Homeಮುಖಪುಟ'ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು' ಎಂದ ವಿದ್ಯಾರ್ಥಿಯ ಬಂಧನ

‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿಯ ಬಂಧನ

ವಿಷೇಶವೆಂದರೆ ಪ್ರಕರಣದಲ್ಲಿ ವಿದ್ಯಾರ್ಥಿಯು ಆರೆಸ್ಸೆಸ್ಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದರೂ ಪೊಲೀಸರು ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ

- Advertisement -
- Advertisement -

ದೆಹಲಿಯ ತಬ್ಲೀಘ್ ಜಮಾತ್ ನ ನಿಜಾಮುದ್ದೀನ್ ಕೇಂದ್ರದಿಂದ ಕೊರೊನಾ ಸೋಂಕು ಹರಡಿರುವ ಕುರಿತು ಮಾಧ್ಯಮಗಳು ಉನ್ಮಾದದಲ್ಲಿದ್ದಾಗ ಬಿಜೆಪಿ ರಾಜಕಾರಣಿ ಬಬಿತಾ ಫೋಗತ್ ಮುಸಲ್ಮಾನರನ್ನು ‘ಅಜ್ಞಾನಿ ಹಂದಿಗಳು’ ಎಂದು ಟ್ವೀಟ್ ಮಾಡಿದ್ದರು.

ಈಗ ನಗರದ ಆರ್‌ಎಸ್‌ಎಸ್ ಕಛೇರಿಯಲ್ಲಿರುವ ಕಾರ್ಯಕರ್ತರಿಗೆ ಹೆಚ್ಚಾಗಿ ಸೋಂಕು ಹರಡುತ್ತಿರುವುದರ ಕುರಿತು ಜಬಲ್ ಪುರದ ಮುಸ್ಲಿಂ ಯುವಕನೊಬ್ಬ ಅದೇ ಪದವನ್ನು ಬಳಸಿದ್ದಾರೆ. ಕೋಮುದ್ವೇಷ ಹರಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜುಲೈ 20 ರಂದು ಪೊಲೀಸರು ಜಬಲ್ ಪುರ್ ಜಿಲ್ಲೆಯ ಮನ್ಸೂರಾಬಾದ್ ಗೋಹಲ್ಪುರದ ನಿವಾಸಿ, ರಾಣಿ ದುರ್ಗಾವತಿ ವಿಶ್ವವಿದ್ಯಾಲಯದಲ್ಲಿ ಬಿ. ಫಾರ್ಮ್‌ನ ಅಂತಿಮ ವರ್ಷದ  ಜಿಯಾ-ಉಲ್-ಹಕ್ ಎಂಬ 23 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 295 (ಎ) ಅಡಿಯಲ್ಲಿ (‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ’) ಮತ್ತು ಭಾರತೀಯರ 505 (‘ಕಿಡಿಗೇಡಿತನಕ್ಕೆ ಕಾರಣವಾಗುವ ಸಾರ್ವಜನಿಕ ಹೇಳಿಕೆಗಳು’) ದಂಡ ಸಂಹಿತೆ ಪ್ರಕಾರ ತಕ್ಷಣ ಆತನನ್ನು ಬಂಧಿಸಲಾಯಿತು.

ಜುಲೈ 19 ರಂದು ಜಬಲ್ಪುರ ಸಂಘದ ಕಚೇರಿಯಲ್ಲಿ 12 ಆರ್‌ಎಸ್‌ಎಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳ ನಂತರ, ಜಿಯಾ-ಉಲ್-ಹಕ್ ಅವರು  ‘NSUI Group Jabalpur VVV’ಯ ಫೇಸ್‌ಬುಕ್ ಪುಟದಲ್ಲಿ ಈ ಪೋಸ್ಟ್ ಮಾಡಿದ್ದರು.

ಸ್ಥಳೀಯ ಟಿವಿ ನ್ಯೂಸ್ ಚಾನೆಲ್‌ನಿಂದ ಸುದ್ದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡ ಅವರು, 12 ಹಂದಿಗಳು ಇಂದು ನಮ್ಮ ನಗರದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿವೆ. ಈ ಹಂದಿಗಳು ದೇಶಾದ್ಯಂತ ಕೊರೊನಾವನ್ನು ಹರಡುತ್ತಿದ್ದಾರೆ.

ವಿದ್ಯರ್ಥಿಯ ಫೇಸ್‌ಬುಕ್ ಪೋಸ್ಟ್‌ನಿಂದ ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಬಲಪಂಥೀಯ ಹಿಂದೂ ಧರ್ಮ ಸೇನಾ ಸದಸ್ಯರು ಮರುದಿನ ಜಬಲ್ಪುರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ಈ ವಿಷಯವನ್ನು ವರದಿ ಮಾಡಿದ್ದಾರೆ.

ಹಿಂದೂ ಧರ್ಮ ಸೇನಾದ ರಾಜ್ಯ ಉಪಾಧ್ಯಕ್ಷ ಮತ್ತು ತನ್ನನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಬಣ್ಣಿಸಿಕೊಂಡಿರುವ ನೀರಜ್ ರಜಪೂತ್ ಅವರ ದೂರಿನ ಆಧಾರದ ಮೇಲೆ, ಒಂದು ಗುಂಪಿನ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ್ದಕ್ಕಾಗಿ ಜಬಲ್ಪುರ್ ಪೊಲೀಸರು ಜಿಯಾ-ಉಲ್-ಹಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಹಕ್, “ಅಸಭ್ಯ, ನಾಚಿಕೆಗೇಡು ಮತ್ತು ಅಸಹನೀಯ” ಹೇಳಿಕೆಗಳನ್ನು ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದೂರುದಾರರು ಆರೋಪಿಸಿದ್ದಾರೆ.

ಮುಸ್ಲಿಂ ಯುವಕ “ರಾಷ್ಟ್ರೀಯವಾದಿ ಸಂಘಟನೆಯ” ವಿರುದ್ಧದ ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು. “ಆರ್‌ಎಸ್‌ಎಸ್ ದೇಶಭಕ್ತಿ ಮತ್ತು ಸಾಮಾಜಿಕ ಕಾರ್ಯ ಸಂಸ್ಥೆಯಾಗಿದ್ದು, ಈ ದೇಶದಲ್ಲಿ ಕೋಟ್ಯಂತರ ಸದಸ್ಯರನ್ನು ಹೊಂದಿದೆ. ಅಂತಹ ಸಂಘಟನೆಯ ಬಗ್ಗೆ ಮುಸ್ಲಿಂ ಯುವಕನ ಅಸಭ್ಯ ಉಲ್ಲೇಖವು ಸಾಮಾಜಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ.”

“ಈತ ಮಾಡಿದ ನಿಂದನೀಯ ಉಲ್ಲೇಖವು ರಾಷ್ಟ್ರೀಯವಾದಿ ಮತ್ತು ಸಾಮಾಜಿಕ ಸೇವೆಯ ನನ್ನ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ದೂರುದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

“ಮುಸ್ಲಿಂ ಯುವಕರ” ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಆತನನ್ನು ಬಂಧಿಸುವಂತೆ ಆಗ್ರಹಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದುಎಂದು ಎಚ್ಚರಿಕೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಮುಸ್ಲಿಂ ಯುವಕ, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಇದ್ದರೂ, ಪೊಲೀಸರು ಐಪಿಸಿಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಲಾಗಿದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದರ ಕುರಿತು ಪ್ರಶ್ನೆಯನ್ನು ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಬಹುಗುನಾಗೆ ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಮತ್ತು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಮಾತನಾಡಲು ಸಲಹೆ ನೀಡಿದರು ಎಂದು ದಿ ವೈರ್‌ಗೆ ವರದಿ ಮಾಡಿದೆ.

ಅಷ್ಟೇ ಅಲ್ಲದೆ, ಜಿಯಾ-ಉಲ್-ಹಕ್ ಪರ ವಕೀಲ ವಿಕಾಶ್ ರಾಥೌರ್ ಜುಲೈ 21 ರಂದು ಜಬಲ್ಪುರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದಾಗ, ಅಪರಾಧವು ಗಂಭೀರವಾಗಿದೆ ಎಂದು ಆರೋಪಿಸಿ ಜಾಮೀನು ನಿರಾಕರಿಸಿದ ನ್ಯಾಯಾಲಯ ಅವರನ್ನು ಜುಲೈ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಜಿಯಾ-ಉಲ್-ಹಕ್ ಪರವಾಗಿ ಮಧ್ಯಪ್ರದೇಶದ ಹೈಕೋರ್ಟ್ ವಕೀಲ ನಯೀಮ್ ಖಾನ್, ಈ ವಿಷಯವು ಮಾನಹಾನಿಗೆ ಸಂಬಂಧಿಸಿದೆ ಮತ್ತು ಯಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದಿನ ವಕೀಲರು ಈ ಪ್ರಕರಣವನ್ನು ಸರಿಯಾಗಿ ಸಮರ್ಥಿಸಲಿಲ್ಲ. ಆದ್ದರಿಂದ, ಜುಲೈ 24 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...