Homeಮುಖಪುಟಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

ಸಂಘರ್ಷ ಮತ್ತು ಸಿನೆಮಾ, ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿ ಬರೆಯುತ್ತಾರೆ.

- Advertisement -
- Advertisement -

| ರಾಜಶೇಖರ್ ಅಕ್ಕಿ |

ಎರಡು ವಾರಗಳ ಹಿಂದೆ ಸಿನೆಮಾ ಮತ್ತು ಸ್ಟ್ರಕ್ಚರ್ ಬಗ್ಗೆ ಬರೆದಿದ್ದೆ. ಇಂದು ಸಂಘರ್ಷದ ಬಗ್ಗೆ ಬರೆಯಲು ಪ್ರಯತ್ನಿಸುವೆ.
ಇತರ ಕಲಾ ಮಾಧ್ಯಮಗಳನ್ನು ಹೋಲಿಸಿದರೆ ಸಿನೆಮಾಗೆ ತನ್ನದೇ ಆದ ಸಾಧ್ಯತೆಗಳೊಂದಿಗೆ ಇತಿಮಿತಿಗಳೂ ಇವೆ. ಸಿನೆಮಾದಲ್ಲಿ ಒಂದು ನೇರ ಕಥೆ ಇರಲೇಬೇಕು. ಒಬ್ಬ ಮುಖ್ಯ ಪಾತ್ರವನ್ನು ಗುರುತಿಸಲೇಬೇಕು,(ಇದಕ್ಕೆ ಕೆಲವು ಶ್ರೇಷ್ಠ ಅಪವಾದಗಳು ಖಂಡಿತ ಇವೆ.) ಆ ಮುಖ್ಯ ಪಾತ್ರಕ್ಕೆ ಕೆಲವು ಗುರಿಗಳಿರಬೇಕು, ಆ ಗುರಿಗಳಿಗೆ ತದ್ವಿರುದ್ಧವಾಗಿ ಕೆಲವು ಶಕ್ತಿಗಳಿರಬೇಕು. ಆಗ ಉಂಟಾಗುವುದು ಸಂಘರ್ಷ.

ಸಂಘರ್ಷವೇ ಒಂದು ಸಿನೆಮಾದ ಜೀವಾಳ. ಸಂಘರ್ಷ ತಪ್ಪಿದ ತಕ್ಷಣ ಆ ಸಿನೆಮಾ ಬಿದ್ದುಹೋಗುತ್ತದೆ. ನಮ್ಮಲ್ಲಿ ಅನೇಕ ಬರಹಗಾರರು ‘ಒಳ್ಳೆಯ’ ಕಥೆಗಳನ್ನು, ‘ಒಳ್ಳೆಯ’ ಸೀನ್‍ಗಳನ್ನು ಬರೆದು ಒಳ್ಳೆಯ ಪಾತ್ರಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಒಳ್ಳೆಯ ಹಾಸ್ಯ, ಭಾವನೆ, ಒಳ್ಳೆಯ ವಿಚಾರಗಳನ್ನೂ ಹೇಳಲು ಪ್ರಯತ್ನಿಸುತ್ತಾರೆ. ಆದರೆ ಆ ಎಲ್ಲ ‘ಒಳ್ಳೆಯ’ಗಳು ಸಂಘರ್ಷದ ವ್ಯಾಪ್ತಿಯಲ್ಲಿ ಬಂದಾಗ ಮಾತ್ರ ಕೆಲಸ ಮಾಡುತ್ತವೆ ಇಲ್ಲವಾದರೆ ಅವುಗಳು ಒಳ್ಳೆಯ ಸೀನ್‍ಗಳಾಗೇ ಉಳಿದು ಚಿತ್ರಕ್ಕೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಒಂದು ಕಾದಂಬರಿಯಲ್ಲಿ ಪಾತ್ರದ, ಆ ಪಾತ್ರಗಳು ಜೀವಿಸುತ್ತಿರುವ ಸಮಾಜದ ಬಗ್ಗೆ ನೂರಾರು ಪುಟಗಳನ್ನು ಬರೆಯಬಹುದು; ಆ ಪಾತ್ರದ ತಲೆಯೊಳಗೆ ಹೊಕ್ಕಿ ಅಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ, ಕನಸು, ನಿರಾಶೆಗಳ ಬಗ್ಗೆಯೂ ಬರೆಯಬಹುದು. ಆದರೆ ಸಿನೆಮಾಗೆ ಆ ಸ್ವಾತಂತ್ರವಿಲ್ಲ. ಇದು ಸಿನೆಮಾದ ಒಂದು ಮಿತಿ. ಈ ಮಿತಿಗಳನ್ನು ಮೀರುತ್ತ, ಆ ತಲ್ಲಣಗಳನ್ನು ದೃಶ್ಯರೂಪಕ್ಕೆ ತರುವಲ್ಲಿ ಅನೇಕ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಆದರೂ ಅಲ್ಲೊಂದು ಸಂಘರ್ಷ ಅತಿಗಿರುತ್ತದೆ.

ಇನ್ನು ಸಂಘರ್ಷಗಳ ಸ್ವರೂಪಗಳನ್ನು ನೋಡುವ. ಮೊದಲನೇಯದು, ನಮಗೆ ಹೆಚ್ಚಾಗಿ ಕಾಣಿಸುವ ಸಂಘರ್ಷವಾದ ಬಾಹ್ಯ ಕಾರಣಗಳಿಂದ ಉಂಟಾಗುವ ಸಂಘರ್ಷ. ಅಂದರೆ, ನಮ್ಮ ನಾಯಕ/ಕಿ ಏನೋ ಗುರಿಯಿಟ್ಟುಕೊಂಡು ಹೋಗುತ್ತಿರುವಾಗ ಆ ಗುರಿಗೆ ಅಡ್ಡಬರುವ ಅಡೆತಡೆಗಳು ಮೂಲತಃವಾಗಿ ಆ ನಾಯಕಿಯ ಪಾತ್ರದ ಹೊರಗಿರುತ್ತವೆ. ಉದಾಹರಣೆಗೆ, ಆ ಹುಡುಗ ತನಗಿಷ್ಟವಾದ ಹುಡುಗಿಯೊಂದಿಗೆ ಮದುವೆ ಮಾಡಿಕೊಳ್ಳುವ ಗುರಿಯನ್ನಿಟ್ಟುಕೊಂಡಿರುವಾಗ ಅದಕ್ಕೆ ಹುಡುಗಿಯ ಅಪ್ಪ ವಿರೋಧ ಒಡ್ಡುತ್ತಾನೆ; ಒಂದು ಹಳ್ಳಿಯಲ್ಲಿ ನಾಯಕಿ ಬಡ ಮಕ್ಕಳ ಸಲುವಾಗಿ ಒಂದು ಶಾಲೆಯನ್ನು ಪ್ರಾರಂಭಿಸುವ ಗುರಿಯನ್ನಿಟ್ಟುಕೊಂಡಿದ್ದಾಳೆ ಆದರೆ ಅಲ್ಲಿ ಖಾಸಗಿ ಶಾಲೆಯನ್ನು ನಡೆಸುವ ಪಟ್ಟಭದ್ರ ಹಿತಾಸಕ್ತಿಗಳು ಇವಳು ಶಾಲೆ ಪ್ರಾರಂಭಿಸಲು ಬಿಡುವುದಿಲ್ಲ.

ಈಗ ಈ ಪ್ರಮುಖ ಪಾತ್ರಧಾರಿಗಳು ತಮ್ಮ ಎದುರಿನ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವುದೇ ಸಂಘರ್ಷ. ಇಲ್ಲಿ ಜೀವನದಲ್ಲಿ ಪ್ರೀತಿ ಎನ್ನುವುದು ಎಷ್ಟು ಮುಖ್ಯ ಅಥವಾ ಬಡಮಕ್ಕಳಿಗಾಗಿ ಶಾಲೆಗಳನ್ನು ಪ್ರಾರಂಭಿಸುವುದು ಎಷ್ಟು ಒಳ್ಳೆಯ ಕೆಲಸ ಎನ್ನುವುದರ ಬಗ್ಗೆ ಲೆಕ್ಷರ್ ಕೊಡಲು ಅವಕಾಶವಿರುವುದಿಲ್ಲ. ಆಯಾ ಸಂಘರ್ಷಗಳ ವ್ಯಾಪ್ತಿಯಲ್ಲೇ ಈ ಸಂಗತಿಗಳು ಹೊರಬರಬೇಕು.

1998 ರಲ್ಲಿ ತೆರೆಕಂಡ ಸತ್ಯಾ ಚಿತ್ರದಲ್ಲಿ ಒಂದು ಪಾತ್ರ ಜೋಕ್ ಹೇಳುವ ಸನ್ನಿವೇಶವಿದೆ. ಒಂದು ಕನ್‍ಸ್ಟ್ರಕ್ಷನ್ ಆಗುತ್ತಿರುವ ಕಟ್ಟಡದಲ್ಲಿ ಕುಳಿತಾಗ ಸ್ನೇಹಲ್ ದಾಬಿಯ ಪಾತ್ರ ಒಂದು ತರಲೆ ಜೋಕ್ ಹೇಳಲಾರಂಭಿಸುತ್ತಾನೆ. ಆ ಜೋಕ್‍ಗೆ ಪ್ರೇಕ್ಷಕರು ನಗಬೇಕು ಎನ್ನುವಷ್ಟರಲ್ಲಿ ಗುಂಡಿನ ಸುರಿಮಳೆಯಾಗಿ ಅಲ್ಲಿಯ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಆ ಸೀನ್ ಜೋಕ್ ಹೇಳಲಂತೂ ಇದ್ದೇ ಇಲ್ಲ, ಜೋಕ್ ಮುಂದುವರೆಯುತ್ತಿದ್ದಾಗಲೂ ಏನೋ ಆಗುವುದು ಎನ್ನುವ ಭಾವನೆ ಗಟ್ಟಿಗೊಳ್ಳುತ್ತಲಿರುತ್ತದೆ. ಗಟ್ಟಿಯಾದ ಸ್ಟ್ರಕ್ಷರ್ ಮತ್ತು ಸಂಘರ್ಷವನ್ನಿಟ್ಟುಕೊಂಡೇ ಲಘು ಸನ್ನಿವೇಶಗಳನ್ನೂ ತೋರಿಸುವುದಕ್ಕೆ ಸತ್ಯಾ ಸಿನೆಮಾ ಒಳ್ಳೆಯ ಉದಾಹರಣೆ.

ಎರಡನೇಯದ್ದು ಆಂತರಿಕ ಸಂಘರ್ಷ. ಒಬ್ಬ ವ್ಯಕ್ತಿಗೆ ಬಾಕ್ಸಿಂಗ್ ಚಾಂಪಿಯನ್‍ಷಿಪ್ ಗೆಲ್ಲಬೇಕಿದೆ, ಒಬ್ಬನಿಗೆ ತಾನು ದುರ್ಬಲ ಎನ್ನುವ ಕೀಳರಿಮೆಯಿದೆ, ಇನ್ನೊಬ್ಬನಿಗೆ ತನ್ನನ್ನು ಯಾರೂ ಇಷ್ಟಪಡಲಾರರು ಎನ್ನುವ ಭಾವನೆಯಿದೆ, ಬಾಲ್ಯದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ ಒಬ್ಬ ಬಾಲಕಿಯು ಯಾವುದೇ ಸಂಬಂಧವನ್ನು ನಿಭಾಯಿಸಲು ಅಸಮರ್ಥಳಾಗಿದ್ದಾಳೆ. ಈಗ ಇವುಗಳನ್ನು ಎದುರಿಸಬೇಕಿದೆ. ಇಲ್ಲಿಯ ಆಯಾ ನಾಯಕ/ಕಿಗೆ ಇರುವ ಅಡೆತಡೆಗಳು ತನ್ನೊಳಗೇ ಹುದುಗಿವೆ. ತನ್ನೊಳಗೇ ಹುದುಗಿರುವ ಶತ್ರುವನ್ನು ಎದುರಿಸುವುದನ್ನು ದೃಶ್ಯ ಮಾಧ್ಯಮದಲ್ಲಿ ತೋರಿಸುವುದು ಕಷ್ಟ ಎನಿಸಬಹುದು. ಆದರೆ ಅನಿಸಿದಷ್ಟು ಕಷ್ಟವಲ್ಲ. ಅಲ್ಲಿಯೂ ಬಾಹ್ಯ ಸಂಗತಿಗಳಿವೆ.

ನಾಯಕ/ಕಿಯ ದೈನಂದಿನ ದೈಹಿಕ ಕ್ರಿಯೆಗಳಿಂದಲೇ ಆ ಸಂಘರ್ಷ ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತದೆ. ತನ್ನ ಸಮಸ್ಯೆ ಮತ್ತು ಅದಕ್ಕಿರುವ ಉತ್ತರಗಳೂ ದೈನಂದಿನ ಕ್ರಿಯೆಗಳಿಂದ ಸ್ಪಷ್ಟವಾಗುವ ಹಾಗೆ ಚಿತ್ರಕಥೆಯನ್ನು ಹೆಣೆಯಬೇಕಾಗುತ್ತದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಎರಡೂ ಬಗೆಯ ಸಂಘರ್ಷಗಳು ಎಲ್ಲಾ ಹಂತಗಳಲ್ಲಿ ಪ್ರತ್ಯೇಕವಾಗಿರಬೇಕಿಲ್ಲ. ಬಾಹ್ಯ ಸಂಘರ್ಷದಲ್ಲಿ ಆಂತರಿಕ ಸಂಘರ್ಷವಿದ್ದರೆ, ಆಂತರಿಕ ಸಂಘರ್ಷದ ಕಥೆಗಳಲ್ಲಿ ಬಾಹ್ಯ ಸಂಗತಿಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಚಿತ್ರಕಥೆ ಬರೆಯುವ ರೂಢಿಸಮ್ಮತ ಕಲಿಕೆಯಲ್ಲಿ ನಾಯಕಿ/ಕ ತನ್ನ ಗುರಿಯನ್ನು ತಲುಪಲು ಹರಸಾಹಸ ಪಡುತ್ತಾಳೆ/ನೆ; ಅವಳಿಗೆ ತನ್ನ ಗುರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ; ಚಿತ್ರದಲ್ಲಿ ಆಗುವ ಹೆಚ್ಚಿನ ಘಟನೆಗಳನ್ನು ನಾಯಕಿಯೇ ಮೊದಲು ಮಾಡುತ್ತಾಳೆ ಅದರಿಂದ ಪ್ರೇಕ್ಷಕ ತನ್ನನ್ನು ಆ ನಾಯಕಿಯಲ್ಲಿ ಕಂಡುಕೊಳ್ಳುತ್ತಾನೆ ಎನ್ನುವ ನಂಬಿಕೆ. ಆದರೆ ಇವ್ಯಾವೂ ಅನಿವಾರ್ಯವಲ್ಲ. ಅನೇಕ ಕಥೆಗಳಲ್ಲಿ ನಾಯಕಿಗೆ ತನ್ನ ಗುರಿಯ ಅರಿವು ಇರುವುದಿಲ್ಲ. ಪರಿಸ್ಥಿತಿಯ ಕೂಸು ಆ ನಾಯಕಿ. ಅದರರ್ಥ ಅಲ್ಲಿ ಸಂಘರ್ಷ ತಪ್ಪಿಲ್ಲ.

ತನಗರಿವಿಲ್ಲದೇ ಆ ನಾಯಕಿ ಹೋರಾಟದ ಪಯಣವನ್ನು ಕ್ರಮಿಸುತ್ತಾಳೆ. ಕೆಲವು ಚಿತ್ರಗಳಲ್ಲಿ ನಾಯಕಿಯ ಹೋರಾಟ, ಸಂಘರ್ಷ ಸ್ಪಷ್ಟವಾಗಿ ಕಂಡುಬರುವುದಿಲ್ಲ. ಮತ್ತು ಆ ಸಂಘರ್ಷ ಅವಳದ್ದೇ ಆಗಿರಬೇಕೆನ್ನುವ ನಿಯಮವೂ ಇಲ್ಲ. ಅಲೆಕ್ಸಾಂಡರ್ ಪೇನ್‍ನ ಮೊದಲ ಚಿತ್ರ ಸಿಟಿಝನ್ ರೂತ್‍ನಲ್ಲಿ ನಾಯಕಿ ರೂತ್ ಗರ್ಭಿಣಿ. ರಸ್ತೆಯಲ್ಲಿ ಬದುಕುತ್ತಿರುವ ಅವಳಿಗೆ ಮಗುವನ್ನು ಉಳಿಸಿಕೊಳ್ಳಬೇಕೇ, ಗರ್ಭಪಾತ ಮಾಡಿಸಿಕೊಳ್ಳಬೇಕೇ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. ತನ್ನ ಹೊರಗಿನ ಪರಿಸ್ಥಿತಿ ಬದಲಾದಂತೆ ತನಗೆ ಸೂಕ್ತವೆನಿಸಿದ ಹಾಗೆ ಅವಳು ಪ್ರತಿಕ್ರಿಯಿಸುತ್ತಾಳೆ. ಅಬೌಟ್ ಶ್ಮಿತ್ ಚಿತ್ರದಲ್ಲಿ ನಾಯಕ ಶ್ಮಿತ್ ಈಗ ತಾನೆ ನಿವೃತ್ತಿ ಹೊಂದಿದ್ದಾನೆ. ಮುಂದೇನು ಮಾಡಬೇಕೆನ್ನುವುದು ತಿಳಿಯದು. ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಲೇ ಅವನು ತನ್ನ ಬಗ್ಗೆ ಕಂಡುಕೊಳ್ಳುತ್ತಾನೆ. ಆದರೆ ಅದರಲ್ಲೂ ಸಂಘರ್ಷವಿದೆ.

ಯಾವುದೇ ಸಂಘರ್ಷದಲ್ಲಿ ನಾಯಕಿ ಸರಿ ಎನಿಸುವ ದಾರಿಯಲ್ಲಿದ್ದು, ಆ ನಾಯಕಿಯ ವಿರುದ್ಧದ ಶಕ್ತಿಗಳು ತಪ್ಪಾದ ದಾರಿಯಲ್ಲೇ ಇರಬೇಕು ಎನ್ನುವ ಅನಿವಾರ್ಯವೂ ಇಲ್ಲ. ನಾಯಕಿಯೊಂದಿಗೆ ಅವಳ ಶತ್ರುಗಳೂ ಪರಿಸ್ಥಿತಿಯ ಕೂಸುಗಳೇ. ಆ ಶಕ್ತಿಗಳಿಗೂ ತಮ್ಮದೇ ಆದ ಕಾರಣಗಳಿರುತ್ತವೆ. ಅದೇ ಕಾರಣಕ್ಕೆ ಅನೇಕ ಸಲ ಖಳನಾಯಕರ ಪಾತ್ರಗಳೂ ನಮಗೆ ಇಷ್ಟವಾಗುತ್ತವೆ.
ನಾಯಕಿಯ ಈ ಸಂಘರ್ಷದಲ್ಲಿ ಯಾರು ಗೆಲ್ಲಬೇಕು ಎನ್ನುವುದು ಅಷ್ಟು ಮುಖ್ಯವಲ್ಲ. ನಾಯಕಿ ತನ್ನ ಗುರಿ ಮುಟ್ಟುವಲ್ಲಿ ವಿಫಲವಾದರೂ ಸಂಘರ್ಷ ನಿರಂತರವಾಗಿರುವುದರಿಂದ ಚಿತ್ರ ಗೆಲ್ಲುತ್ತದೆ. ಆ ಚಿತ್ರದ ಆಶಯ ಮುಟ್ಟುತ್ತದೆ. ಆದರೆ ಆ ಸೋಲು ಗೆಲುವಿನ ದಡಕ್ಕೆ ಮುಟ್ಟಿಸುವುದು ಚಿತ್ರದ ಕರ್ತವ್ಯ. ಸಿನೆಮಾದ ಅಂತ್ಯದಲ್ಲಿ ಆ ಸಂಘರ್ಷ ಮುಕ್ತಾಯವಾಗುತ್ತದೆ ಅಥವಾ ಇನ್ನೊಂದು ಸ್ವರೂಪವನ್ನು ಪಡೆದುಕೊಳ್ಳುತ್ತದೆ. ನ್ಯೂಟನ್‍ನ ನಿಯಮದಂತೆ ಪ್ರತೀ ಕ್ರಿಯೆಗೂ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ ಎಂದಾಗ ಸಂಘರ್ಷ ಎನ್ನುವುದು ನಿರಂತರವಲ್ಲದೇ?

ಇದನ್ನು ಓದಿ: ಸಿನಿಮಾ ಮತ್ತು ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...