Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...