Homeಮುಖಪುಟ'ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು' ಎಂದ ವಿದ್ಯಾರ್ಥಿಯ ಬಂಧನ

‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿಯ ಬಂಧನ

ವಿಷೇಶವೆಂದರೆ ಪ್ರಕರಣದಲ್ಲಿ ವಿದ್ಯಾರ್ಥಿಯು ಆರೆಸ್ಸೆಸ್ಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದರೂ ಪೊಲೀಸರು ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ

- Advertisement -
- Advertisement -

ದೆಹಲಿಯ ತಬ್ಲೀಘ್ ಜಮಾತ್ ನ ನಿಜಾಮುದ್ದೀನ್ ಕೇಂದ್ರದಿಂದ ಕೊರೊನಾ ಸೋಂಕು ಹರಡಿರುವ ಕುರಿತು ಮಾಧ್ಯಮಗಳು ಉನ್ಮಾದದಲ್ಲಿದ್ದಾಗ ಬಿಜೆಪಿ ರಾಜಕಾರಣಿ ಬಬಿತಾ ಫೋಗತ್ ಮುಸಲ್ಮಾನರನ್ನು ‘ಅಜ್ಞಾನಿ ಹಂದಿಗಳು’ ಎಂದು ಟ್ವೀಟ್ ಮಾಡಿದ್ದರು.

ಈಗ ನಗರದ ಆರ್‌ಎಸ್‌ಎಸ್ ಕಛೇರಿಯಲ್ಲಿರುವ ಕಾರ್ಯಕರ್ತರಿಗೆ ಹೆಚ್ಚಾಗಿ ಸೋಂಕು ಹರಡುತ್ತಿರುವುದರ ಕುರಿತು ಜಬಲ್ ಪುರದ ಮುಸ್ಲಿಂ ಯುವಕನೊಬ್ಬ ಅದೇ ಪದವನ್ನು ಬಳಸಿದ್ದಾರೆ. ಕೋಮುದ್ವೇಷ ಹರಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜುಲೈ 20 ರಂದು ಪೊಲೀಸರು ಜಬಲ್ ಪುರ್ ಜಿಲ್ಲೆಯ ಮನ್ಸೂರಾಬಾದ್ ಗೋಹಲ್ಪುರದ ನಿವಾಸಿ, ರಾಣಿ ದುರ್ಗಾವತಿ ವಿಶ್ವವಿದ್ಯಾಲಯದಲ್ಲಿ ಬಿ. ಫಾರ್ಮ್‌ನ ಅಂತಿಮ ವರ್ಷದ  ಜಿಯಾ-ಉಲ್-ಹಕ್ ಎಂಬ 23 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 295 (ಎ) ಅಡಿಯಲ್ಲಿ (‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ’) ಮತ್ತು ಭಾರತೀಯರ 505 (‘ಕಿಡಿಗೇಡಿತನಕ್ಕೆ ಕಾರಣವಾಗುವ ಸಾರ್ವಜನಿಕ ಹೇಳಿಕೆಗಳು’) ದಂಡ ಸಂಹಿತೆ ಪ್ರಕಾರ ತಕ್ಷಣ ಆತನನ್ನು ಬಂಧಿಸಲಾಯಿತು.

ಜುಲೈ 19 ರಂದು ಜಬಲ್ಪುರ ಸಂಘದ ಕಚೇರಿಯಲ್ಲಿ 12 ಆರ್‌ಎಸ್‌ಎಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳ ನಂತರ, ಜಿಯಾ-ಉಲ್-ಹಕ್ ಅವರು  ‘NSUI Group Jabalpur VVV’ಯ ಫೇಸ್‌ಬುಕ್ ಪುಟದಲ್ಲಿ ಈ ಪೋಸ್ಟ್ ಮಾಡಿದ್ದರು.

ಸ್ಥಳೀಯ ಟಿವಿ ನ್ಯೂಸ್ ಚಾನೆಲ್‌ನಿಂದ ಸುದ್ದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡ ಅವರು, 12 ಹಂದಿಗಳು ಇಂದು ನಮ್ಮ ನಗರದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿವೆ. ಈ ಹಂದಿಗಳು ದೇಶಾದ್ಯಂತ ಕೊರೊನಾವನ್ನು ಹರಡುತ್ತಿದ್ದಾರೆ.

ವಿದ್ಯರ್ಥಿಯ ಫೇಸ್‌ಬುಕ್ ಪೋಸ್ಟ್‌ನಿಂದ ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಬಲಪಂಥೀಯ ಹಿಂದೂ ಧರ್ಮ ಸೇನಾ ಸದಸ್ಯರು ಮರುದಿನ ಜಬಲ್ಪುರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ಈ ವಿಷಯವನ್ನು ವರದಿ ಮಾಡಿದ್ದಾರೆ.

ಹಿಂದೂ ಧರ್ಮ ಸೇನಾದ ರಾಜ್ಯ ಉಪಾಧ್ಯಕ್ಷ ಮತ್ತು ತನ್ನನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಬಣ್ಣಿಸಿಕೊಂಡಿರುವ ನೀರಜ್ ರಜಪೂತ್ ಅವರ ದೂರಿನ ಆಧಾರದ ಮೇಲೆ, ಒಂದು ಗುಂಪಿನ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ್ದಕ್ಕಾಗಿ ಜಬಲ್ಪುರ್ ಪೊಲೀಸರು ಜಿಯಾ-ಉಲ್-ಹಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಹಕ್, “ಅಸಭ್ಯ, ನಾಚಿಕೆಗೇಡು ಮತ್ತು ಅಸಹನೀಯ” ಹೇಳಿಕೆಗಳನ್ನು ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದೂರುದಾರರು ಆರೋಪಿಸಿದ್ದಾರೆ.

ಮುಸ್ಲಿಂ ಯುವಕ “ರಾಷ್ಟ್ರೀಯವಾದಿ ಸಂಘಟನೆಯ” ವಿರುದ್ಧದ ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು. “ಆರ್‌ಎಸ್‌ಎಸ್ ದೇಶಭಕ್ತಿ ಮತ್ತು ಸಾಮಾಜಿಕ ಕಾರ್ಯ ಸಂಸ್ಥೆಯಾಗಿದ್ದು, ಈ ದೇಶದಲ್ಲಿ ಕೋಟ್ಯಂತರ ಸದಸ್ಯರನ್ನು ಹೊಂದಿದೆ. ಅಂತಹ ಸಂಘಟನೆಯ ಬಗ್ಗೆ ಮುಸ್ಲಿಂ ಯುವಕನ ಅಸಭ್ಯ ಉಲ್ಲೇಖವು ಸಾಮಾಜಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ.”

“ಈತ ಮಾಡಿದ ನಿಂದನೀಯ ಉಲ್ಲೇಖವು ರಾಷ್ಟ್ರೀಯವಾದಿ ಮತ್ತು ಸಾಮಾಜಿಕ ಸೇವೆಯ ನನ್ನ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ದೂರುದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

“ಮುಸ್ಲಿಂ ಯುವಕರ” ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಆತನನ್ನು ಬಂಧಿಸುವಂತೆ ಆಗ್ರಹಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದುಎಂದು ಎಚ್ಚರಿಕೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಮುಸ್ಲಿಂ ಯುವಕ, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಇದ್ದರೂ, ಪೊಲೀಸರು ಐಪಿಸಿಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಲಾಗಿದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದರ ಕುರಿತು ಪ್ರಶ್ನೆಯನ್ನು ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಬಹುಗುನಾಗೆ ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಮತ್ತು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಮಾತನಾಡಲು ಸಲಹೆ ನೀಡಿದರು ಎಂದು ದಿ ವೈರ್‌ಗೆ ವರದಿ ಮಾಡಿದೆ.

ಅಷ್ಟೇ ಅಲ್ಲದೆ, ಜಿಯಾ-ಉಲ್-ಹಕ್ ಪರ ವಕೀಲ ವಿಕಾಶ್ ರಾಥೌರ್ ಜುಲೈ 21 ರಂದು ಜಬಲ್ಪುರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದಾಗ, ಅಪರಾಧವು ಗಂಭೀರವಾಗಿದೆ ಎಂದು ಆರೋಪಿಸಿ ಜಾಮೀನು ನಿರಾಕರಿಸಿದ ನ್ಯಾಯಾಲಯ ಅವರನ್ನು ಜುಲೈ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಜಿಯಾ-ಉಲ್-ಹಕ್ ಪರವಾಗಿ ಮಧ್ಯಪ್ರದೇಶದ ಹೈಕೋರ್ಟ್ ವಕೀಲ ನಯೀಮ್ ಖಾನ್, ಈ ವಿಷಯವು ಮಾನಹಾನಿಗೆ ಸಂಬಂಧಿಸಿದೆ ಮತ್ತು ಯಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದಿನ ವಕೀಲರು ಈ ಪ್ರಕರಣವನ್ನು ಸರಿಯಾಗಿ ಸಮರ್ಥಿಸಲಿಲ್ಲ. ಆದ್ದರಿಂದ, ಜುಲೈ 24 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...