Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...