Homeಕರ್ನಾಟಕಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

ಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

- Advertisement -
- Advertisement -

ಸಹಕಾರಿ ಸಂಸ್ಥೆಗಳಲ್ಲಿ ನೀಡುವ ಅಲ್ಪಾವದಿ ಸಾಲದ ನೀತಿಯಲ್ಲಿ ಸರಕಾರ ಮಾರ್ಪಾಡು ಮಾಡಿದ್ದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧಿಸಿದೆ ಹಾಗೂ ಇದು ರೈತರಿಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದೆ.

“ಅಲ್ಪಾವದಿ ಕೃಷಿ ಸಾಲ ಯೋಜನೆಯ ಮೂಲಕ ಸಹಕಾರಿ ಸಂಸ್ಥೆಗಳಲ್ಲಿ ಮೂರು ಲಕ್ಷದವರೆಗೆ ಕೊಡುವ ಶೂನ್ಯ ಬಡ್ಡಿದರದ ಸಾಲ ನೀಡುವ ನೀತಿಯನ್ನು ಮಾರ್ಪಾಡು ಮಾಡಿ, ಒಂದು ಕುಟುಂಬಕ್ಕೆ ಮೂರು ಲಕ್ಷದವರೆಗೆ ನೀಡಿದ ಸಾಲಗಳಿಗೆ ಮಾತ್ರ ಶೂನ್ಯಬಡ್ಡಿ ಅನ್ವಯವಾಗುತ್ತದೆ ಎಂಬ ಷರತ್ತು ರೈತರಿಗೆ ಮಾಡಿದ ಅನ್ಯಾಯ, ಇದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡುವ ಸಾಲದ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೇಳಿದೆ

“ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಒಳಗಾಗುತ್ತಿರುವುದನ್ನು ತಡೆಗಟ್ಟಲು ರೂಪಿಸಿರುವ ಮಾನದಂಡದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದು ಕೂಡ ಮುಖ್ಯ ಅಂಶವಾಗಿದೆ ಆದರೆ ಸರಕಾರ ಹೆಚ್ಚುವರಿ ಷರತ್ತು ವಿಧಿಸಿ ರೈತರು ಪಡೆಯುತ್ತಿದ್ದ ಅನುಕೂಲಕ್ಕೆ ಕತ್ತರಿ ಹಾಕಿದೆ” ಎಂದು ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ನಾಗೇಂದ್ರ ಅವರು “ಒಂದು ಕುಟುಂಬದಲ್ಲಿ ಪ್ರತ್ಯೇಕ ಪಹಣಿ ಹೊಂದಿರುವವರು ಇರುತ್ತಾರೆ, ಹಾಗೆಯೇ ಬೇರೆ ಬೇರೆಯಾಗಿದ್ದರೂ ಇನ್ನು ಖಾತೆ ಮಾಡಿಸಿಕೊಳ್ಳದವರೂ ಇರುತ್ತಾರೆ. ಅಲ್ಲದೆ ಒಟ್ಟು ಕುಟುಂಬದಲ್ಲಿ ಇದ್ದು ಜಂಟಿ ವ್ಯವಸಾಯ ಮಾಡುವವರು ಕೂಡ ಇದ್ದಾರೆ. ಹಲವರಿಗೆ ಅನುಕೂಲವಾಗುವಂತೆ ಸಾಲದ ಅನುಕೂಲವನ್ನು ನೀಡಬೇಕೆ ಹೊರತು ಒಂದೆ ಕುಟುಂಬ ಎಂದು ಶರತ್ತು ವಿಧಿಸಬಾರದು” ಎಂದು ಹೇಳಿದ್ದಾರೆ.

“ಈ ಲೋಪವನ್ನು ಕೂಡಲೇ ಸರಕಾರ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಲಾಕ್ ಡೌನ್ ಅವಧಿಯ ನಂತರ ಇದರ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ನಾಗೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಉತ್ಪನ್ನಗಳಿಗೆ ಮಾರಾಟ ವ್ಯವಸ್ಥೆ ಮಾಡುವುದಾಗಿ ಹೇಳಿಕೊಂಡಿದ್ದ ಸರಕಾರ ಮಾತಿನಂತೆ ನಡೆದುಕೊಳ್ಳುತ್ತಿಲ್ಲ

ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಸರಕಾರ ಹೇಳಿದೆ ಆದರೆ ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದೆ, ಕಾರ್ಯರೂಪಕ್ಕೆ ಬಂದಿಲ್ಲ. ಬೀದರ್ ನಲ್ಲಿ ರೈತರು ಕಲ್ಲಂಗಡಿ ಹಣ್ಣನ್ನು ಬೀದಿಗೆ ಸುರಿಯುತ್ತಿದ್ದಾರೆ, ಎಲ್ಲಾ ಕಡೆ ತರಕಾರಿಗಳು ಮಾರುಕಟ್ಟೆ ಇಲ್ಲದೆ ರೈತರ ಹೊಳಗಳಲ್ಲೇ ಕೊಳೆಯುತ್ತಿದೆ, ಬಾಳೆಹಣ್ಣಿಗೆ ಸೂಕ್ತ ಮಾರುಕಟ್ಟೆ ಕೂಡಾ ಇಲ್ಲ” ಎಂದು ನಾಗೇಂದ್ರ  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...