Homeಮುಖಪುಟಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ...

ಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ ಎಚ್ಚರ

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

- Advertisement -
- Advertisement -

ಮೂರು ಇನ್‌ಸ್ಟಂಟ್ ಲೋನ್ ಆ್ಯಪ್‌ಗಳ ಮೂಲಕ ಸಾಲ ಪಡೆದು, ಮರುಪಾವತಿಸಲು ಸಾಧ್ಯವಾಗದ ಕಾರಣ ರಿಕವರಿ ಏಜೆಂಟ್‌ಗಳ ಕಿರುಕುಳದಿಂದ ಬೇಸೆತ್ತ 22 ವರ್ಷದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ.

ಜಾಲಹಳ್ಳಿಯ ಎಚ್‌ಎಂಟಿ ಸ್ಟಾಫ್ ಕ್ವಾರ್ಟರ್ಸ್ ನಿವಾಸಿ ತೇಜಸ್ ನಾಯರ್ ಎಂಬುವವರೆ ಆ ದುರ್ಧೈವಿಯಾಗಿದ್ದು, ಅವರು ಯಲಹಂಕ ಸಮೀಪದ ಖಾಸಗಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಸುಮಾರು 46,000 ರೂ. ಸಾಲ ಬಾಕಿ ಉಳಿಸಿಕೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನನ್ನ ಹೆಸರಿನಲ್ಲಿ ಇರುವ ಸಾಲಗಳನ್ನು ಪಾವತಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ನನ್ನ ಅಂತಿಮ ನಿರ್ಧಾರವಾಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿದ್ದು ತೇಜಸ್ ಸಾವಿಗೆ ಶರಣಾಗಿದ್ದಾರೆ.

ಈ ಕುರಿತು ಅವರ ತಂದೆ ಗೋಪಿನಾಥ್‌ರವರು ನೀಡಿದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ತೇಜಸ್ ಮೊಬೈಲ್ ಫೋನ್ ಅನ್ನು ಸೈಬರ್ ಕ್ರೈಮ್ ವಿಭಾಗಕ್ಕೆ ಕಳಿಸಿದ್ದಾರೆ.

ಮೃತರ ತಂದೆ ಮಾತನಾಡಿ, “ತೇಜಸ್ ಸ್ನೇಹಿತನೊಬ್ಬನಿಗೆ ತುರ್ತು ಎಂದು ಆ್ಯಪ್‌ ಮೂಲಕ ಸಾಲ ತೆಗೆದುಕೊಟ್ಟಿದ್ದಾನೆ. ಆದರೆ ಆತನ ಸ್ನೇಹಿತ ಎಇಎಂ ಮರುಪಾವತಿ ಮಾಡಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ತೇಜಸ್ ಆ ಸಾಲ ತೀರಿಸಲು ಬೇರೆ ಆ್ಯಪ್‌ಗಳ ಮೂಲಕ ಮತ್ತೆ ಸಾಲ ಮಾಡಿದ್ದಾನೆ. ಅವುಗಳನ್ನು ತೀರಿಸಲು ಸಂಬಂಧಿಕರೊಬ್ಬರಿಂದ ಹಣಕ್ಕೆ ಬೇಡಿಕೆಯಿಟ್ಟಾಗಲಷ್ಟೇ ನಮಗೆ ವಿಷಯ ಗೊತ್ತಾಯಿತು” ಎಂದಿದ್ದಾರೆ.

ಸಾಲ ವಾಪಸ್ ಮಾಡದ ಕಾರಣ ಆತನ ಫೋಟೊಗಳನ್ನು ತಿರುಚಿ ವಾಟ್ಸಾಪ್ ಮೂಲಕ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕಳಿಸಲಾಗಿದೆ. ಇದರಿಂದ ಬೇಸೆತ್ತ ಆತ ಆತ್ಮಹತ್ಯೆ ಮೊರೆ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ತುರ್ತು ಸಾಲಕ್ಕೆ ಮರುಳಾಗಿ ವಂಚಕರ ಬಲೆಗೆ ಬೀಳಬೇಡಿ

ತೇಜಸ್ ಒಬ್ಬರೆ ಈ ರೀತಿಯ ದೌರ್ಜನ್ಯಕ್ಕೆ ಒಳಗಾಗಿಲ್ಲ. ಬದಲಿಗೆ ಸಾವಿರಾರು ಜನರು ಈ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ತುರ್ತಿಗೆ ಎಂದು ಮೊಬೈಲ್ ಆ್ಯಪ್‌ಗಳ ಮೂಲಕ ಕಿರು ಸಾಲ ಪಡೆದು, ದುಬಾರಿ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದಾರೆ. ಹಲವಾರು ಜನ ತಮ್ಮ ಜೀವನ, ನೆಮ್ಮದಿ ಹಾಳು ಮಾಡಿಕೊಂಡಿದ್ದಾರೆ.

ಕ್ಯಾಶ್ ಗುರು, ಮನಿ ಗುರು, ದಾನಿ ಆಪ್, ಮನಿಟ್ಯಾಪ್, ಎಎಲ್‌ಪಿ ಕ್ಯಾಶ್ ಆಪ್ ನಂತರ 300ಕ್ಕೂ ಹೆಚ್ಚು ಆನ್‌ಲೈನ್ ಮೂಲಕ ಸಾಲ ನೀಡುವ ಆಪ್‌ಗಳಿವೆ. 5,000 ರೂಗಳಿಂದ ಆರಂಭವಾಗಿ 15,000,00 ರೂ ಗಳವರೆಗೂ ಯಾವುದೇ ದಾಖಲೆಗಳನ್ನು ಕೇಳದೇ ಕ್ಷಣಾರ್ಧದಲ್ಲಿ ಸಾಲ ಕೊಡುವುದಾಗಿ ಹೇಳಿ ದುಪ್ಪಟ್ಟು ವಸೂಲಿ ಮಾಡುವುದು ಇವುಗಳ ಉದ್ದೇಶ. ಆದರೆ ತಕ್ಷಣಕ್ಕೆ ಹಣ ಬೇಕಾದವರು ಮುಂದಕ್ಕೆ ನೋಡಿಕೊಳ್ಳೋಣ, ಹೇಗಾದರೂ ಮಾಡಿ ತೀರಿಸಿದರೆ ಆಯ್ತು ಎಂದುಕೊಂಡು ಸಾಲ ಪಡೆದವರು ಈ ಆ್ಯಪ್‌ಗಳ ರಿಕವರಿ ಏಜೆಂಟ್‌ಗಳಿಂದ ನಿತ್ಯನರಕ ಅನುಭಿಸುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.

ರಿಕವರಿ ಏಜೆಂಟ್‌ಗಳು ಕಳಿಸುವ ಸಂದೇಶಗಳು

ತಕ್ಷಣಕ್ಕೆ ಹಣ ಬೇಕಾದವರು ಆ್ಯಪ್‌ ಇನ್ಸ್ಟಾಲ್ ಮಾಡುವಾಗಲೇ ಕಂಪನಿಯ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರುತ್ತಾರೆ. ಅಂದರೆ ಆ್ಯಪ್‌ ಕಂಪನಿಯವರು ಆ ಮೊಬೈಲ್‌ನಲ್ಲಿ ಎಲ್ಲಾ ಸಂಪರ್ಕ ಸಂಖ್ಯೆ ಮತ್ತು ಫೋಟೊ ವಿಡಿಯೋಗಳನ್ನು ಅಕ್ಸಸ್ ಮಾಡುವ ಒಪ್ಪಿಗೆ ಪಡೆದುಕೊಂಡಿರುತ್ತದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನಂಬರ್ ಜೊತೆಗೆ ಅಕೌಂಟ್ ನಂಬರ್ ಕೊಟ್ಟರೆ 5 ನಿಮಿಷದಲ್ಲಿ ಸಾಲ ಮಂಜೂರು ಮಾಡುತ್ತಾರೆ. ಆದರೆ ಆನಂತರವೇ ನಿಮಗೆ ತಿಳಿಯುವುದು ಅದರ ಜಿಗಣೆ ರೀತಿಯ ಬಡ್ಡಿದರ.

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

ಕೇವಲ 5,000 ಸಾಲ ಪಡೆದವರು ವಾಪಸ್ 20,000-25,000 ರೂ ವರೆಗೂ ಮರುಪಾವತಿ ಮಾಡಬೇಕಾದ ಸಂದರ್ಭಗಳು ಬಂದಿವೆ. ಇನ್ನು ಲಕ್ಷಾಂತರ ರೂ ಹಣ ಪಡೆದವರು 34% ನಷ್ಟು ದುಬಾರಿ ಬಡ್ಡಿ, ಜಿಎಸ್‌ಟಿ, ಸಂಸ್ಕರಣ ವೆಚ್ಚವನ್ನು ಕಟ್ಟಲಾಗದೆ ಹೈರಾಣಾಗಿದ್ದಾರೆ. ಆಗ ರಿಕವರಿ ಏಜೆಂಟ್‌ಗಳು ಪದೇ ಪದೇ ಫೋನ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ. ಅದಕ್ಕೂ ತಲೆಕೆಡಿಸಿಕೊಳ್ಳದಿದ್ದರೆ ಅವರ ಕಾಂಟಾಕ್ಟ್ ಲಿಸ್ಟ್‌ ಪ್ರವೇಶಿಸಿ ಸಿಕ್ಕ ಸಿಕ್ಕವರ ನಂಬರ್‌ಗೆಲ್ಲಾ ಫೋನ್ ಮಾಡಿ ನಿಮ್ಮ ಸ್ನೇಹಿತರು ಲೋನ್ ಇಎಂಐ ಕಟ್ಟಿಲ್ಲ ಎಂದು ಬೈಯ್ದು ಮರ್ಯಾದೆ ಕಳೆಯುತ್ತಾರೆ. ಕೆಲವರು ಲೋನ್ ಕಟ್ಟಲಾಗದೇ ಸಿಮ್ ಬದಲಿಸಿದರೂ ಬಿಡದ ಅವರ ತಿರುಚಿದ ಚಿತ್ರಗಳನ್ನು ಅವರ ಸಂಪರ್ಕ ಸ್ನೇಹಿತರಿಗೆಲ್ಲ ಕಳಿಸಿ ಇವರ ಫ್ರಾಡ್ ಎಂಬ ಹಣೆಪಟ್ಟೆ ಕಟ್ಟುವ ಮಟ್ಟಕ್ಕೆ ಬೆಳೆದು ನಿಂತಿವೆ ಈ ಲೋನ್ ಆ್ಯಪ್‌ಗಳು.

ಈ ರೀತಿಯಾಗಿ ಒಬ್ಬ ವ್ಯಕ್ತಿಯ ಸಂಪೂರ್ಣ ನೆಮ್ಮದಿ ಹಾಳು ಮಾಡಲು ಈ ಆ್ಯಪ್‌ಗಳು ಹಿಂದೆ ಮುಂದೆ ನೋಡುವುದಿಲ್ಲ. ಹೇಗಾದರೂ ಮಾಡಿ ಸಾಲ ವಸೂಲಿ ಮಾಡುವುದು ಅವರ ಉದ್ದೇಶವಾಗಿರುತ್ತದೆ. ಹಾಗಾಗಿ ದಯವಿಟ್ಟು ಯಾರೂ ಕೂಡ ಯಾವುದೇ ಕಾರಣಕ್ಕೂ ಈ ಇನ್‌ಸ್ಟಂಟ್ ಲೋನ್ ಆಪ್‌ಗಳ ಮೊರೆ ಹೋಗಬೇಡಿ ಎಂದು ಪೊಲೀಸರು ಮನಿವಿ ಮಾಡಿದ್ದಾರೆ.

ಐಟಿ ಕಾಯ್ದೆಯ ಪ್ರಕಾರ ಲೋನ್ ಆ್ಯಪ್‌ಗಳು ಹೀಗೆ ಖಾಸಗಿ ಮಾಹಿತಿ ಕದ್ದು ಬ್ಲಾಕ್‌ಮೇಲ್ ಮಾಡುವುದು ಅಪರಾಧ. ಆದರೆ ಅದೀಗ ಎಗ್ಗಿಲ್ಲದೆ ನಡೆಯುತ್ತಿದೆ. ಲೋನ್ ತೆಗೆದುಕೊಳ್ಳುವವರು ಇರುವವರೆಗೂ ಈ ಕಿರುಕುಳ ಇದ್ದೆ ಇರುತ್ತದೆ. ಇದಕ್ಕಿರುವ ಪರಿಹಾರವೆಂದರೆ ಯಾರೂ ಕೂಡ ಸಾಲ ತೆಗೆದುಕೊಳ್ಳದಂತೆ ಜೀವನ ನಿರ್ವಹಣೆ ಮಾಡಬೇಕು. ಅದರಲ್ಲಿಯೂ ಈ ಲೋನ್‌ ಆ್ಯಪ್‌ಗಳ ಸಹವಾಸದಿಂದ ದೂರವಿದ್ದರೆ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...