Homeಮುಖಪುಟಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

ಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

- Advertisement -
- Advertisement -

| ರಾಜಶೇಖರ್ ಅಕ್ಕಿ |

ಎರಡು ವಾರಗಳ ಹಿಂದೆ ಸಿನೆಮಾ ಮತ್ತು ಸ್ಟ್ರಕ್ಚರ್ ಬಗ್ಗೆ ಬರೆದಿದ್ದೆ. ಇಂದು ಸಂಘರ್ಷದ ಬಗ್ಗೆ ಬರೆಯಲು ಪ್ರಯತ್ನಿಸುವೆ.
ಇತರ ಕಲಾ ಮಾಧ್ಯಮಗಳನ್ನು ಹೋಲಿಸಿದರೆ ಸಿನೆಮಾಗೆ ತನ್ನದೇ ಆದ ಸಾಧ್ಯತೆಗಳೊಂದಿಗೆ ಇತಿಮಿತಿಗಳೂ ಇವೆ. ಸಿನೆಮಾದಲ್ಲಿ ಒಂದು ನೇರ ಕಥೆ ಇರಲೇಬೇಕು. ಒಬ್ಬ ಮುಖ್ಯ ಪಾತ್ರವನ್ನು ಗುರುತಿಸಲೇಬೇಕು,(ಇದಕ್ಕೆ ಕೆಲವು ಶ್ರೇಷ್ಠ ಅಪವಾದಗಳು ಖಂಡಿತ ಇವೆ.) ಆ ಮುಖ್ಯ ಪಾತ್ರಕ್ಕೆ ಕೆಲವು ಗುರಿಗಳಿರಬೇಕು, ಆ ಗುರಿಗಳಿಗೆ ತದ್ವಿರುದ್ಧವಾಗಿ ಕೆಲವು ಶಕ್ತಿಗಳಿರಬೇಕು. ಆಗ ಉಂಟಾಗುವುದು ಸಂಘರ್ಷ.

ಸಂಘರ್ಷವೇ ಒಂದು ಸಿನೆಮಾದ ಜೀವಾಳ. ಸಂಘರ್ಷ ತಪ್ಪಿದ ತಕ್ಷಣ ಆ ಸಿನೆಮಾ ಬಿದ್ದುಹೋಗುತ್ತದೆ. ನಮ್ಮಲ್ಲಿ ಅನೇಕ ಬರಹಗಾರರು ‘ಒಳ್ಳೆಯ’ ಕಥೆಗಳನ್ನು, ‘ಒಳ್ಳೆಯ’ ಸೀನ್‍ಗಳನ್ನು ಬರೆದು ಒಳ್ಳೆಯ ಪಾತ್ರಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಒಳ್ಳೆಯ ಹಾಸ್ಯ, ಭಾವನೆ, ಒಳ್ಳೆಯ ವಿಚಾರಗಳನ್ನೂ ಹೇಳಲು ಪ್ರಯತ್ನಿಸುತ್ತಾರೆ. ಆದರೆ ಆ ಎಲ್ಲ ‘ಒಳ್ಳೆಯ’ಗಳು ಸಂಘರ್ಷದ ವ್ಯಾಪ್ತಿಯಲ್ಲಿ ಬಂದಾಗ ಮಾತ್ರ ಕೆಲಸ ಮಾಡುತ್ತವೆ ಇಲ್ಲವಾದರೆ ಅವುಗಳು ಒಳ್ಳೆಯ ಸೀನ್‍ಗಳಾಗೇ ಉಳಿದು ಚಿತ್ರಕ್ಕೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಒಂದು ಕಾದಂಬರಿಯಲ್ಲಿ ಪಾತ್ರದ, ಆ ಪಾತ್ರಗಳು ಜೀವಿಸುತ್ತಿರುವ ಸಮಾಜದ ಬಗ್ಗೆ ನೂರಾರು ಪುಟಗಳನ್ನು ಬರೆಯಬಹುದು; ಆ ಪಾತ್ರದ ತಲೆಯೊಳಗೆ ಹೊಕ್ಕಿ ಅಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ, ಕನಸು, ನಿರಾಶೆಗಳ ಬಗ್ಗೆಯೂ ಬರೆಯಬಹುದು. ಆದರೆ ಸಿನೆಮಾಗೆ ಆ ಸ್ವಾತಂತ್ರವಿಲ್ಲ. ಇದು ಸಿನೆಮಾದ ಒಂದು ಮಿತಿ. ಈ ಮಿತಿಗಳನ್ನು ಮೀರುತ್ತ, ಆ ತಲ್ಲಣಗಳನ್ನು ದೃಶ್ಯರೂಪಕ್ಕೆ ತರುವಲ್ಲಿ ಅನೇಕ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಆದರೂ ಅಲ್ಲೊಂದು ಸಂಘರ್ಷ ಅತಿಗಿರುತ್ತದೆ.

ಇನ್ನು ಸಂಘರ್ಷಗಳ ಸ್ವರೂಪಗಳನ್ನು ನೋಡುವ. ಮೊದಲನೇಯದು, ನಮಗೆ ಹೆಚ್ಚಾಗಿ ಕಾಣಿಸುವ ಸಂಘರ್ಷವಾದ ಬಾಹ್ಯ ಕಾರಣಗಳಿಂದ ಉಂಟಾಗುವ ಸಂಘರ್ಷ. ಅಂದರೆ, ನಮ್ಮ ನಾಯಕ/ಕಿ ಏನೋ ಗುರಿಯಿಟ್ಟುಕೊಂಡು ಹೋಗುತ್ತಿರುವಾಗ ಆ ಗುರಿಗೆ ಅಡ್ಡಬರುವ ಅಡೆತಡೆಗಳು ಮೂಲತಃವಾಗಿ ಆ ನಾಯಕಿಯ ಪಾತ್ರದ ಹೊರಗಿರುತ್ತವೆ. ಉದಾಹರಣೆಗೆ, ಆ ಹುಡುಗ ತನಗಿಷ್ಟವಾದ ಹುಡುಗಿಯೊಂದಿಗೆ ಮದುವೆ ಮಾಡಿಕೊಳ್ಳುವ ಗುರಿಯನ್ನಿಟ್ಟುಕೊಂಡಿರುವಾಗ ಅದಕ್ಕೆ ಹುಡುಗಿಯ ಅಪ್ಪ ವಿರೋಧ ಒಡ್ಡುತ್ತಾನೆ; ಒಂದು ಹಳ್ಳಿಯಲ್ಲಿ ನಾಯಕಿ ಬಡ ಮಕ್ಕಳ ಸಲುವಾಗಿ ಒಂದು ಶಾಲೆಯನ್ನು ಪ್ರಾರಂಭಿಸುವ ಗುರಿಯನ್ನಿಟ್ಟುಕೊಂಡಿದ್ದಾಳೆ ಆದರೆ ಅಲ್ಲಿ ಖಾಸಗಿ ಶಾಲೆಯನ್ನು ನಡೆಸುವ ಪಟ್ಟಭದ್ರ ಹಿತಾಸಕ್ತಿಗಳು ಇವಳು ಶಾಲೆ ಪ್ರಾರಂಭಿಸಲು ಬಿಡುವುದಿಲ್ಲ.

ಈಗ ಈ ಪ್ರಮುಖ ಪಾತ್ರಧಾರಿಗಳು ತಮ್ಮ ಎದುರಿನ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವುದೇ ಸಂಘರ್ಷ. ಇಲ್ಲಿ ಜೀವನದಲ್ಲಿ ಪ್ರೀತಿ ಎನ್ನುವುದು ಎಷ್ಟು ಮುಖ್ಯ ಅಥವಾ ಬಡಮಕ್ಕಳಿಗಾಗಿ ಶಾಲೆಗಳನ್ನು ಪ್ರಾರಂಭಿಸುವುದು ಎಷ್ಟು ಒಳ್ಳೆಯ ಕೆಲಸ ಎನ್ನುವುದರ ಬಗ್ಗೆ ಲೆಕ್ಷರ್ ಕೊಡಲು ಅವಕಾಶವಿರುವುದಿಲ್ಲ. ಆಯಾ ಸಂಘರ್ಷಗಳ ವ್ಯಾಪ್ತಿಯಲ್ಲೇ ಈ ಸಂಗತಿಗಳು ಹೊರಬರಬೇಕು.

1998 ರಲ್ಲಿ ತೆರೆಕಂಡ ಸತ್ಯಾ ಚಿತ್ರದಲ್ಲಿ ಒಂದು ಪಾತ್ರ ಜೋಕ್ ಹೇಳುವ ಸನ್ನಿವೇಶವಿದೆ. ಒಂದು ಕನ್‍ಸ್ಟ್ರಕ್ಷನ್ ಆಗುತ್ತಿರುವ ಕಟ್ಟಡದಲ್ಲಿ ಕುಳಿತಾಗ ಸ್ನೇಹಲ್ ದಾಬಿಯ ಪಾತ್ರ ಒಂದು ತರಲೆ ಜೋಕ್ ಹೇಳಲಾರಂಭಿಸುತ್ತಾನೆ. ಆ ಜೋಕ್‍ಗೆ ಪ್ರೇಕ್ಷಕರು ನಗಬೇಕು ಎನ್ನುವಷ್ಟರಲ್ಲಿ ಗುಂಡಿನ ಸುರಿಮಳೆಯಾಗಿ ಅಲ್ಲಿಯ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಆ ಸೀನ್ ಜೋಕ್ ಹೇಳಲಂತೂ ಇದ್ದೇ ಇಲ್ಲ, ಜೋಕ್ ಮುಂದುವರೆಯುತ್ತಿದ್ದಾಗಲೂ ಏನೋ ಆಗುವುದು ಎನ್ನುವ ಭಾವನೆ ಗಟ್ಟಿಗೊಳ್ಳುತ್ತಲಿರುತ್ತದೆ. ಗಟ್ಟಿಯಾದ ಸ್ಟ್ರಕ್ಷರ್ ಮತ್ತು ಸಂಘರ್ಷವನ್ನಿಟ್ಟುಕೊಂಡೇ ಲಘು ಸನ್ನಿವೇಶಗಳನ್ನೂ ತೋರಿಸುವುದಕ್ಕೆ ಸತ್ಯಾ ಸಿನೆಮಾ ಒಳ್ಳೆಯ ಉದಾಹರಣೆ.

ಎರಡನೇಯದ್ದು ಆಂತರಿಕ ಸಂಘರ್ಷ. ಒಬ್ಬ ವ್ಯಕ್ತಿಗೆ ಬಾಕ್ಸಿಂಗ್ ಚಾಂಪಿಯನ್‍ಷಿಪ್ ಗೆಲ್ಲಬೇಕಿದೆ, ಒಬ್ಬನಿಗೆ ತಾನು ದುರ್ಬಲ ಎನ್ನುವ ಕೀಳರಿಮೆಯಿದೆ, ಇನ್ನೊಬ್ಬನಿಗೆ ತನ್ನನ್ನು ಯಾರೂ ಇಷ್ಟಪಡಲಾರರು ಎನ್ನುವ ಭಾವನೆಯಿದೆ, ಬಾಲ್ಯದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ ಒಬ್ಬ ಬಾಲಕಿಯು ಯಾವುದೇ ಸಂಬಂಧವನ್ನು ನಿಭಾಯಿಸಲು ಅಸಮರ್ಥಳಾಗಿದ್ದಾಳೆ. ಈಗ ಇವುಗಳನ್ನು ಎದುರಿಸಬೇಕಿದೆ. ಇಲ್ಲಿಯ ಆಯಾ ನಾಯಕ/ಕಿಗೆ ಇರುವ ಅಡೆತಡೆಗಳು ತನ್ನೊಳಗೇ ಹುದುಗಿವೆ. ತನ್ನೊಳಗೇ ಹುದುಗಿರುವ ಶತ್ರುವನ್ನು ಎದುರಿಸುವುದನ್ನು ದೃಶ್ಯ ಮಾಧ್ಯಮದಲ್ಲಿ ತೋರಿಸುವುದು ಕಷ್ಟ ಎನಿಸಬಹುದು. ಆದರೆ ಅನಿಸಿದಷ್ಟು ಕಷ್ಟವಲ್ಲ. ಅಲ್ಲಿಯೂ ಬಾಹ್ಯ ಸಂಗತಿಗಳಿವೆ.

ನಾಯಕ/ಕಿಯ ದೈನಂದಿನ ದೈಹಿಕ ಕ್ರಿಯೆಗಳಿಂದಲೇ ಆ ಸಂಘರ್ಷ ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತದೆ. ತನ್ನ ಸಮಸ್ಯೆ ಮತ್ತು ಅದಕ್ಕಿರುವ ಉತ್ತರಗಳೂ ದೈನಂದಿನ ಕ್ರಿಯೆಗಳಿಂದ ಸ್ಪಷ್ಟವಾಗುವ ಹಾಗೆ ಚಿತ್ರಕಥೆಯನ್ನು ಹೆಣೆಯಬೇಕಾಗುತ್ತದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಎರಡೂ ಬಗೆಯ ಸಂಘರ್ಷಗಳು ಎಲ್ಲಾ ಹಂತಗಳಲ್ಲಿ ಪ್ರತ್ಯೇಕವಾಗಿರಬೇಕಿಲ್ಲ. ಬಾಹ್ಯ ಸಂಘರ್ಷದಲ್ಲಿ ಆಂತರಿಕ ಸಂಘರ್ಷವಿದ್ದರೆ, ಆಂತರಿಕ ಸಂಘರ್ಷದ ಕಥೆಗಳಲ್ಲಿ ಬಾಹ್ಯ ಸಂಗತಿಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಚಿತ್ರಕಥೆ ಬರೆಯುವ ರೂಢಿಸಮ್ಮತ ಕಲಿಕೆಯಲ್ಲಿ ನಾಯಕಿ/ಕ ತನ್ನ ಗುರಿಯನ್ನು ತಲುಪಲು ಹರಸಾಹಸ ಪಡುತ್ತಾಳೆ/ನೆ; ಅವಳಿಗೆ ತನ್ನ ಗುರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ; ಚಿತ್ರದಲ್ಲಿ ಆಗುವ ಹೆಚ್ಚಿನ ಘಟನೆಗಳನ್ನು ನಾಯಕಿಯೇ ಮೊದಲು ಮಾಡುತ್ತಾಳೆ ಅದರಿಂದ ಪ್ರೇಕ್ಷಕ ತನ್ನನ್ನು ಆ ನಾಯಕಿಯಲ್ಲಿ ಕಂಡುಕೊಳ್ಳುತ್ತಾನೆ ಎನ್ನುವ ನಂಬಿಕೆ. ಆದರೆ ಇವ್ಯಾವೂ ಅನಿವಾರ್ಯವಲ್ಲ. ಅನೇಕ ಕಥೆಗಳಲ್ಲಿ ನಾಯಕಿಗೆ ತನ್ನ ಗುರಿಯ ಅರಿವು ಇರುವುದಿಲ್ಲ. ಪರಿಸ್ಥಿತಿಯ ಕೂಸು ಆ ನಾಯಕಿ. ಅದರರ್ಥ ಅಲ್ಲಿ ಸಂಘರ್ಷ ತಪ್ಪಿಲ್ಲ.

ತನಗರಿವಿಲ್ಲದೇ ಆ ನಾಯಕಿ ಹೋರಾಟದ ಪಯಣವನ್ನು ಕ್ರಮಿಸುತ್ತಾಳೆ. ಕೆಲವು ಚಿತ್ರಗಳಲ್ಲಿ ನಾಯಕಿಯ ಹೋರಾಟ, ಸಂಘರ್ಷ ಸ್ಪಷ್ಟವಾಗಿ ಕಂಡುಬರುವುದಿಲ್ಲ. ಮತ್ತು ಆ ಸಂಘರ್ಷ ಅವಳದ್ದೇ ಆಗಿರಬೇಕೆನ್ನುವ ನಿಯಮವೂ ಇಲ್ಲ. ಅಲೆಕ್ಸಾಂಡರ್ ಪೇನ್‍ನ ಮೊದಲ ಚಿತ್ರ ಸಿಟಿಝನ್ ರೂತ್‍ನಲ್ಲಿ ನಾಯಕಿ ರೂತ್ ಗರ್ಭಿಣಿ. ರಸ್ತೆಯಲ್ಲಿ ಬದುಕುತ್ತಿರುವ ಅವಳಿಗೆ ಮಗುವನ್ನು ಉಳಿಸಿಕೊಳ್ಳಬೇಕೇ, ಗರ್ಭಪಾತ ಮಾಡಿಸಿಕೊಳ್ಳಬೇಕೇ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. ತನ್ನ ಹೊರಗಿನ ಪರಿಸ್ಥಿತಿ ಬದಲಾದಂತೆ ತನಗೆ ಸೂಕ್ತವೆನಿಸಿದ ಹಾಗೆ ಅವಳು ಪ್ರತಿಕ್ರಿಯಿಸುತ್ತಾಳೆ. ಅಬೌಟ್ ಶ್ಮಿತ್ ಚಿತ್ರದಲ್ಲಿ ನಾಯಕ ಶ್ಮಿತ್ ಈಗ ತಾನೆ ನಿವೃತ್ತಿ ಹೊಂದಿದ್ದಾನೆ. ಮುಂದೇನು ಮಾಡಬೇಕೆನ್ನುವುದು ತಿಳಿಯದು. ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಲೇ ಅವನು ತನ್ನ ಬಗ್ಗೆ ಕಂಡುಕೊಳ್ಳುತ್ತಾನೆ. ಆದರೆ ಅದರಲ್ಲೂ ಸಂಘರ್ಷವಿದೆ.

ಯಾವುದೇ ಸಂಘರ್ಷದಲ್ಲಿ ನಾಯಕಿ ಸರಿ ಎನಿಸುವ ದಾರಿಯಲ್ಲಿದ್ದು, ಆ ನಾಯಕಿಯ ವಿರುದ್ಧದ ಶಕ್ತಿಗಳು ತಪ್ಪಾದ ದಾರಿಯಲ್ಲೇ ಇರಬೇಕು ಎನ್ನುವ ಅನಿವಾರ್ಯವೂ ಇಲ್ಲ. ನಾಯಕಿಯೊಂದಿಗೆ ಅವಳ ಶತ್ರುಗಳೂ ಪರಿಸ್ಥಿತಿಯ ಕೂಸುಗಳೇ. ಆ ಶಕ್ತಿಗಳಿಗೂ ತಮ್ಮದೇ ಆದ ಕಾರಣಗಳಿರುತ್ತವೆ. ಅದೇ ಕಾರಣಕ್ಕೆ ಅನೇಕ ಸಲ ಖಳನಾಯಕರ ಪಾತ್ರಗಳೂ ನಮಗೆ ಇಷ್ಟವಾಗುತ್ತವೆ.
ನಾಯಕಿಯ ಈ ಸಂಘರ್ಷದಲ್ಲಿ ಯಾರು ಗೆಲ್ಲಬೇಕು ಎನ್ನುವುದು ಅಷ್ಟು ಮುಖ್ಯವಲ್ಲ. ನಾಯಕಿ ತನ್ನ ಗುರಿ ಮುಟ್ಟುವಲ್ಲಿ ವಿಫಲವಾದರೂ ಸಂಘರ್ಷ ನಿರಂತರವಾಗಿರುವುದರಿಂದ ಚಿತ್ರ ಗೆಲ್ಲುತ್ತದೆ. ಆ ಚಿತ್ರದ ಆಶಯ ಮುಟ್ಟುತ್ತದೆ. ಆದರೆ ಆ ಸೋಲು ಗೆಲುವಿನ ದಡಕ್ಕೆ ಮುಟ್ಟಿಸುವುದು ಚಿತ್ರದ ಕರ್ತವ್ಯ. ಸಿನೆಮಾದ ಅಂತ್ಯದಲ್ಲಿ ಆ ಸಂಘರ್ಷ ಮುಕ್ತಾಯವಾಗುತ್ತದೆ ಅಥವಾ ಇನ್ನೊಂದು ಸ್ವರೂಪವನ್ನು ಪಡೆದುಕೊಳ್ಳುತ್ತದೆ. ನ್ಯೂಟನ್‍ನ ನಿಯಮದಂತೆ ಪ್ರತೀ ಕ್ರಿಯೆಗೂ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ ಎಂದಾಗ ಸಂಘರ್ಷ ಎನ್ನುವುದು ನಿರಂತರವಲ್ಲದೇ?

ಇದನ್ನು ಓದಿ: ಸಿನಿಮಾ ಮತ್ತು ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...