Homeಚಳವಳಿಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಸಂವಿಧಾನವನ್ನು ಇಂಚಿಂಚೆ ಕಸಿಯಲಾಗುಗತ್ತಿದೆ. ಸವಲತ್ತುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ತಿಳಿಯಬೇಕು. ಅದರ ವಿರುದ್ಧ ಐಕ್ಯ ಹೋರಾಟ ನಡೆಸಬೇಕು.

- Advertisement -
- Advertisement -

ಈ ದೇಶದಲ್ಲಿ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರುದ್ಧ ಸಂಘರ್ಷ ಮಾಡುವುದು ನಮ್ಮ ಹಕ್ಕಾಗಿದೆ ಎಂದು ಹೋರಾಟಗಾರ್ತಿ ರಮಾಬಾಯಿ ಅಂಬೇಡ್ಕರ್ ಅಭಿಪ್ರಾಯಪಟ್ಟರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ಅಂಬೇಡ್ಕರರ ಪರಿನಿರ್ವಾಣದ ದಿನ. ಅವರು ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದಾರೆ. ಬಡವರಿಗೆ, ಬಲ್ಲಿದರಿಗೆಲ್ಲರಿಗೂ ಒಂದು ಮತದಾನದ ಹಕ್ಕು ನೀಡಿದ್ದಾರೆ. ಅದನ್ನು ಸಮರ್ಪಕವಾಗಿ ಬಳಸುವುದು ನಮ್ಮ ಜವಾಬ್ದಾರಿ” ಎಂದರು.

ಮಹಿಳಾ ಶಿಕ್ಷಣದ ಬಾಬಾ ಸಾಹೇಬರು ಹೇಳಿದ್ದಾರೆ. ಮಹಿಳಾ ಶಿಕ್ಷಣದಿಂದ ಇಡೀ ಸಮಾಜದ ಧೀಶಕ್ತಿಯಾಗುತ್ತಾಳೆ ಎಂದರು. ಒಂದು ಸಮಾಜದ ಅಭಿವೃದ್ದಿ ಅಲ್ಲಿನ ಮಹಿಳೆಯರ ಶಿಕ್ಷಣದಿಂದ ಅಳೆಯಬೇಕು ಎಂದರು. ನಾವು ಬಾಬಾ ಸಾಹೇಬರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವುದೆಂದರೆ ಶಿಕ್ಷಣಕ್ಕಾಗಿ ಹೋರಾಡುವುದಾಗಿದೆ ಎಂದರು.

ನೀವು ಬಾಬಾ ಸಾಹೇಬರು ಹೇಳಿದಂತೆ ನಿಮ್ಮ ನಾಯಕರನ್ನು ಆಯ್ಕೆ ಮಾಡಿಕೊಂಡು ಸಂಘಟನೆ ಕಟ್ಟಿ, ಸಂಘರ್ಷ ಮಾಡಬೇಕು. ಇಂದು ಕೇಂದ್ರ ಸರ್ಕಾರ ದಲಿತ ದಮನಿತರ ವಿದ್ಯಾರ್ಥಿ ವೇತನ ಕಿತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಕಿತ್ತುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಬಾ ಸಾಹೇಬರು ಹೇಳಿದಂತೆ ಹೋರಾಟವೇ ಮುಖ್ಯವಾಗಿದೆ ಎಂದರು.

ಸಂವಿಧಾನವನ್ನು ಇಂಚಿಂಚೆ ಕಸಿಯಲಾಗುಗತ್ತಿದೆ. ಸವಲತ್ತುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ತಿಳಿಯಬೇಕು. ಅದರ ವಿರುದ್ಧ ಐಕ್ಯ ಹೋರಾಟ ನಡೆಸಬೇಕು. ದಲಿತ ಸಂಘಟನೆಗಳು ಒಂದಾಗುತ್ತಿರುವುದು ಭರವಸೆ ಮೂಡಿಸಿದೆ ಎಂದರು.

ಇಷ್ಟು ದೊಡ್ಡ ಜನರು ಸೇರಿರುವುದನ್ನು ನೋಡಿ ಸಂತೋಷವಾಗಿದೆ. ನಾವು ಸಂಘರ್ಷದ ಹಾದಿ ತುಳಿಯಬೇಕಿದೆ. ಡಾ. ಆನಂದ್ ತೇಲ್ತುಂಬ್ದೆಯವರು ಜೈಲಿನಲ್ಲಿದ್ದಾಗ ನೀವೆಲ್ಲ ಹೋರಾಟ ಮಾಡಿ ನಮ್ಮ ಜೊತೆಯಲ್ಲಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ನನ್ನನ್ನು ಇಲ್ಲಿ ಕರೆಸಿ ಗೌರವ ಕೊಟ್ಟಿದ್ದೀರಿ. ಅದಕ್ಕೆ ಧನ್ಯವಾದಗಳು ಎಂದರು.

ಇದನ್ನೂ ಓದಿ; DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...