Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...