Homeಮುಖಪುಟ'ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು' ಎಂದ ವಿದ್ಯಾರ್ಥಿಯ ಬಂಧನ

‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿಯ ಬಂಧನ

ವಿಷೇಶವೆಂದರೆ ಪ್ರಕರಣದಲ್ಲಿ ವಿದ್ಯಾರ್ಥಿಯು ಆರೆಸ್ಸೆಸ್ಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದರೂ ಪೊಲೀಸರು ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ

- Advertisement -
- Advertisement -

ದೆಹಲಿಯ ತಬ್ಲೀಘ್ ಜಮಾತ್ ನ ನಿಜಾಮುದ್ದೀನ್ ಕೇಂದ್ರದಿಂದ ಕೊರೊನಾ ಸೋಂಕು ಹರಡಿರುವ ಕುರಿತು ಮಾಧ್ಯಮಗಳು ಉನ್ಮಾದದಲ್ಲಿದ್ದಾಗ ಬಿಜೆಪಿ ರಾಜಕಾರಣಿ ಬಬಿತಾ ಫೋಗತ್ ಮುಸಲ್ಮಾನರನ್ನು ‘ಅಜ್ಞಾನಿ ಹಂದಿಗಳು’ ಎಂದು ಟ್ವೀಟ್ ಮಾಡಿದ್ದರು.

ಈಗ ನಗರದ ಆರ್‌ಎಸ್‌ಎಸ್ ಕಛೇರಿಯಲ್ಲಿರುವ ಕಾರ್ಯಕರ್ತರಿಗೆ ಹೆಚ್ಚಾಗಿ ಸೋಂಕು ಹರಡುತ್ತಿರುವುದರ ಕುರಿತು ಜಬಲ್ ಪುರದ ಮುಸ್ಲಿಂ ಯುವಕನೊಬ್ಬ ಅದೇ ಪದವನ್ನು ಬಳಸಿದ್ದಾರೆ. ಕೋಮುದ್ವೇಷ ಹರಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜುಲೈ 20 ರಂದು ಪೊಲೀಸರು ಜಬಲ್ ಪುರ್ ಜಿಲ್ಲೆಯ ಮನ್ಸೂರಾಬಾದ್ ಗೋಹಲ್ಪುರದ ನಿವಾಸಿ, ರಾಣಿ ದುರ್ಗಾವತಿ ವಿಶ್ವವಿದ್ಯಾಲಯದಲ್ಲಿ ಬಿ. ಫಾರ್ಮ್‌ನ ಅಂತಿಮ ವರ್ಷದ  ಜಿಯಾ-ಉಲ್-ಹಕ್ ಎಂಬ 23 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 295 (ಎ) ಅಡಿಯಲ್ಲಿ (‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ’) ಮತ್ತು ಭಾರತೀಯರ 505 (‘ಕಿಡಿಗೇಡಿತನಕ್ಕೆ ಕಾರಣವಾಗುವ ಸಾರ್ವಜನಿಕ ಹೇಳಿಕೆಗಳು’) ದಂಡ ಸಂಹಿತೆ ಪ್ರಕಾರ ತಕ್ಷಣ ಆತನನ್ನು ಬಂಧಿಸಲಾಯಿತು.

ಜುಲೈ 19 ರಂದು ಜಬಲ್ಪುರ ಸಂಘದ ಕಚೇರಿಯಲ್ಲಿ 12 ಆರ್‌ಎಸ್‌ಎಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳ ನಂತರ, ಜಿಯಾ-ಉಲ್-ಹಕ್ ಅವರು  ‘NSUI Group Jabalpur VVV’ಯ ಫೇಸ್‌ಬುಕ್ ಪುಟದಲ್ಲಿ ಈ ಪೋಸ್ಟ್ ಮಾಡಿದ್ದರು.

ಸ್ಥಳೀಯ ಟಿವಿ ನ್ಯೂಸ್ ಚಾನೆಲ್‌ನಿಂದ ಸುದ್ದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡ ಅವರು, 12 ಹಂದಿಗಳು ಇಂದು ನಮ್ಮ ನಗರದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿವೆ. ಈ ಹಂದಿಗಳು ದೇಶಾದ್ಯಂತ ಕೊರೊನಾವನ್ನು ಹರಡುತ್ತಿದ್ದಾರೆ.

ವಿದ್ಯರ್ಥಿಯ ಫೇಸ್‌ಬುಕ್ ಪೋಸ್ಟ್‌ನಿಂದ ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಬಲಪಂಥೀಯ ಹಿಂದೂ ಧರ್ಮ ಸೇನಾ ಸದಸ್ಯರು ಮರುದಿನ ಜಬಲ್ಪುರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ಈ ವಿಷಯವನ್ನು ವರದಿ ಮಾಡಿದ್ದಾರೆ.

ಹಿಂದೂ ಧರ್ಮ ಸೇನಾದ ರಾಜ್ಯ ಉಪಾಧ್ಯಕ್ಷ ಮತ್ತು ತನ್ನನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಬಣ್ಣಿಸಿಕೊಂಡಿರುವ ನೀರಜ್ ರಜಪೂತ್ ಅವರ ದೂರಿನ ಆಧಾರದ ಮೇಲೆ, ಒಂದು ಗುಂಪಿನ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ್ದಕ್ಕಾಗಿ ಜಬಲ್ಪುರ್ ಪೊಲೀಸರು ಜಿಯಾ-ಉಲ್-ಹಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಹಕ್, “ಅಸಭ್ಯ, ನಾಚಿಕೆಗೇಡು ಮತ್ತು ಅಸಹನೀಯ” ಹೇಳಿಕೆಗಳನ್ನು ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದೂರುದಾರರು ಆರೋಪಿಸಿದ್ದಾರೆ.

ಮುಸ್ಲಿಂ ಯುವಕ “ರಾಷ್ಟ್ರೀಯವಾದಿ ಸಂಘಟನೆಯ” ವಿರುದ್ಧದ ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು. “ಆರ್‌ಎಸ್‌ಎಸ್ ದೇಶಭಕ್ತಿ ಮತ್ತು ಸಾಮಾಜಿಕ ಕಾರ್ಯ ಸಂಸ್ಥೆಯಾಗಿದ್ದು, ಈ ದೇಶದಲ್ಲಿ ಕೋಟ್ಯಂತರ ಸದಸ್ಯರನ್ನು ಹೊಂದಿದೆ. ಅಂತಹ ಸಂಘಟನೆಯ ಬಗ್ಗೆ ಮುಸ್ಲಿಂ ಯುವಕನ ಅಸಭ್ಯ ಉಲ್ಲೇಖವು ಸಾಮಾಜಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ.”

“ಈತ ಮಾಡಿದ ನಿಂದನೀಯ ಉಲ್ಲೇಖವು ರಾಷ್ಟ್ರೀಯವಾದಿ ಮತ್ತು ಸಾಮಾಜಿಕ ಸೇವೆಯ ನನ್ನ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ದೂರುದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

“ಮುಸ್ಲಿಂ ಯುವಕರ” ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಆತನನ್ನು ಬಂಧಿಸುವಂತೆ ಆಗ್ರಹಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದುಎಂದು ಎಚ್ಚರಿಕೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಮುಸ್ಲಿಂ ಯುವಕ, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಇದ್ದರೂ, ಪೊಲೀಸರು ಐಪಿಸಿಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಲಾಗಿದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದರ ಕುರಿತು ಪ್ರಶ್ನೆಯನ್ನು ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಬಹುಗುನಾಗೆ ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಮತ್ತು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಮಾತನಾಡಲು ಸಲಹೆ ನೀಡಿದರು ಎಂದು ದಿ ವೈರ್‌ಗೆ ವರದಿ ಮಾಡಿದೆ.

ಅಷ್ಟೇ ಅಲ್ಲದೆ, ಜಿಯಾ-ಉಲ್-ಹಕ್ ಪರ ವಕೀಲ ವಿಕಾಶ್ ರಾಥೌರ್ ಜುಲೈ 21 ರಂದು ಜಬಲ್ಪುರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದಾಗ, ಅಪರಾಧವು ಗಂಭೀರವಾಗಿದೆ ಎಂದು ಆರೋಪಿಸಿ ಜಾಮೀನು ನಿರಾಕರಿಸಿದ ನ್ಯಾಯಾಲಯ ಅವರನ್ನು ಜುಲೈ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಜಿಯಾ-ಉಲ್-ಹಕ್ ಪರವಾಗಿ ಮಧ್ಯಪ್ರದೇಶದ ಹೈಕೋರ್ಟ್ ವಕೀಲ ನಯೀಮ್ ಖಾನ್, ಈ ವಿಷಯವು ಮಾನಹಾನಿಗೆ ಸಂಬಂಧಿಸಿದೆ ಮತ್ತು ಯಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದಿನ ವಕೀಲರು ಈ ಪ್ರಕರಣವನ್ನು ಸರಿಯಾಗಿ ಸಮರ್ಥಿಸಲಿಲ್ಲ. ಆದ್ದರಿಂದ, ಜುಲೈ 24 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...