Homeಮುಖಪುಟಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

’ನಮ್ಮ ಮಕ್ಕಳು ತಪ್ಪಿತಸ್ಥರಲ್ಲ. ಅವರಿಗೆ ನ್ಯಾಯ ಸಿಗುತ್ತದೆ. ಈ ಭಾರತಕ್ಕೆ ಹೆಚ್ಚು ದೇವಂಗಾನರು, ಹೆಚ್ಚು ನತಾಶಾಗಳು ಬೇಕಾಗಿದ್ದಾರೆ’

- Advertisement -
- Advertisement -

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿ ಬಂಧಿತರಾಗಿದ್ದ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ ನರ್ವಾಲ್‌, ದೇವಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್‌ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿದೆ. ಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಮೂವರು ಸಾಮಾಜಿಕ ಕಾರ್ಯಕರ್ತರು ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದು, ಈಗ ಜಾಮೀನು ಮಂಜೂರಾಗಿದೆ.

ತಮ್ಮ ಮಕ್ಕಳ ಹೋರಾಟದ ಬಗ್ಗೆ ಪಿಂಜ್ರಾ ತೋಡ್ ಕಾರ್ಯಕರ್ತೆ ದೇವಂಗನಾ ಕಾಳಿತಾ ಅವರ ತಾಯಿ ಡಾ. ಕಲ್ಪನಾ ಡೆಕ್ಕಾ ಕಾಳಿತಾ ಮಾತನಾಡಿದ್ದಾರೆ. ಮಗಳ ಕೆಲಸದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಆಕೆಯ ಹೋರಾಟಕ್ಕೆ ಬೆಂಬಲ ನೀಡಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ದೇವಂಗನಾ ಅವರು ಯಾವಾಗ ರಾಜಕೀಯ ಹೋರಾಟಗಳತ್ತ ಹೆಜ್ಜೆ ಹಾಕಿದರು..?

ದೇವಂಗನಾ ತನ್ನ ಶಾಲಾ ದಿನಗಳಲ್ಲಿಯೂ ಸಹ ಆಕೆ ನ್ಯಾಯ ಮತ್ತು ಅನ್ಯಾಯದ ನಡುವಿನ ವ್ಯತ್ಯಾಸಗಳ ಬಗ್ಗೆ ಅರಿವು ಹೊಂದಿದ್ದಳು. ಆಕೆಗೆ ರಾಜಕೀಯ ಮತ್ತು ಮಹಿಳೆಯರ ಹಕ್ಕುಗಳ ಬಗ್ಗೆ ತಿಳಿದಿತ್ತು. ತಪ್ಪು ನಡೆಯುತ್ತಿದ್ದರೆ ಅದರ ವಿರುದ್ಧ ಮಾತನಾಡುತ್ತಿದ್ದಳು. ಸಾಮಾಜಿಕ ಹೋರಾಟ ಅವಳ ಸ್ವಂತ ಜಾಗೃತ ನಿರ್ಧಾರವಾಗಿತ್ತು. ಅವಳ ನಿರ್ಧಾರವನ್ನು ನಾವೆಲ್ಲರೂ ಬೆಂಬಲಿಸಿದ್ದೇವೆ. ಅವಳು ಸ್ವತಂತ್ರ ಹುಡುಗಿಯಾಗಿದ್ದು, ಯಾವಾಗಲೂ ತಾನೇನು ಮಾಡಬೇಕು ಎಂದು ತಾನೇ ನಿರ್ಧರಿಸುತ್ತಾಳೆ. ಮುಂದಿನ ದಿನಗಳಲ್ಲಿಯೂ ಅವಳು ಹಾಗೆ ಮುಂದುವರಿಯುತ್ತಾಳೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ ಬಗ್ಗೆ ನಿಮಗೆ ತಿಳಿದಿದೆಯೇ..?

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ದೇವಂಗನಾ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ನಮಗೆ ತಿಳಿದಿತ್ತು. ಆದರೆ ಅದೇ ಸಮಯದಲ್ಲಿ, ಅವಳು ಎಂದಿಗೂ ಯಾವುದೇ ಹಿಂಸೆ, ಗಲಭೆ ಅಥವಾ ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂಬ ವಿಶ್ವಾಸ ನಮಗಿತ್ತು.

ನಾವು ಅಸ್ಸಾಂನ ಜನರು, ಎನ್ಆರ್‌ಸಿಯನ್ನು ಬಹಳ ಹತ್ತಿರದಿಂದ ನೋಡಿದ್ದೇವೆ. ನಮ್ಮ ಸುತ್ತಲಿನ ಹಲವಾರು ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ತಮ್ಮ ಇರುವಿಕೆಯ ಬಗ್ಗೆ ಯಾವುದೇ ದಾಖಲೆಗಳಿಲ್ಲದ ಕಾರಣ ಅವರು ಎಲ್ಲವನ್ನೂ ಕಳೆದುಕೊಂಡರು. ಅಸ್ಸಾಂನಲ್ಲಿ ಸಿಎಎ-ಎನ್ಆರ್‌ಸಿ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದಿವೆ. ನಾನು ಪ್ರಾಧ್ಯಾಪಕಿ. ನನ್ನ ವಿಶ್ವವಿದ್ಯಾಲಯದಲ್ಲಿಯೂ ಸಹ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ನಾನು ಕೂಡ ಭಾಗವಹಿಸಿದ್ದೇನೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ತಪ್ಪಲ್ಲ.

ಇದನ್ನೂ ಓದಿ: ಜಾಮೀನು ಸಿಕ್ಕರೂ ಬಿಡುಗಡೆಯಿಲ್ಲ!-ಹೈಕೋರ್ಟ್‌ ಕದ ತಟ್ಟಿದ ವಿದ್ಯಾರ್ಥಿಗಳು

ಆಕೆಯನ್ನು ಬಂಧಿಸಿದ ದಿನ ಏನಾಯಿತು..?

ಅವಳು ಸೆರೆವಾಸ ಅನುಭವಿಸಬಹುದು ಎಂಬ ಕಲ್ಪನೆ ನಮಗಿರಲಿಲ್ಲ. 2020 ರ ಮೇ 23 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಚಾರಣೆ ನಡೆಸಲಾಗುವುದು ಎಂದುಆಸಿಫ್ ಇಕ್ಬಾಲ್ ತನ್ಹಾ ಎಸ್‌ಐಟಿ ತಿಳಿಸಿತ್ತು. ಆಗ, ಮಧ್ಯಾಹ್ನ 2:30 ರ ಸುಮಾರಿಗೆ ಆಕೆ ನಮಗೆ ವಿಡಿಯೋ ಕಾಲ್‌ ಮಾಡಿದಳು. ನಾನು ಅವಳಿಗೆ ‘ಭಯಪಡುವ ಅಗತ್ಯವಿಲ್ಲ. ನೀವು ಯಾವುದೇ ತಪ್ಪು ಮಾಡಿಲ್ಲ. ನೀವು ಸಿಎಎ ವಿರುದ್ಧ ಪ್ರತಿಭಟಿಸಿದ್ದೀರಿ. ಹೋಗಿ ಪ್ರಶ್ನೆಗಳಿಗೆ ಧೈರ್ಯವಾಗಿ ಉತ್ತರಿಸಿ ಎಂದು ಹೇಳಿದ್ದೆ.

ಆಕೆ ಜೈಲಿನಲ್ಲಿದ್ದಾಗ ಆಕೆಯನ್ನು ಮಾತನಾಡಿಸಲು ನೀವು ಬಂದಿದ್ದೀರಾ..?

ಆರಂಭದಲ್ಲಿ, 10-15 ದಿನಗಳಲ್ಲಿ ಕೇವಲ ಹತ್ತು ನಿಮಿಷಗಳ ಕಾಲ ಆಕೆಯೊಂದಿಗೆ ಮಾತನಾಡಲು ನಮಗೆ ಅವಕಾಶ ನೀಡಲಾಯಿತು. ಆದರೆ, ದೇವಂಗನಾ ಮತ್ತು ನತಾಶಾ ಈ ಸಮಯಾವಕಾಶದ ಬಗ್ಗೆ ವಿರೋಧಿಸಿದರು. ನಂತರ, ತಿಹಾರ್ ಜೈಲಿನಲ್ಲಿರುವ ಎಲ್ಲ ಕೈದಿಗಳಿಗೆ ವಾರಕ್ಕೊಮ್ಮೆ 30 ನಿಮಿಷಗಳ ಕಾಲ ವಿಡಿಯೋ ಕರೆಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು. ಪ್ರತಿದಿನ ಐದು ನಿಮಿಷಗಳ ಫೋನ್ ಕರೆಗಳನ್ನು ಮಾಡಲು ಸಹ ಅವರಿಗೆ ಅವಕಾಶ ನೀಡಲಾಯಿತು. ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು. ಆಕೆ ಹೋರಾಟಗಾರ್ತಿ.

ಪ್ರತಿ ಬಾರಿಯೂ ನಾವು ಅವಳನ್ನು ವಿಡಿಯೋ ಕರೆಯಲ್ಲಿ ನೋಡುತ್ತಿದ್ದೆವು. ಅದು ನಮಗೆ ಒಂದು ಉತ್ತಮ ಕ್ಷಣವಾಗಿತ್ತು. ಆಕೆಯ ಕಿರಿಯ ಸಹೋದರ ವಿಡಿಯೋ ಕರೆಯಲ್ಲಿ ಪಿಯಾನೋ ನುಡಿಸುತ್ತಿದ್ದ. ಅದು ಅವಳನ್ನು ಹುರಿದುಂಬಿಸುತ್ತಿತ್ತು ಮತ್ತು ಅವಳು ಅದನ್ನು ತುಂಬಾ ಪ್ರೀತಿಸುತ್ತಿದ್ದಳು. ‘ನೀವು ಹಾಡುವುದನ್ನು ನೋಡಲು ನಾನು ಹೊರಗೆ ಬರಬೇಕು’ ಎಂದು ಹೇಳುತ್ತಿದ್ದಳು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಂಬಿಗಳ ಹಿಂದೆ ಇರುವ ಎಲ್ಲಾ ರಾಜಕೀಯ ಕೈದಿಗಳ ಕುಟುಂಬಗಳಿಗೆ ನಿಮ್ಮ ಸಂದೇಶ ಏನು..?

ರಾಜಕೀಯ ಹೋರಾಟ, ಜನಪರ ಹೋರಾಟಗಳಿಂದಾಗಿ ಸುಳ್ಳು ಪ್ರಕರಣಗಳಿಂದ ಜೈಲು ಸೇರಿರುವ ಮಕ್ಕಳ ತಾಯಂದಿರಿಗೆ ನಾನು ಇದನ್ನು ಹೇಳಲು ಬಯಸುತ್ತೇನೆ. “ನಾವು ದೃಢವಾಗಿರಬೇಕು ಮತ್ತು ಸ್ವಲ್ಪ ಸಮಯದವರೆಗೆ ಕಾಯಬೇಕು. ನಮ್ಮ ಮಕ್ಕಳು ತಪ್ಪಿತಸ್ಥರಲ್ಲ. ಅವರಿಗೆ ನ್ಯಾಯ ಸಿಗುತ್ತದೆ. ಈ ಭಾರತಕ್ಕೆ ಹೆಚ್ಚು ದೇವಂಗಾನರು, ಹೆಚ್ಚು ನತಾಶಾಗಳು, ಹೆಚ್ಚು ಗಲ್ಫಿಷಾಗಳು ಬೇಕಾಗಿದ್ದಾರೆ.

ದೇವಂಗಾನ ಮತ್ತು ಅವಳ ಸ್ನೇಹಿತರ ಬಗ್ಗೆ ತಮ್ಮ ಚಾನೆಲ್‌ಗಳಲ್ಲಿ ಭೇಟೆಯಾಗಿದ ಮಾಧ್ಯಮಗಳಿಗೆ ನೀವು ಏನು ಹೇಳಲು ಬಯಸುತ್ತೀರಾ..?

ಟಿವಿ ಚಾನೆಲ್‌ಗಳು ದೇವಂಗಾನಳ ಮೇಲೆ ಹೇಗೆ ದಾಳಿ ನಡೆಸುತ್ತಿವೆ ಎಂದು ನಮ್ಮ ಸಂಬಂಧಿಕರು ನಮಗೆ ತಿಳಿಸಿದರು. ಆ ಟಿವಿ ನಿರೂಪಕರಿಗೆ ನಾನು ಹೇಳಲು ಒಂದು ವಿಷಯವಿದೆ – ನಿಮಗೆ ಬೇಕಾದುದನ್ನು ನೀವು ಹೇಳಬಹುದು. ಆದರೆ ನನಗೆ, ದೆಹಲಿ ಹೈಕೋರ್ಟ್‌ನ ತೀರ್ಪು ಭಾರತದಲ್ಲಿ ಪ್ರಜಾಪ್ರಭುತ್ವದ ವಿಜಯವಾಗಿದೆ.

ನೀವು ಸರ್ಕಾರಕ್ಕೆ ಏನು ಹೇಳಲು ಬಯಸುತ್ತೀರಿ..?

ಉತ್ತಮ ದೇಶವನ್ನು ನಿರ್ಮಿಸಲು, ಎಲ್ಲಾ ರೀತಿಯ ಜನರ ಧ್ವನಿಯನ್ನು ಕೇಳುವ ತಾಳ್ಮೆ ನಿಮಗೆ ಇರಬೇಕು ಎಂಬುದು ಸರ್ಕಾರಕ್ಕೆ ನನ್ನ ಸಂದೇಶ. ವಿಮರ್ಶೆ ಮತ್ತು ಚರ್ಚೆಗಳಿಗೆ ಅವಕಾಶ ನೀಡಿ. ನನ್ನ ಮಗಳು ತನಗಾಗಿ ಪ್ರತಿಭಟಿಸಲಿಲ್ಲ, ಅವಳು ತನ್ನ ದೇಶಕ್ಕಾಗಿ ಹೋರಾಟ ಮಾಡಿದಳು.

ನಿಮ್ಮ ಮಗಳ ಬಗ್ಗೆ ನಿಮಗೆ ಹೆಚ್ಚು ಹೆಮ್ಮೆ ಎನಿಸುತ್ತದೆಯೇ..?

ದೇವಂಗನಾ ತುಂಬಾ ಪ್ರಾಮಾಣಿಕ ಮತ್ತು ಕರುಣಾಮಯಿ. ನಾನು ಪ್ರತಿದಿನ ಅವಳಿಂದ ಸ್ಫೂರ್ತಿ ಪಡೆದಿದ್ದೇನೆ. ಅವಳು ಜೈಲುವಾಸವನ್ನು ಎದುರಿಸಬೇಕಾಗಿ ಬಂದ ನಂತರ, ಅವಳು ಇನ್ನೂ ಬಲಶಾಲಿ ಮಹಿಳೆಯಾಗಿ ಹೊರಬರುತ್ತಾಳೆ ಎಂದು ನನಗೆ ಖಾತ್ರಿಯಿದೆ. ನಾನು ಅವಳ ಬಗ್ಗೆ ಹೆಮ್ಮೆಪಡುತ್ತೇನೆ. ಅವಳು ತನ್ನ ಹೋರಾಟವನ್ನು ಮುಂದುವರಿಸಬೇಕು. ನಮ್ಮ ಹೆಣ್ಣುಮಕ್ಕಳಿಗೆ ನಿರ್ಧಾರ ತೆಗೆದುಕೊಳ್ಳುವ ಮತ್ತು ರಾಜಕೀಯದಲ್ಲಿ ಭಾಗವಹಿಸಲು ಮತ್ತು ಅನ್ಯಾಯದ ವಿರುದ್ಧ ದನಿ ಎತ್ತುವುದು ಮತ್ತಷ್ಟು ಅಗತ್ಯವಿದೆ. ಹೆಣ್ಣು ಮಕ್ಕಳು ಸ್ವತಂತ್ರರಾಗಿರಲಿ ಮತ್ತು ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳಲಿ. ಪಂಜರಗಳನ್ನು ಮುರಿಯಲು ನಾವು ಅವರಿಗೆ ಅವಕಾಶ ನೀಡಬೇಕು (ಪಿಂಜ್ರಾ ಟೋಡ್ನೆ ದೋ).

ಅವಳು ಮನೆಗೆ ಹಿಂತಿರುಗಿದಾಗ ನೀವು ಮಾಡುವ ಮೊದಲ ಕೆಲಸ ಯಾವುದು..?

ನಾನು ಒಂದು ವರ್ಷಕ್ಕೂ ಹೆಚ್ಚು ಕಾಲ ಅವಳನ್ನು ನೋಡಿಲ್ಲ. ಅವಳು ಕರೆಯಲ್ಲಿ ಹೇಳುತ್ತಿದ್ದಳು, ‘ಮಾ, ನಾನು ಒಂದು ವರ್ಷದಿಂದ ಒಂದು ಮೊಟ್ಟೆಯನ್ನೂ ತಿಂದಿಲ್ಲ’. ತಿಹಾರ್ ಜೈಲಿನಲ್ಲಿ ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡುತ್ತಾರೆ. ಅವಳು ಮಾಂಸಾಹಾರಿ ಮತ್ತು ನಮ್ಮ ಸಾಂಪ್ರದಾಯಿಕ ಅಸ್ಸಾಮೀಸ್ ಭೋಜನಗಳನ್ನು ತುಂಬಾ ಇಷ್ಟಪಡುತ್ತಾಳೆ. ಅವಳು ಹಿಂತಿರುಗಿದಾಗ, ನಾನು ಅವಳ ನೆಚ್ಚಿನ ಮೀನಿನ ಅಡುಗೆ ಮಾಡಿ ಕೊಡುತ್ತೇನೆ.’

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ:ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...