Homeಕರ್ನಾಟಕಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

ಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ

- Advertisement -
- Advertisement -

ಸಹಕಾರಿ ಸಂಸ್ಥೆಗಳಲ್ಲಿ ನೀಡುವ ಅಲ್ಪಾವದಿ ಸಾಲದ ನೀತಿಯಲ್ಲಿ ಸರಕಾರ ಮಾರ್ಪಾಡು ಮಾಡಿದ್ದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧಿಸಿದೆ ಹಾಗೂ ಇದು ರೈತರಿಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದೆ.

“ಅಲ್ಪಾವದಿ ಕೃಷಿ ಸಾಲ ಯೋಜನೆಯ ಮೂಲಕ ಸಹಕಾರಿ ಸಂಸ್ಥೆಗಳಲ್ಲಿ ಮೂರು ಲಕ್ಷದವರೆಗೆ ಕೊಡುವ ಶೂನ್ಯ ಬಡ್ಡಿದರದ ಸಾಲ ನೀಡುವ ನೀತಿಯನ್ನು ಮಾರ್ಪಾಡು ಮಾಡಿ, ಒಂದು ಕುಟುಂಬಕ್ಕೆ ಮೂರು ಲಕ್ಷದವರೆಗೆ ನೀಡಿದ ಸಾಲಗಳಿಗೆ ಮಾತ್ರ ಶೂನ್ಯಬಡ್ಡಿ ಅನ್ವಯವಾಗುತ್ತದೆ ಎಂಬ ಷರತ್ತು ರೈತರಿಗೆ ಮಾಡಿದ ಅನ್ಯಾಯ, ಇದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡುವ ಸಾಲದ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೇಳಿದೆ

“ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಒಳಗಾಗುತ್ತಿರುವುದನ್ನು ತಡೆಗಟ್ಟಲು ರೂಪಿಸಿರುವ ಮಾನದಂಡದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದು ಕೂಡ ಮುಖ್ಯ ಅಂಶವಾಗಿದೆ ಆದರೆ ಸರಕಾರ ಹೆಚ್ಚುವರಿ ಷರತ್ತು ವಿಧಿಸಿ ರೈತರು ಪಡೆಯುತ್ತಿದ್ದ ಅನುಕೂಲಕ್ಕೆ ಕತ್ತರಿ ಹಾಕಿದೆ” ಎಂದು ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ನಾಗೇಂದ್ರ ಅವರು “ಒಂದು ಕುಟುಂಬದಲ್ಲಿ ಪ್ರತ್ಯೇಕ ಪಹಣಿ ಹೊಂದಿರುವವರು ಇರುತ್ತಾರೆ, ಹಾಗೆಯೇ ಬೇರೆ ಬೇರೆಯಾಗಿದ್ದರೂ ಇನ್ನು ಖಾತೆ ಮಾಡಿಸಿಕೊಳ್ಳದವರೂ ಇರುತ್ತಾರೆ. ಅಲ್ಲದೆ ಒಟ್ಟು ಕುಟುಂಬದಲ್ಲಿ ಇದ್ದು ಜಂಟಿ ವ್ಯವಸಾಯ ಮಾಡುವವರು ಕೂಡ ಇದ್ದಾರೆ. ಹಲವರಿಗೆ ಅನುಕೂಲವಾಗುವಂತೆ ಸಾಲದ ಅನುಕೂಲವನ್ನು ನೀಡಬೇಕೆ ಹೊರತು ಒಂದೆ ಕುಟುಂಬ ಎಂದು ಶರತ್ತು ವಿಧಿಸಬಾರದು” ಎಂದು ಹೇಳಿದ್ದಾರೆ.

“ಈ ಲೋಪವನ್ನು ಕೂಡಲೇ ಸರಕಾರ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಲಾಕ್ ಡೌನ್ ಅವಧಿಯ ನಂತರ ಇದರ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ನಾಗೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಉತ್ಪನ್ನಗಳಿಗೆ ಮಾರಾಟ ವ್ಯವಸ್ಥೆ ಮಾಡುವುದಾಗಿ ಹೇಳಿಕೊಂಡಿದ್ದ ಸರಕಾರ ಮಾತಿನಂತೆ ನಡೆದುಕೊಳ್ಳುತ್ತಿಲ್ಲ

ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಸರಕಾರ ಹೇಳಿದೆ ಆದರೆ ಇದು ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದೆ, ಕಾರ್ಯರೂಪಕ್ಕೆ ಬಂದಿಲ್ಲ. ಬೀದರ್ ನಲ್ಲಿ ರೈತರು ಕಲ್ಲಂಗಡಿ ಹಣ್ಣನ್ನು ಬೀದಿಗೆ ಸುರಿಯುತ್ತಿದ್ದಾರೆ, ಎಲ್ಲಾ ಕಡೆ ತರಕಾರಿಗಳು ಮಾರುಕಟ್ಟೆ ಇಲ್ಲದೆ ರೈತರ ಹೊಳಗಳಲ್ಲೇ ಕೊಳೆಯುತ್ತಿದೆ, ಬಾಳೆಹಣ್ಣಿಗೆ ಸೂಕ್ತ ಮಾರುಕಟ್ಟೆ ಕೂಡಾ ಇಲ್ಲ” ಎಂದು ನಾಗೇಂದ್ರ  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...