Homeಕರ್ನಾಟಕಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

ಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

- Advertisement -
- Advertisement -

ಸಹಕಾರಿ ಸಂಸ್ಥೆಗಳಲ್ಲಿ ನೀಡುವ ಅಲ್ಪಾವದಿ ಸಾಲದ ನೀತಿಯಲ್ಲಿ ಸರಕಾರ ಮಾರ್ಪಾಡು ಮಾಡಿದ್ದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧಿಸಿದೆ ಹಾಗೂ ಇದು ರೈತರಿಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದೆ.

“ಅಲ್ಪಾವದಿ ಕೃಷಿ ಸಾಲ ಯೋಜನೆಯ ಮೂಲಕ ಸಹಕಾರಿ ಸಂಸ್ಥೆಗಳಲ್ಲಿ ಮೂರು ಲಕ್ಷದವರೆಗೆ ಕೊಡುವ ಶೂನ್ಯ ಬಡ್ಡಿದರದ ಸಾಲ ನೀಡುವ ನೀತಿಯನ್ನು ಮಾರ್ಪಾಡು ಮಾಡಿ, ಒಂದು ಕುಟುಂಬಕ್ಕೆ ಮೂರು ಲಕ್ಷದವರೆಗೆ ನೀಡಿದ ಸಾಲಗಳಿಗೆ ಮಾತ್ರ ಶೂನ್ಯಬಡ್ಡಿ ಅನ್ವಯವಾಗುತ್ತದೆ ಎಂಬ ಷರತ್ತು ರೈತರಿಗೆ ಮಾಡಿದ ಅನ್ಯಾಯ, ಇದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡುವ ಸಾಲದ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೇಳಿದೆ

“ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಒಳಗಾಗುತ್ತಿರುವುದನ್ನು ತಡೆಗಟ್ಟಲು ರೂಪಿಸಿರುವ ಮಾನದಂಡದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದು ಕೂಡ ಮುಖ್ಯ ಅಂಶವಾಗಿದೆ ಆದರೆ ಸರಕಾರ ಹೆಚ್ಚುವರಿ ಷರತ್ತು ವಿಧಿಸಿ ರೈತರು ಪಡೆಯುತ್ತಿದ್ದ ಅನುಕೂಲಕ್ಕೆ ಕತ್ತರಿ ಹಾಕಿದೆ” ಎಂದು ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ನಾಗೇಂದ್ರ ಅವರು “ಒಂದು ಕುಟುಂಬದಲ್ಲಿ ಪ್ರತ್ಯೇಕ ಪಹಣಿ ಹೊಂದಿರುವವರು ಇರುತ್ತಾರೆ, ಹಾಗೆಯೇ ಬೇರೆ ಬೇರೆಯಾಗಿದ್ದರೂ ಇನ್ನು ಖಾತೆ ಮಾಡಿಸಿಕೊಳ್ಳದವರೂ ಇರುತ್ತಾರೆ. ಅಲ್ಲದೆ ಒಟ್ಟು ಕುಟುಂಬದಲ್ಲಿ ಇದ್ದು ಜಂಟಿ ವ್ಯವಸಾಯ ಮಾಡುವವರು ಕೂಡ ಇದ್ದಾರೆ. ಹಲವರಿಗೆ ಅನುಕೂಲವಾಗುವಂತೆ ಸಾಲದ ಅನುಕೂಲವನ್ನು ನೀಡಬೇಕೆ ಹೊರತು ಒಂದೆ ಕುಟುಂಬ ಎಂದು ಶರತ್ತು ವಿಧಿಸಬಾರದು” ಎಂದು ಹೇಳಿದ್ದಾರೆ.

“ಈ ಲೋಪವನ್ನು ಕೂಡಲೇ ಸರಕಾರ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಲಾಕ್ ಡೌನ್ ಅವಧಿಯ ನಂತರ ಇದರ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ನಾಗೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಉತ್ಪನ್ನಗಳಿಗೆ ಮಾರಾಟ ವ್ಯವಸ್ಥೆ ಮಾಡುವುದಾಗಿ ಹೇಳಿಕೊಂಡಿದ್ದ ಸರಕಾರ ಮಾತಿನಂತೆ ನಡೆದುಕೊಳ್ಳುತ್ತಿಲ್ಲ

ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಸರಕಾರ ಹೇಳಿದೆ ಆದರೆ ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದೆ, ಕಾರ್ಯರೂಪಕ್ಕೆ ಬಂದಿಲ್ಲ. ಬೀದರ್ ನಲ್ಲಿ ರೈತರು ಕಲ್ಲಂಗಡಿ ಹಣ್ಣನ್ನು ಬೀದಿಗೆ ಸುರಿಯುತ್ತಿದ್ದಾರೆ, ಎಲ್ಲಾ ಕಡೆ ತರಕಾರಿಗಳು ಮಾರುಕಟ್ಟೆ ಇಲ್ಲದೆ ರೈತರ ಹೊಳಗಳಲ್ಲೇ ಕೊಳೆಯುತ್ತಿದೆ, ಬಾಳೆಹಣ್ಣಿಗೆ ಸೂಕ್ತ ಮಾರುಕಟ್ಟೆ ಕೂಡಾ ಇಲ್ಲ” ಎಂದು ನಾಗೇಂದ್ರ  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...