Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...