Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...