Homeಮುಖಪುಟಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

ಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

- Advertisement -
- Advertisement -

| ರಾಜಶೇಖರ್ ಅಕ್ಕಿ |

ಎರಡು ವಾರಗಳ ಹಿಂದೆ ಸಿನೆಮಾ ಮತ್ತು ಸ್ಟ್ರಕ್ಚರ್ ಬಗ್ಗೆ ಬರೆದಿದ್ದೆ. ಇಂದು ಸಂಘರ್ಷದ ಬಗ್ಗೆ ಬರೆಯಲು ಪ್ರಯತ್ನಿಸುವೆ.
ಇತರ ಕಲಾ ಮಾಧ್ಯಮಗಳನ್ನು ಹೋಲಿಸಿದರೆ ಸಿನೆಮಾಗೆ ತನ್ನದೇ ಆದ ಸಾಧ್ಯತೆಗಳೊಂದಿಗೆ ಇತಿಮಿತಿಗಳೂ ಇವೆ. ಸಿನೆಮಾದಲ್ಲಿ ಒಂದು ನೇರ ಕಥೆ ಇರಲೇಬೇಕು. ಒಬ್ಬ ಮುಖ್ಯ ಪಾತ್ರವನ್ನು ಗುರುತಿಸಲೇಬೇಕು,(ಇದಕ್ಕೆ ಕೆಲವು ಶ್ರೇಷ್ಠ ಅಪವಾದಗಳು ಖಂಡಿತ ಇವೆ.) ಆ ಮುಖ್ಯ ಪಾತ್ರಕ್ಕೆ ಕೆಲವು ಗುರಿಗಳಿರಬೇಕು, ಆ ಗುರಿಗಳಿಗೆ ತದ್ವಿರುದ್ಧವಾಗಿ ಕೆಲವು ಶಕ್ತಿಗಳಿರಬೇಕು. ಆಗ ಉಂಟಾಗುವುದು ಸಂಘರ್ಷ.

ಸಂಘರ್ಷವೇ ಒಂದು ಸಿನೆಮಾದ ಜೀವಾಳ. ಸಂಘರ್ಷ ತಪ್ಪಿದ ತಕ್ಷಣ ಆ ಸಿನೆಮಾ ಬಿದ್ದುಹೋಗುತ್ತದೆ. ನಮ್ಮಲ್ಲಿ ಅನೇಕ ಬರಹಗಾರರು ‘ಒಳ್ಳೆಯ’ ಕಥೆಗಳನ್ನು, ‘ಒಳ್ಳೆಯ’ ಸೀನ್‍ಗಳನ್ನು ಬರೆದು ಒಳ್ಳೆಯ ಪಾತ್ರಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಒಳ್ಳೆಯ ಹಾಸ್ಯ, ಭಾವನೆ, ಒಳ್ಳೆಯ ವಿಚಾರಗಳನ್ನೂ ಹೇಳಲು ಪ್ರಯತ್ನಿಸುತ್ತಾರೆ. ಆದರೆ ಆ ಎಲ್ಲ ‘ಒಳ್ಳೆಯ’ಗಳು ಸಂಘರ್ಷದ ವ್ಯಾಪ್ತಿಯಲ್ಲಿ ಬಂದಾಗ ಮಾತ್ರ ಕೆಲಸ ಮಾಡುತ್ತವೆ ಇಲ್ಲವಾದರೆ ಅವುಗಳು ಒಳ್ಳೆಯ ಸೀನ್‍ಗಳಾಗೇ ಉಳಿದು ಚಿತ್ರಕ್ಕೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಒಂದು ಕಾದಂಬರಿಯಲ್ಲಿ ಪಾತ್ರದ, ಆ ಪಾತ್ರಗಳು ಜೀವಿಸುತ್ತಿರುವ ಸಮಾಜದ ಬಗ್ಗೆ ನೂರಾರು ಪುಟಗಳನ್ನು ಬರೆಯಬಹುದು; ಆ ಪಾತ್ರದ ತಲೆಯೊಳಗೆ ಹೊಕ್ಕಿ ಅಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ, ಕನಸು, ನಿರಾಶೆಗಳ ಬಗ್ಗೆಯೂ ಬರೆಯಬಹುದು. ಆದರೆ ಸಿನೆಮಾಗೆ ಆ ಸ್ವಾತಂತ್ರವಿಲ್ಲ. ಇದು ಸಿನೆಮಾದ ಒಂದು ಮಿತಿ. ಈ ಮಿತಿಗಳನ್ನು ಮೀರುತ್ತ, ಆ ತಲ್ಲಣಗಳನ್ನು ದೃಶ್ಯರೂಪಕ್ಕೆ ತರುವಲ್ಲಿ ಅನೇಕ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಆದರೂ ಅಲ್ಲೊಂದು ಸಂಘರ್ಷ ಅತಿಗಿರುತ್ತದೆ.

ಇನ್ನು ಸಂಘರ್ಷಗಳ ಸ್ವರೂಪಗಳನ್ನು ನೋಡುವ. ಮೊದಲನೇಯದು, ನಮಗೆ ಹೆಚ್ಚಾಗಿ ಕಾಣಿಸುವ ಸಂಘರ್ಷವಾದ ಬಾಹ್ಯ ಕಾರಣಗಳಿಂದ ಉಂಟಾಗುವ ಸಂಘರ್ಷ. ಅಂದರೆ, ನಮ್ಮ ನಾಯಕ/ಕಿ ಏನೋ ಗುರಿಯಿಟ್ಟುಕೊಂಡು ಹೋಗುತ್ತಿರುವಾಗ ಆ ಗುರಿಗೆ ಅಡ್ಡಬರುವ ಅಡೆತಡೆಗಳು ಮೂಲತಃವಾಗಿ ಆ ನಾಯಕಿಯ ಪಾತ್ರದ ಹೊರಗಿರುತ್ತವೆ. ಉದಾಹರಣೆಗೆ, ಆ ಹುಡುಗ ತನಗಿಷ್ಟವಾದ ಹುಡುಗಿಯೊಂದಿಗೆ ಮದುವೆ ಮಾಡಿಕೊಳ್ಳುವ ಗುರಿಯನ್ನಿಟ್ಟುಕೊಂಡಿರುವಾಗ ಅದಕ್ಕೆ ಹುಡುಗಿಯ ಅಪ್ಪ ವಿರೋಧ ಒಡ್ಡುತ್ತಾನೆ; ಒಂದು ಹಳ್ಳಿಯಲ್ಲಿ ನಾಯಕಿ ಬಡ ಮಕ್ಕಳ ಸಲುವಾಗಿ ಒಂದು ಶಾಲೆಯನ್ನು ಪ್ರಾರಂಭಿಸುವ ಗುರಿಯನ್ನಿಟ್ಟುಕೊಂಡಿದ್ದಾಳೆ ಆದರೆ ಅಲ್ಲಿ ಖಾಸಗಿ ಶಾಲೆಯನ್ನು ನಡೆಸುವ ಪಟ್ಟಭದ್ರ ಹಿತಾಸಕ್ತಿಗಳು ಇವಳು ಶಾಲೆ ಪ್ರಾರಂಭಿಸಲು ಬಿಡುವುದಿಲ್ಲ.

ಈಗ ಈ ಪ್ರಮುಖ ಪಾತ್ರಧಾರಿಗಳು ತಮ್ಮ ಎದುರಿನ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವುದೇ ಸಂಘರ್ಷ. ಇಲ್ಲಿ ಜೀವನದಲ್ಲಿ ಪ್ರೀತಿ ಎನ್ನುವುದು ಎಷ್ಟು ಮುಖ್ಯ ಅಥವಾ ಬಡಮಕ್ಕಳಿಗಾಗಿ ಶಾಲೆಗಳನ್ನು ಪ್ರಾರಂಭಿಸುವುದು ಎಷ್ಟು ಒಳ್ಳೆಯ ಕೆಲಸ ಎನ್ನುವುದರ ಬಗ್ಗೆ ಲೆಕ್ಷರ್ ಕೊಡಲು ಅವಕಾಶವಿರುವುದಿಲ್ಲ. ಆಯಾ ಸಂಘರ್ಷಗಳ ವ್ಯಾಪ್ತಿಯಲ್ಲೇ ಈ ಸಂಗತಿಗಳು ಹೊರಬರಬೇಕು.

1998 ರಲ್ಲಿ ತೆರೆಕಂಡ ಸತ್ಯಾ ಚಿತ್ರದಲ್ಲಿ ಒಂದು ಪಾತ್ರ ಜೋಕ್ ಹೇಳುವ ಸನ್ನಿವೇಶವಿದೆ. ಒಂದು ಕನ್‍ಸ್ಟ್ರಕ್ಷನ್ ಆಗುತ್ತಿರುವ ಕಟ್ಟಡದಲ್ಲಿ ಕುಳಿತಾಗ ಸ್ನೇಹಲ್ ದಾಬಿಯ ಪಾತ್ರ ಒಂದು ತರಲೆ ಜೋಕ್ ಹೇಳಲಾರಂಭಿಸುತ್ತಾನೆ. ಆ ಜೋಕ್‍ಗೆ ಪ್ರೇಕ್ಷಕರು ನಗಬೇಕು ಎನ್ನುವಷ್ಟರಲ್ಲಿ ಗುಂಡಿನ ಸುರಿಮಳೆಯಾಗಿ ಅಲ್ಲಿಯ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಆ ಸೀನ್ ಜೋಕ್ ಹೇಳಲಂತೂ ಇದ್ದೇ ಇಲ್ಲ, ಜೋಕ್ ಮುಂದುವರೆಯುತ್ತಿದ್ದಾಗಲೂ ಏನೋ ಆಗುವುದು ಎನ್ನುವ ಭಾವನೆ ಗಟ್ಟಿಗೊಳ್ಳುತ್ತಲಿರುತ್ತದೆ. ಗಟ್ಟಿಯಾದ ಸ್ಟ್ರಕ್ಷರ್ ಮತ್ತು ಸಂಘರ್ಷವನ್ನಿಟ್ಟುಕೊಂಡೇ ಲಘು ಸನ್ನಿವೇಶಗಳನ್ನೂ ತೋರಿಸುವುದಕ್ಕೆ ಸತ್ಯಾ ಸಿನೆಮಾ ಒಳ್ಳೆಯ ಉದಾಹರಣೆ.

ಎರಡನೇಯದ್ದು ಆಂತರಿಕ ಸಂಘರ್ಷ. ಒಬ್ಬ ವ್ಯಕ್ತಿಗೆ ಬಾಕ್ಸಿಂಗ್ ಚಾಂಪಿಯನ್‍ಷಿಪ್ ಗೆಲ್ಲಬೇಕಿದೆ, ಒಬ್ಬನಿಗೆ ತಾನು ದುರ್ಬಲ ಎನ್ನುವ ಕೀಳರಿಮೆಯಿದೆ, ಇನ್ನೊಬ್ಬನಿಗೆ ತನ್ನನ್ನು ಯಾರೂ ಇಷ್ಟಪಡಲಾರರು ಎನ್ನುವ ಭಾವನೆಯಿದೆ, ಬಾಲ್ಯದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ ಒಬ್ಬ ಬಾಲಕಿಯು ಯಾವುದೇ ಸಂಬಂಧವನ್ನು ನಿಭಾಯಿಸಲು ಅಸಮರ್ಥಳಾಗಿದ್ದಾಳೆ. ಈಗ ಇವುಗಳನ್ನು ಎದುರಿಸಬೇಕಿದೆ. ಇಲ್ಲಿಯ ಆಯಾ ನಾಯಕ/ಕಿಗೆ ಇರುವ ಅಡೆತಡೆಗಳು ತನ್ನೊಳಗೇ ಹುದುಗಿವೆ. ತನ್ನೊಳಗೇ ಹುದುಗಿರುವ ಶತ್ರುವನ್ನು ಎದುರಿಸುವುದನ್ನು ದೃಶ್ಯ ಮಾಧ್ಯಮದಲ್ಲಿ ತೋರಿಸುವುದು ಕಷ್ಟ ಎನಿಸಬಹುದು. ಆದರೆ ಅನಿಸಿದಷ್ಟು ಕಷ್ಟವಲ್ಲ. ಅಲ್ಲಿಯೂ ಬಾಹ್ಯ ಸಂಗತಿಗಳಿವೆ.

ನಾಯಕ/ಕಿಯ ದೈನಂದಿನ ದೈಹಿಕ ಕ್ರಿಯೆಗಳಿಂದಲೇ ಆ ಸಂಘರ್ಷ ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತದೆ. ತನ್ನ ಸಮಸ್ಯೆ ಮತ್ತು ಅದಕ್ಕಿರುವ ಉತ್ತರಗಳೂ ದೈನಂದಿನ ಕ್ರಿಯೆಗಳಿಂದ ಸ್ಪಷ್ಟವಾಗುವ ಹಾಗೆ ಚಿತ್ರಕಥೆಯನ್ನು ಹೆಣೆಯಬೇಕಾಗುತ್ತದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಎರಡೂ ಬಗೆಯ ಸಂಘರ್ಷಗಳು ಎಲ್ಲಾ ಹಂತಗಳಲ್ಲಿ ಪ್ರತ್ಯೇಕವಾಗಿರಬೇಕಿಲ್ಲ. ಬಾಹ್ಯ ಸಂಘರ್ಷದಲ್ಲಿ ಆಂತರಿಕ ಸಂಘರ್ಷವಿದ್ದರೆ, ಆಂತರಿಕ ಸಂಘರ್ಷದ ಕಥೆಗಳಲ್ಲಿ ಬಾಹ್ಯ ಸಂಗತಿಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಚಿತ್ರಕಥೆ ಬರೆಯುವ ರೂಢಿಸಮ್ಮತ ಕಲಿಕೆಯಲ್ಲಿ ನಾಯಕಿ/ಕ ತನ್ನ ಗುರಿಯನ್ನು ತಲುಪಲು ಹರಸಾಹಸ ಪಡುತ್ತಾಳೆ/ನೆ; ಅವಳಿಗೆ ತನ್ನ ಗುರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ; ಚಿತ್ರದಲ್ಲಿ ಆಗುವ ಹೆಚ್ಚಿನ ಘಟನೆಗಳನ್ನು ನಾಯಕಿಯೇ ಮೊದಲು ಮಾಡುತ್ತಾಳೆ ಅದರಿಂದ ಪ್ರೇಕ್ಷಕ ತನ್ನನ್ನು ಆ ನಾಯಕಿಯಲ್ಲಿ ಕಂಡುಕೊಳ್ಳುತ್ತಾನೆ ಎನ್ನುವ ನಂಬಿಕೆ. ಆದರೆ ಇವ್ಯಾವೂ ಅನಿವಾರ್ಯವಲ್ಲ. ಅನೇಕ ಕಥೆಗಳಲ್ಲಿ ನಾಯಕಿಗೆ ತನ್ನ ಗುರಿಯ ಅರಿವು ಇರುವುದಿಲ್ಲ. ಪರಿಸ್ಥಿತಿಯ ಕೂಸು ಆ ನಾಯಕಿ. ಅದರರ್ಥ ಅಲ್ಲಿ ಸಂಘರ್ಷ ತಪ್ಪಿಲ್ಲ.

ತನಗರಿವಿಲ್ಲದೇ ಆ ನಾಯಕಿ ಹೋರಾಟದ ಪಯಣವನ್ನು ಕ್ರಮಿಸುತ್ತಾಳೆ. ಕೆಲವು ಚಿತ್ರಗಳಲ್ಲಿ ನಾಯಕಿಯ ಹೋರಾಟ, ಸಂಘರ್ಷ ಸ್ಪಷ್ಟವಾಗಿ ಕಂಡುಬರುವುದಿಲ್ಲ. ಮತ್ತು ಆ ಸಂಘರ್ಷ ಅವಳದ್ದೇ ಆಗಿರಬೇಕೆನ್ನುವ ನಿಯಮವೂ ಇಲ್ಲ. ಅಲೆಕ್ಸಾಂಡರ್ ಪೇನ್‍ನ ಮೊದಲ ಚಿತ್ರ ಸಿಟಿಝನ್ ರೂತ್‍ನಲ್ಲಿ ನಾಯಕಿ ರೂತ್ ಗರ್ಭಿಣಿ. ರಸ್ತೆಯಲ್ಲಿ ಬದುಕುತ್ತಿರುವ ಅವಳಿಗೆ ಮಗುವನ್ನು ಉಳಿಸಿಕೊಳ್ಳಬೇಕೇ, ಗರ್ಭಪಾತ ಮಾಡಿಸಿಕೊಳ್ಳಬೇಕೇ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. ತನ್ನ ಹೊರಗಿನ ಪರಿಸ್ಥಿತಿ ಬದಲಾದಂತೆ ತನಗೆ ಸೂಕ್ತವೆನಿಸಿದ ಹಾಗೆ ಅವಳು ಪ್ರತಿಕ್ರಿಯಿಸುತ್ತಾಳೆ. ಅಬೌಟ್ ಶ್ಮಿತ್ ಚಿತ್ರದಲ್ಲಿ ನಾಯಕ ಶ್ಮಿತ್ ಈಗ ತಾನೆ ನಿವೃತ್ತಿ ಹೊಂದಿದ್ದಾನೆ. ಮುಂದೇನು ಮಾಡಬೇಕೆನ್ನುವುದು ತಿಳಿಯದು. ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಲೇ ಅವನು ತನ್ನ ಬಗ್ಗೆ ಕಂಡುಕೊಳ್ಳುತ್ತಾನೆ. ಆದರೆ ಅದರಲ್ಲೂ ಸಂಘರ್ಷವಿದೆ.

ಯಾವುದೇ ಸಂಘರ್ಷದಲ್ಲಿ ನಾಯಕಿ ಸರಿ ಎನಿಸುವ ದಾರಿಯಲ್ಲಿದ್ದು, ಆ ನಾಯಕಿಯ ವಿರುದ್ಧದ ಶಕ್ತಿಗಳು ತಪ್ಪಾದ ದಾರಿಯಲ್ಲೇ ಇರಬೇಕು ಎನ್ನುವ ಅನಿವಾರ್ಯವೂ ಇಲ್ಲ. ನಾಯಕಿಯೊಂದಿಗೆ ಅವಳ ಶತ್ರುಗಳೂ ಪರಿಸ್ಥಿತಿಯ ಕೂಸುಗಳೇ. ಆ ಶಕ್ತಿಗಳಿಗೂ ತಮ್ಮದೇ ಆದ ಕಾರಣಗಳಿರುತ್ತವೆ. ಅದೇ ಕಾರಣಕ್ಕೆ ಅನೇಕ ಸಲ ಖಳನಾಯಕರ ಪಾತ್ರಗಳೂ ನಮಗೆ ಇಷ್ಟವಾಗುತ್ತವೆ.
ನಾಯಕಿಯ ಈ ಸಂಘರ್ಷದಲ್ಲಿ ಯಾರು ಗೆಲ್ಲಬೇಕು ಎನ್ನುವುದು ಅಷ್ಟು ಮುಖ್ಯವಲ್ಲ. ನಾಯಕಿ ತನ್ನ ಗುರಿ ಮುಟ್ಟುವಲ್ಲಿ ವಿಫಲವಾದರೂ ಸಂಘರ್ಷ ನಿರಂತರವಾಗಿರುವುದರಿಂದ ಚಿತ್ರ ಗೆಲ್ಲುತ್ತದೆ. ಆ ಚಿತ್ರದ ಆಶಯ ಮುಟ್ಟುತ್ತದೆ. ಆದರೆ ಆ ಸೋಲು ಗೆಲುವಿನ ದಡಕ್ಕೆ ಮುಟ್ಟಿಸುವುದು ಚಿತ್ರದ ಕರ್ತವ್ಯ. ಸಿನೆಮಾದ ಅಂತ್ಯದಲ್ಲಿ ಆ ಸಂಘರ್ಷ ಮುಕ್ತಾಯವಾಗುತ್ತದೆ ಅಥವಾ ಇನ್ನೊಂದು ಸ್ವರೂಪವನ್ನು ಪಡೆದುಕೊಳ್ಳುತ್ತದೆ. ನ್ಯೂಟನ್‍ನ ನಿಯಮದಂತೆ ಪ್ರತೀ ಕ್ರಿಯೆಗೂ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ ಎಂದಾಗ ಸಂಘರ್ಷ ಎನ್ನುವುದು ನಿರಂತರವಲ್ಲದೇ?

ಇದನ್ನು ಓದಿ: ಸಿನಿಮಾ ಮತ್ತು ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...