Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...