Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...