Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...