Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...