Homeಮುಖಪುಟಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ...

ಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ ಎಚ್ಚರ

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

- Advertisement -
- Advertisement -

ಮೂರು ಇನ್‌ಸ್ಟಂಟ್ ಲೋನ್ ಆ್ಯಪ್‌ಗಳ ಮೂಲಕ ಸಾಲ ಪಡೆದು, ಮರುಪಾವತಿಸಲು ಸಾಧ್ಯವಾಗದ ಕಾರಣ ರಿಕವರಿ ಏಜೆಂಟ್‌ಗಳ ಕಿರುಕುಳದಿಂದ ಬೇಸೆತ್ತ 22 ವರ್ಷದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ.

ಜಾಲಹಳ್ಳಿಯ ಎಚ್‌ಎಂಟಿ ಸ್ಟಾಫ್ ಕ್ವಾರ್ಟರ್ಸ್ ನಿವಾಸಿ ತೇಜಸ್ ನಾಯರ್ ಎಂಬುವವರೆ ಆ ದುರ್ಧೈವಿಯಾಗಿದ್ದು, ಅವರು ಯಲಹಂಕ ಸಮೀಪದ ಖಾಸಗಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಸುಮಾರು 46,000 ರೂ. ಸಾಲ ಬಾಕಿ ಉಳಿಸಿಕೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನನ್ನ ಹೆಸರಿನಲ್ಲಿ ಇರುವ ಸಾಲಗಳನ್ನು ಪಾವತಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ನನ್ನ ಅಂತಿಮ ನಿರ್ಧಾರವಾಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿದ್ದು ತೇಜಸ್ ಸಾವಿಗೆ ಶರಣಾಗಿದ್ದಾರೆ.

ಈ ಕುರಿತು ಅವರ ತಂದೆ ಗೋಪಿನಾಥ್‌ರವರು ನೀಡಿದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ತೇಜಸ್ ಮೊಬೈಲ್ ಫೋನ್ ಅನ್ನು ಸೈಬರ್ ಕ್ರೈಮ್ ವಿಭಾಗಕ್ಕೆ ಕಳಿಸಿದ್ದಾರೆ.

ಮೃತರ ತಂದೆ ಮಾತನಾಡಿ, “ತೇಜಸ್ ಸ್ನೇಹಿತನೊಬ್ಬನಿಗೆ ತುರ್ತು ಎಂದು ಆ್ಯಪ್‌ ಮೂಲಕ ಸಾಲ ತೆಗೆದುಕೊಟ್ಟಿದ್ದಾನೆ. ಆದರೆ ಆತನ ಸ್ನೇಹಿತ ಎಇಎಂ ಮರುಪಾವತಿ ಮಾಡಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ತೇಜಸ್ ಆ ಸಾಲ ತೀರಿಸಲು ಬೇರೆ ಆ್ಯಪ್‌ಗಳ ಮೂಲಕ ಮತ್ತೆ ಸಾಲ ಮಾಡಿದ್ದಾನೆ. ಅವುಗಳನ್ನು ತೀರಿಸಲು ಸಂಬಂಧಿಕರೊಬ್ಬರಿಂದ ಹಣಕ್ಕೆ ಬೇಡಿಕೆಯಿಟ್ಟಾಗಲಷ್ಟೇ ನಮಗೆ ವಿಷಯ ಗೊತ್ತಾಯಿತು” ಎಂದಿದ್ದಾರೆ.

ಸಾಲ ವಾಪಸ್ ಮಾಡದ ಕಾರಣ ಆತನ ಫೋಟೊಗಳನ್ನು ತಿರುಚಿ ವಾಟ್ಸಾಪ್ ಮೂಲಕ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕಳಿಸಲಾಗಿದೆ. ಇದರಿಂದ ಬೇಸೆತ್ತ ಆತ ಆತ್ಮಹತ್ಯೆ ಮೊರೆ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ತುರ್ತು ಸಾಲಕ್ಕೆ ಮರುಳಾಗಿ ವಂಚಕರ ಬಲೆಗೆ ಬೀಳಬೇಡಿ

ತೇಜಸ್ ಒಬ್ಬರೆ ಈ ರೀತಿಯ ದೌರ್ಜನ್ಯಕ್ಕೆ ಒಳಗಾಗಿಲ್ಲ. ಬದಲಿಗೆ ಸಾವಿರಾರು ಜನರು ಈ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ತುರ್ತಿಗೆ ಎಂದು ಮೊಬೈಲ್ ಆ್ಯಪ್‌ಗಳ ಮೂಲಕ ಕಿರು ಸಾಲ ಪಡೆದು, ದುಬಾರಿ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದಾರೆ. ಹಲವಾರು ಜನ ತಮ್ಮ ಜೀವನ, ನೆಮ್ಮದಿ ಹಾಳು ಮಾಡಿಕೊಂಡಿದ್ದಾರೆ.

ಕ್ಯಾಶ್ ಗುರು, ಮನಿ ಗುರು, ದಾನಿ ಆಪ್, ಮನಿಟ್ಯಾಪ್, ಎಎಲ್‌ಪಿ ಕ್ಯಾಶ್ ಆಪ್ ನಂತರ 300ಕ್ಕೂ ಹೆಚ್ಚು ಆನ್‌ಲೈನ್ ಮೂಲಕ ಸಾಲ ನೀಡುವ ಆಪ್‌ಗಳಿವೆ. 5,000 ರೂಗಳಿಂದ ಆರಂಭವಾಗಿ 15,000,00 ರೂ ಗಳವರೆಗೂ ಯಾವುದೇ ದಾಖಲೆಗಳನ್ನು ಕೇಳದೇ ಕ್ಷಣಾರ್ಧದಲ್ಲಿ ಸಾಲ ಕೊಡುವುದಾಗಿ ಹೇಳಿ ದುಪ್ಪಟ್ಟು ವಸೂಲಿ ಮಾಡುವುದು ಇವುಗಳ ಉದ್ದೇಶ. ಆದರೆ ತಕ್ಷಣಕ್ಕೆ ಹಣ ಬೇಕಾದವರು ಮುಂದಕ್ಕೆ ನೋಡಿಕೊಳ್ಳೋಣ, ಹೇಗಾದರೂ ಮಾಡಿ ತೀರಿಸಿದರೆ ಆಯ್ತು ಎಂದುಕೊಂಡು ಸಾಲ ಪಡೆದವರು ಈ ಆ್ಯಪ್‌ಗಳ ರಿಕವರಿ ಏಜೆಂಟ್‌ಗಳಿಂದ ನಿತ್ಯನರಕ ಅನುಭಿಸುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.

ರಿಕವರಿ ಏಜೆಂಟ್‌ಗಳು ಕಳಿಸುವ ಸಂದೇಶಗಳು

ತಕ್ಷಣಕ್ಕೆ ಹಣ ಬೇಕಾದವರು ಆ್ಯಪ್‌ ಇನ್ಸ್ಟಾಲ್ ಮಾಡುವಾಗಲೇ ಕಂಪನಿಯ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರುತ್ತಾರೆ. ಅಂದರೆ ಆ್ಯಪ್‌ ಕಂಪನಿಯವರು ಆ ಮೊಬೈಲ್‌ನಲ್ಲಿ ಎಲ್ಲಾ ಸಂಪರ್ಕ ಸಂಖ್ಯೆ ಮತ್ತು ಫೋಟೊ ವಿಡಿಯೋಗಳನ್ನು ಅಕ್ಸಸ್ ಮಾಡುವ ಒಪ್ಪಿಗೆ ಪಡೆದುಕೊಂಡಿರುತ್ತದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನಂಬರ್ ಜೊತೆಗೆ ಅಕೌಂಟ್ ನಂಬರ್ ಕೊಟ್ಟರೆ 5 ನಿಮಿಷದಲ್ಲಿ ಸಾಲ ಮಂಜೂರು ಮಾಡುತ್ತಾರೆ. ಆದರೆ ಆನಂತರವೇ ನಿಮಗೆ ತಿಳಿಯುವುದು ಅದರ ಜಿಗಣೆ ರೀತಿಯ ಬಡ್ಡಿದರ.

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

ಕೇವಲ 5,000 ಸಾಲ ಪಡೆದವರು ವಾಪಸ್ 20,000-25,000 ರೂ ವರೆಗೂ ಮರುಪಾವತಿ ಮಾಡಬೇಕಾದ ಸಂದರ್ಭಗಳು ಬಂದಿವೆ. ಇನ್ನು ಲಕ್ಷಾಂತರ ರೂ ಹಣ ಪಡೆದವರು 34% ನಷ್ಟು ದುಬಾರಿ ಬಡ್ಡಿ, ಜಿಎಸ್‌ಟಿ, ಸಂಸ್ಕರಣ ವೆಚ್ಚವನ್ನು ಕಟ್ಟಲಾಗದೆ ಹೈರಾಣಾಗಿದ್ದಾರೆ. ಆಗ ರಿಕವರಿ ಏಜೆಂಟ್‌ಗಳು ಪದೇ ಪದೇ ಫೋನ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ. ಅದಕ್ಕೂ ತಲೆಕೆಡಿಸಿಕೊಳ್ಳದಿದ್ದರೆ ಅವರ ಕಾಂಟಾಕ್ಟ್ ಲಿಸ್ಟ್‌ ಪ್ರವೇಶಿಸಿ ಸಿಕ್ಕ ಸಿಕ್ಕವರ ನಂಬರ್‌ಗೆಲ್ಲಾ ಫೋನ್ ಮಾಡಿ ನಿಮ್ಮ ಸ್ನೇಹಿತರು ಲೋನ್ ಇಎಂಐ ಕಟ್ಟಿಲ್ಲ ಎಂದು ಬೈಯ್ದು ಮರ್ಯಾದೆ ಕಳೆಯುತ್ತಾರೆ. ಕೆಲವರು ಲೋನ್ ಕಟ್ಟಲಾಗದೇ ಸಿಮ್ ಬದಲಿಸಿದರೂ ಬಿಡದ ಅವರ ತಿರುಚಿದ ಚಿತ್ರಗಳನ್ನು ಅವರ ಸಂಪರ್ಕ ಸ್ನೇಹಿತರಿಗೆಲ್ಲ ಕಳಿಸಿ ಇವರ ಫ್ರಾಡ್ ಎಂಬ ಹಣೆಪಟ್ಟೆ ಕಟ್ಟುವ ಮಟ್ಟಕ್ಕೆ ಬೆಳೆದು ನಿಂತಿವೆ ಈ ಲೋನ್ ಆ್ಯಪ್‌ಗಳು.

ಈ ರೀತಿಯಾಗಿ ಒಬ್ಬ ವ್ಯಕ್ತಿಯ ಸಂಪೂರ್ಣ ನೆಮ್ಮದಿ ಹಾಳು ಮಾಡಲು ಈ ಆ್ಯಪ್‌ಗಳು ಹಿಂದೆ ಮುಂದೆ ನೋಡುವುದಿಲ್ಲ. ಹೇಗಾದರೂ ಮಾಡಿ ಸಾಲ ವಸೂಲಿ ಮಾಡುವುದು ಅವರ ಉದ್ದೇಶವಾಗಿರುತ್ತದೆ. ಹಾಗಾಗಿ ದಯವಿಟ್ಟು ಯಾರೂ ಕೂಡ ಯಾವುದೇ ಕಾರಣಕ್ಕೂ ಈ ಇನ್‌ಸ್ಟಂಟ್ ಲೋನ್ ಆಪ್‌ಗಳ ಮೊರೆ ಹೋಗಬೇಡಿ ಎಂದು ಪೊಲೀಸರು ಮನಿವಿ ಮಾಡಿದ್ದಾರೆ.

ಐಟಿ ಕಾಯ್ದೆಯ ಪ್ರಕಾರ ಲೋನ್ ಆ್ಯಪ್‌ಗಳು ಹೀಗೆ ಖಾಸಗಿ ಮಾಹಿತಿ ಕದ್ದು ಬ್ಲಾಕ್‌ಮೇಲ್ ಮಾಡುವುದು ಅಪರಾಧ. ಆದರೆ ಅದೀಗ ಎಗ್ಗಿಲ್ಲದೆ ನಡೆಯುತ್ತಿದೆ. ಲೋನ್ ತೆಗೆದುಕೊಳ್ಳುವವರು ಇರುವವರೆಗೂ ಈ ಕಿರುಕುಳ ಇದ್ದೆ ಇರುತ್ತದೆ. ಇದಕ್ಕಿರುವ ಪರಿಹಾರವೆಂದರೆ ಯಾರೂ ಕೂಡ ಸಾಲ ತೆಗೆದುಕೊಳ್ಳದಂತೆ ಜೀವನ ನಿರ್ವಹಣೆ ಮಾಡಬೇಕು. ಅದರಲ್ಲಿಯೂ ಈ ಲೋನ್‌ ಆ್ಯಪ್‌ಗಳ ಸಹವಾಸದಿಂದ ದೂರವಿದ್ದರೆ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...