Homeಕರ್ನಾಟಕಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

ಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

- Advertisement -
- Advertisement -

ಸಹಕಾರಿ ಸಂಸ್ಥೆಗಳಲ್ಲಿ ನೀಡುವ ಅಲ್ಪಾವದಿ ಸಾಲದ ನೀತಿಯಲ್ಲಿ ಸರಕಾರ ಮಾರ್ಪಾಡು ಮಾಡಿದ್ದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧಿಸಿದೆ ಹಾಗೂ ಇದು ರೈತರಿಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದೆ.

“ಅಲ್ಪಾವದಿ ಕೃಷಿ ಸಾಲ ಯೋಜನೆಯ ಮೂಲಕ ಸಹಕಾರಿ ಸಂಸ್ಥೆಗಳಲ್ಲಿ ಮೂರು ಲಕ್ಷದವರೆಗೆ ಕೊಡುವ ಶೂನ್ಯ ಬಡ್ಡಿದರದ ಸಾಲ ನೀಡುವ ನೀತಿಯನ್ನು ಮಾರ್ಪಾಡು ಮಾಡಿ, ಒಂದು ಕುಟುಂಬಕ್ಕೆ ಮೂರು ಲಕ್ಷದವರೆಗೆ ನೀಡಿದ ಸಾಲಗಳಿಗೆ ಮಾತ್ರ ಶೂನ್ಯಬಡ್ಡಿ ಅನ್ವಯವಾಗುತ್ತದೆ ಎಂಬ ಷರತ್ತು ರೈತರಿಗೆ ಮಾಡಿದ ಅನ್ಯಾಯ, ಇದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡುವ ಸಾಲದ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೇಳಿದೆ

“ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಒಳಗಾಗುತ್ತಿರುವುದನ್ನು ತಡೆಗಟ್ಟಲು ರೂಪಿಸಿರುವ ಮಾನದಂಡದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದು ಕೂಡ ಮುಖ್ಯ ಅಂಶವಾಗಿದೆ ಆದರೆ ಸರಕಾರ ಹೆಚ್ಚುವರಿ ಷರತ್ತು ವಿಧಿಸಿ ರೈತರು ಪಡೆಯುತ್ತಿದ್ದ ಅನುಕೂಲಕ್ಕೆ ಕತ್ತರಿ ಹಾಕಿದೆ” ಎಂದು ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ನಾಗೇಂದ್ರ ಅವರು “ಒಂದು ಕುಟುಂಬದಲ್ಲಿ ಪ್ರತ್ಯೇಕ ಪಹಣಿ ಹೊಂದಿರುವವರು ಇರುತ್ತಾರೆ, ಹಾಗೆಯೇ ಬೇರೆ ಬೇರೆಯಾಗಿದ್ದರೂ ಇನ್ನು ಖಾತೆ ಮಾಡಿಸಿಕೊಳ್ಳದವರೂ ಇರುತ್ತಾರೆ. ಅಲ್ಲದೆ ಒಟ್ಟು ಕುಟುಂಬದಲ್ಲಿ ಇದ್ದು ಜಂಟಿ ವ್ಯವಸಾಯ ಮಾಡುವವರು ಕೂಡ ಇದ್ದಾರೆ. ಹಲವರಿಗೆ ಅನುಕೂಲವಾಗುವಂತೆ ಸಾಲದ ಅನುಕೂಲವನ್ನು ನೀಡಬೇಕೆ ಹೊರತು ಒಂದೆ ಕುಟುಂಬ ಎಂದು ಶರತ್ತು ವಿಧಿಸಬಾರದು” ಎಂದು ಹೇಳಿದ್ದಾರೆ.

“ಈ ಲೋಪವನ್ನು ಕೂಡಲೇ ಸರಕಾರ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಲಾಕ್ ಡೌನ್ ಅವಧಿಯ ನಂತರ ಇದರ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ನಾಗೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಉತ್ಪನ್ನಗಳಿಗೆ ಮಾರಾಟ ವ್ಯವಸ್ಥೆ ಮಾಡುವುದಾಗಿ ಹೇಳಿಕೊಂಡಿದ್ದ ಸರಕಾರ ಮಾತಿನಂತೆ ನಡೆದುಕೊಳ್ಳುತ್ತಿಲ್ಲ

ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಸರಕಾರ ಹೇಳಿದೆ ಆದರೆ ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದೆ, ಕಾರ್ಯರೂಪಕ್ಕೆ ಬಂದಿಲ್ಲ. ಬೀದರ್ ನಲ್ಲಿ ರೈತರು ಕಲ್ಲಂಗಡಿ ಹಣ್ಣನ್ನು ಬೀದಿಗೆ ಸುರಿಯುತ್ತಿದ್ದಾರೆ, ಎಲ್ಲಾ ಕಡೆ ತರಕಾರಿಗಳು ಮಾರುಕಟ್ಟೆ ಇಲ್ಲದೆ ರೈತರ ಹೊಳಗಳಲ್ಲೇ ಕೊಳೆಯುತ್ತಿದೆ, ಬಾಳೆಹಣ್ಣಿಗೆ ಸೂಕ್ತ ಮಾರುಕಟ್ಟೆ ಕೂಡಾ ಇಲ್ಲ” ಎಂದು ನಾಗೇಂದ್ರ  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...