾಳಿಯಿಂದ ಹೊರತೆಗೆಯಲು ಸಾಧ್ಯವಿಲ್ಲ. ಡಿಪಿಆರ್ ಪ್ರತಿ ರೂಪಾಯಿಯನ್ನು ಹೇಗೆ ಖರ್ಚು ಮಾಡುತ್ತದೆ ಎಂಬುದನ್ನು ವಿವರಿಸುತ್ತದೆ.” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -