Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...