Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...