Homeಮುಖಪುಟಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

ಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

- Advertisement -
- Advertisement -

| ರಾಜಶೇಖರ್ ಅಕ್ಕಿ |

ಎರಡು ವಾರಗಳ ಹಿಂದೆ ಸಿನೆಮಾ ಮತ್ತು ಸ್ಟ್ರಕ್ಚರ್ ಬಗ್ಗೆ ಬರೆದಿದ್ದೆ. ಇಂದು ಸಂಘರ್ಷದ ಬಗ್ಗೆ ಬರೆಯಲು ಪ್ರಯತ್ನಿಸುವೆ.
ಇತರ ಕಲಾ ಮಾಧ್ಯಮಗಳನ್ನು ಹೋಲಿಸಿದರೆ ಸಿನೆಮಾಗೆ ತನ್ನದೇ ಆದ ಸಾಧ್ಯತೆಗಳೊಂದಿಗೆ ಇತಿಮಿತಿಗಳೂ ಇವೆ. ಸಿನೆಮಾದಲ್ಲಿ ಒಂದು ನೇರ ಕಥೆ ಇರಲೇಬೇಕು. ಒಬ್ಬ ಮುಖ್ಯ ಪಾತ್ರವನ್ನು ಗುರುತಿಸಲೇಬೇಕು,(ಇದಕ್ಕೆ ಕೆಲವು ಶ್ರೇಷ್ಠ ಅಪವಾದಗಳು ಖಂಡಿತ ಇವೆ.) ಆ ಮುಖ್ಯ ಪಾತ್ರಕ್ಕೆ ಕೆಲವು ಗುರಿಗಳಿರಬೇಕು, ಆ ಗುರಿಗಳಿಗೆ ತದ್ವಿರುದ್ಧವಾಗಿ ಕೆಲವು ಶಕ್ತಿಗಳಿರಬೇಕು. ಆಗ ಉಂಟಾಗುವುದು ಸಂಘರ್ಷ.

ಸಂಘರ್ಷವೇ ಒಂದು ಸಿನೆಮಾದ ಜೀವಾಳ. ಸಂಘರ್ಷ ತಪ್ಪಿದ ತಕ್ಷಣ ಆ ಸಿನೆಮಾ ಬಿದ್ದುಹೋಗುತ್ತದೆ. ನಮ್ಮಲ್ಲಿ ಅನೇಕ ಬರಹಗಾರರು ‘ಒಳ್ಳೆಯ’ ಕಥೆಗಳನ್ನು, ‘ಒಳ್ಳೆಯ’ ಸೀನ್‍ಗಳನ್ನು ಬರೆದು ಒಳ್ಳೆಯ ಪಾತ್ರಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಒಳ್ಳೆಯ ಹಾಸ್ಯ, ಭಾವನೆ, ಒಳ್ಳೆಯ ವಿಚಾರಗಳನ್ನೂ ಹೇಳಲು ಪ್ರಯತ್ನಿಸುತ್ತಾರೆ. ಆದರೆ ಆ ಎಲ್ಲ ‘ಒಳ್ಳೆಯ’ಗಳು ಸಂಘರ್ಷದ ವ್ಯಾಪ್ತಿಯಲ್ಲಿ ಬಂದಾಗ ಮಾತ್ರ ಕೆಲಸ ಮಾಡುತ್ತವೆ ಇಲ್ಲವಾದರೆ ಅವುಗಳು ಒಳ್ಳೆಯ ಸೀನ್‍ಗಳಾಗೇ ಉಳಿದು ಚಿತ್ರಕ್ಕೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಒಂದು ಕಾದಂಬರಿಯಲ್ಲಿ ಪಾತ್ರದ, ಆ ಪಾತ್ರಗಳು ಜೀವಿಸುತ್ತಿರುವ ಸಮಾಜದ ಬಗ್ಗೆ ನೂರಾರು ಪುಟಗಳನ್ನು ಬರೆಯಬಹುದು; ಆ ಪಾತ್ರದ ತಲೆಯೊಳಗೆ ಹೊಕ್ಕಿ ಅಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ, ಕನಸು, ನಿರಾಶೆಗಳ ಬಗ್ಗೆಯೂ ಬರೆಯಬಹುದು. ಆದರೆ ಸಿನೆಮಾಗೆ ಆ ಸ್ವಾತಂತ್ರವಿಲ್ಲ. ಇದು ಸಿನೆಮಾದ ಒಂದು ಮಿತಿ. ಈ ಮಿತಿಗಳನ್ನು ಮೀರುತ್ತ, ಆ ತಲ್ಲಣಗಳನ್ನು ದೃಶ್ಯರೂಪಕ್ಕೆ ತರುವಲ್ಲಿ ಅನೇಕ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಆದರೂ ಅಲ್ಲೊಂದು ಸಂಘರ್ಷ ಅತಿಗಿರುತ್ತದೆ.

ಇನ್ನು ಸಂಘರ್ಷಗಳ ಸ್ವರೂಪಗಳನ್ನು ನೋಡುವ. ಮೊದಲನೇಯದು, ನಮಗೆ ಹೆಚ್ಚಾಗಿ ಕಾಣಿಸುವ ಸಂಘರ್ಷವಾದ ಬಾಹ್ಯ ಕಾರಣಗಳಿಂದ ಉಂಟಾಗುವ ಸಂಘರ್ಷ. ಅಂದರೆ, ನಮ್ಮ ನಾಯಕ/ಕಿ ಏನೋ ಗುರಿಯಿಟ್ಟುಕೊಂಡು ಹೋಗುತ್ತಿರುವಾಗ ಆ ಗುರಿಗೆ ಅಡ್ಡಬರುವ ಅಡೆತಡೆಗಳು ಮೂಲತಃವಾಗಿ ಆ ನಾಯಕಿಯ ಪಾತ್ರದ ಹೊರಗಿರುತ್ತವೆ. ಉದಾಹರಣೆಗೆ, ಆ ಹುಡುಗ ತನಗಿಷ್ಟವಾದ ಹುಡುಗಿಯೊಂದಿಗೆ ಮದುವೆ ಮಾಡಿಕೊಳ್ಳುವ ಗುರಿಯನ್ನಿಟ್ಟುಕೊಂಡಿರುವಾಗ ಅದಕ್ಕೆ ಹುಡುಗಿಯ ಅಪ್ಪ ವಿರೋಧ ಒಡ್ಡುತ್ತಾನೆ; ಒಂದು ಹಳ್ಳಿಯಲ್ಲಿ ನಾಯಕಿ ಬಡ ಮಕ್ಕಳ ಸಲುವಾಗಿ ಒಂದು ಶಾಲೆಯನ್ನು ಪ್ರಾರಂಭಿಸುವ ಗುರಿಯನ್ನಿಟ್ಟುಕೊಂಡಿದ್ದಾಳೆ ಆದರೆ ಅಲ್ಲಿ ಖಾಸಗಿ ಶಾಲೆಯನ್ನು ನಡೆಸುವ ಪಟ್ಟಭದ್ರ ಹಿತಾಸಕ್ತಿಗಳು ಇವಳು ಶಾಲೆ ಪ್ರಾರಂಭಿಸಲು ಬಿಡುವುದಿಲ್ಲ.

ಈಗ ಈ ಪ್ರಮುಖ ಪಾತ್ರಧಾರಿಗಳು ತಮ್ಮ ಎದುರಿನ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವುದೇ ಸಂಘರ್ಷ. ಇಲ್ಲಿ ಜೀವನದಲ್ಲಿ ಪ್ರೀತಿ ಎನ್ನುವುದು ಎಷ್ಟು ಮುಖ್ಯ ಅಥವಾ ಬಡಮಕ್ಕಳಿಗಾಗಿ ಶಾಲೆಗಳನ್ನು ಪ್ರಾರಂಭಿಸುವುದು ಎಷ್ಟು ಒಳ್ಳೆಯ ಕೆಲಸ ಎನ್ನುವುದರ ಬಗ್ಗೆ ಲೆಕ್ಷರ್ ಕೊಡಲು ಅವಕಾಶವಿರುವುದಿಲ್ಲ. ಆಯಾ ಸಂಘರ್ಷಗಳ ವ್ಯಾಪ್ತಿಯಲ್ಲೇ ಈ ಸಂಗತಿಗಳು ಹೊರಬರಬೇಕು.

1998 ರಲ್ಲಿ ತೆರೆಕಂಡ ಸತ್ಯಾ ಚಿತ್ರದಲ್ಲಿ ಒಂದು ಪಾತ್ರ ಜೋಕ್ ಹೇಳುವ ಸನ್ನಿವೇಶವಿದೆ. ಒಂದು ಕನ್‍ಸ್ಟ್ರಕ್ಷನ್ ಆಗುತ್ತಿರುವ ಕಟ್ಟಡದಲ್ಲಿ ಕುಳಿತಾಗ ಸ್ನೇಹಲ್ ದಾಬಿಯ ಪಾತ್ರ ಒಂದು ತರಲೆ ಜೋಕ್ ಹೇಳಲಾರಂಭಿಸುತ್ತಾನೆ. ಆ ಜೋಕ್‍ಗೆ ಪ್ರೇಕ್ಷಕರು ನಗಬೇಕು ಎನ್ನುವಷ್ಟರಲ್ಲಿ ಗುಂಡಿನ ಸುರಿಮಳೆಯಾಗಿ ಅಲ್ಲಿಯ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಆ ಸೀನ್ ಜೋಕ್ ಹೇಳಲಂತೂ ಇದ್ದೇ ಇಲ್ಲ, ಜೋಕ್ ಮುಂದುವರೆಯುತ್ತಿದ್ದಾಗಲೂ ಏನೋ ಆಗುವುದು ಎನ್ನುವ ಭಾವನೆ ಗಟ್ಟಿಗೊಳ್ಳುತ್ತಲಿರುತ್ತದೆ. ಗಟ್ಟಿಯಾದ ಸ್ಟ್ರಕ್ಷರ್ ಮತ್ತು ಸಂಘರ್ಷವನ್ನಿಟ್ಟುಕೊಂಡೇ ಲಘು ಸನ್ನಿವೇಶಗಳನ್ನೂ ತೋರಿಸುವುದಕ್ಕೆ ಸತ್ಯಾ ಸಿನೆಮಾ ಒಳ್ಳೆಯ ಉದಾಹರಣೆ.

ಎರಡನೇಯದ್ದು ಆಂತರಿಕ ಸಂಘರ್ಷ. ಒಬ್ಬ ವ್ಯಕ್ತಿಗೆ ಬಾಕ್ಸಿಂಗ್ ಚಾಂಪಿಯನ್‍ಷಿಪ್ ಗೆಲ್ಲಬೇಕಿದೆ, ಒಬ್ಬನಿಗೆ ತಾನು ದುರ್ಬಲ ಎನ್ನುವ ಕೀಳರಿಮೆಯಿದೆ, ಇನ್ನೊಬ್ಬನಿಗೆ ತನ್ನನ್ನು ಯಾರೂ ಇಷ್ಟಪಡಲಾರರು ಎನ್ನುವ ಭಾವನೆಯಿದೆ, ಬಾಲ್ಯದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ ಒಬ್ಬ ಬಾಲಕಿಯು ಯಾವುದೇ ಸಂಬಂಧವನ್ನು ನಿಭಾಯಿಸಲು ಅಸಮರ್ಥಳಾಗಿದ್ದಾಳೆ. ಈಗ ಇವುಗಳನ್ನು ಎದುರಿಸಬೇಕಿದೆ. ಇಲ್ಲಿಯ ಆಯಾ ನಾಯಕ/ಕಿಗೆ ಇರುವ ಅಡೆತಡೆಗಳು ತನ್ನೊಳಗೇ ಹುದುಗಿವೆ. ತನ್ನೊಳಗೇ ಹುದುಗಿರುವ ಶತ್ರುವನ್ನು ಎದುರಿಸುವುದನ್ನು ದೃಶ್ಯ ಮಾಧ್ಯಮದಲ್ಲಿ ತೋರಿಸುವುದು ಕಷ್ಟ ಎನಿಸಬಹುದು. ಆದರೆ ಅನಿಸಿದಷ್ಟು ಕಷ್ಟವಲ್ಲ. ಅಲ್ಲಿಯೂ ಬಾಹ್ಯ ಸಂಗತಿಗಳಿವೆ.

ನಾಯಕ/ಕಿಯ ದೈನಂದಿನ ದೈಹಿಕ ಕ್ರಿಯೆಗಳಿಂದಲೇ ಆ ಸಂಘರ್ಷ ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತದೆ. ತನ್ನ ಸಮಸ್ಯೆ ಮತ್ತು ಅದಕ್ಕಿರುವ ಉತ್ತರಗಳೂ ದೈನಂದಿನ ಕ್ರಿಯೆಗಳಿಂದ ಸ್ಪಷ್ಟವಾಗುವ ಹಾಗೆ ಚಿತ್ರಕಥೆಯನ್ನು ಹೆಣೆಯಬೇಕಾಗುತ್ತದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಎರಡೂ ಬಗೆಯ ಸಂಘರ್ಷಗಳು ಎಲ್ಲಾ ಹಂತಗಳಲ್ಲಿ ಪ್ರತ್ಯೇಕವಾಗಿರಬೇಕಿಲ್ಲ. ಬಾಹ್ಯ ಸಂಘರ್ಷದಲ್ಲಿ ಆಂತರಿಕ ಸಂಘರ್ಷವಿದ್ದರೆ, ಆಂತರಿಕ ಸಂಘರ್ಷದ ಕಥೆಗಳಲ್ಲಿ ಬಾಹ್ಯ ಸಂಗತಿಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಚಿತ್ರಕಥೆ ಬರೆಯುವ ರೂಢಿಸಮ್ಮತ ಕಲಿಕೆಯಲ್ಲಿ ನಾಯಕಿ/ಕ ತನ್ನ ಗುರಿಯನ್ನು ತಲುಪಲು ಹರಸಾಹಸ ಪಡುತ್ತಾಳೆ/ನೆ; ಅವಳಿಗೆ ತನ್ನ ಗುರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ; ಚಿತ್ರದಲ್ಲಿ ಆಗುವ ಹೆಚ್ಚಿನ ಘಟನೆಗಳನ್ನು ನಾಯಕಿಯೇ ಮೊದಲು ಮಾಡುತ್ತಾಳೆ ಅದರಿಂದ ಪ್ರೇಕ್ಷಕ ತನ್ನನ್ನು ಆ ನಾಯಕಿಯಲ್ಲಿ ಕಂಡುಕೊಳ್ಳುತ್ತಾನೆ ಎನ್ನುವ ನಂಬಿಕೆ. ಆದರೆ ಇವ್ಯಾವೂ ಅನಿವಾರ್ಯವಲ್ಲ. ಅನೇಕ ಕಥೆಗಳಲ್ಲಿ ನಾಯಕಿಗೆ ತನ್ನ ಗುರಿಯ ಅರಿವು ಇರುವುದಿಲ್ಲ. ಪರಿಸ್ಥಿತಿಯ ಕೂಸು ಆ ನಾಯಕಿ. ಅದರರ್ಥ ಅಲ್ಲಿ ಸಂಘರ್ಷ ತಪ್ಪಿಲ್ಲ.

ತನಗರಿವಿಲ್ಲದೇ ಆ ನಾಯಕಿ ಹೋರಾಟದ ಪಯಣವನ್ನು ಕ್ರಮಿಸುತ್ತಾಳೆ. ಕೆಲವು ಚಿತ್ರಗಳಲ್ಲಿ ನಾಯಕಿಯ ಹೋರಾಟ, ಸಂಘರ್ಷ ಸ್ಪಷ್ಟವಾಗಿ ಕಂಡುಬರುವುದಿಲ್ಲ. ಮತ್ತು ಆ ಸಂಘರ್ಷ ಅವಳದ್ದೇ ಆಗಿರಬೇಕೆನ್ನುವ ನಿಯಮವೂ ಇಲ್ಲ. ಅಲೆಕ್ಸಾಂಡರ್ ಪೇನ್‍ನ ಮೊದಲ ಚಿತ್ರ ಸಿಟಿಝನ್ ರೂತ್‍ನಲ್ಲಿ ನಾಯಕಿ ರೂತ್ ಗರ್ಭಿಣಿ. ರಸ್ತೆಯಲ್ಲಿ ಬದುಕುತ್ತಿರುವ ಅವಳಿಗೆ ಮಗುವನ್ನು ಉಳಿಸಿಕೊಳ್ಳಬೇಕೇ, ಗರ್ಭಪಾತ ಮಾಡಿಸಿಕೊಳ್ಳಬೇಕೇ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. ತನ್ನ ಹೊರಗಿನ ಪರಿಸ್ಥಿತಿ ಬದಲಾದಂತೆ ತನಗೆ ಸೂಕ್ತವೆನಿಸಿದ ಹಾಗೆ ಅವಳು ಪ್ರತಿಕ್ರಿಯಿಸುತ್ತಾಳೆ. ಅಬೌಟ್ ಶ್ಮಿತ್ ಚಿತ್ರದಲ್ಲಿ ನಾಯಕ ಶ್ಮಿತ್ ಈಗ ತಾನೆ ನಿವೃತ್ತಿ ಹೊಂದಿದ್ದಾನೆ. ಮುಂದೇನು ಮಾಡಬೇಕೆನ್ನುವುದು ತಿಳಿಯದು. ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಲೇ ಅವನು ತನ್ನ ಬಗ್ಗೆ ಕಂಡುಕೊಳ್ಳುತ್ತಾನೆ. ಆದರೆ ಅದರಲ್ಲೂ ಸಂಘರ್ಷವಿದೆ.

ಯಾವುದೇ ಸಂಘರ್ಷದಲ್ಲಿ ನಾಯಕಿ ಸರಿ ಎನಿಸುವ ದಾರಿಯಲ್ಲಿದ್ದು, ಆ ನಾಯಕಿಯ ವಿರುದ್ಧದ ಶಕ್ತಿಗಳು ತಪ್ಪಾದ ದಾರಿಯಲ್ಲೇ ಇರಬೇಕು ಎನ್ನುವ ಅನಿವಾರ್ಯವೂ ಇಲ್ಲ. ನಾಯಕಿಯೊಂದಿಗೆ ಅವಳ ಶತ್ರುಗಳೂ ಪರಿಸ್ಥಿತಿಯ ಕೂಸುಗಳೇ. ಆ ಶಕ್ತಿಗಳಿಗೂ ತಮ್ಮದೇ ಆದ ಕಾರಣಗಳಿರುತ್ತವೆ. ಅದೇ ಕಾರಣಕ್ಕೆ ಅನೇಕ ಸಲ ಖಳನಾಯಕರ ಪಾತ್ರಗಳೂ ನಮಗೆ ಇಷ್ಟವಾಗುತ್ತವೆ.
ನಾಯಕಿಯ ಈ ಸಂಘರ್ಷದಲ್ಲಿ ಯಾರು ಗೆಲ್ಲಬೇಕು ಎನ್ನುವುದು ಅಷ್ಟು ಮುಖ್ಯವಲ್ಲ. ನಾಯಕಿ ತನ್ನ ಗುರಿ ಮುಟ್ಟುವಲ್ಲಿ ವಿಫಲವಾದರೂ ಸಂಘರ್ಷ ನಿರಂತರವಾಗಿರುವುದರಿಂದ ಚಿತ್ರ ಗೆಲ್ಲುತ್ತದೆ. ಆ ಚಿತ್ರದ ಆಶಯ ಮುಟ್ಟುತ್ತದೆ. ಆದರೆ ಆ ಸೋಲು ಗೆಲುವಿನ ದಡಕ್ಕೆ ಮುಟ್ಟಿಸುವುದು ಚಿತ್ರದ ಕರ್ತವ್ಯ. ಸಿನೆಮಾದ ಅಂತ್ಯದಲ್ಲಿ ಆ ಸಂಘರ್ಷ ಮುಕ್ತಾಯವಾಗುತ್ತದೆ ಅಥವಾ ಇನ್ನೊಂದು ಸ್ವರೂಪವನ್ನು ಪಡೆದುಕೊಳ್ಳುತ್ತದೆ. ನ್ಯೂಟನ್‍ನ ನಿಯಮದಂತೆ ಪ್ರತೀ ಕ್ರಿಯೆಗೂ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ ಎಂದಾಗ ಸಂಘರ್ಷ ಎನ್ನುವುದು ನಿರಂತರವಲ್ಲದೇ?

ಇದನ್ನು ಓದಿ: ಸಿನಿಮಾ ಮತ್ತು ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....