Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...