Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...