Homeಮುಖಪುಟಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ...

ಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ ಎಚ್ಚರ

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

- Advertisement -
- Advertisement -

ಮೂರು ಇನ್‌ಸ್ಟಂಟ್ ಲೋನ್ ಆ್ಯಪ್‌ಗಳ ಮೂಲಕ ಸಾಲ ಪಡೆದು, ಮರುಪಾವತಿಸಲು ಸಾಧ್ಯವಾಗದ ಕಾರಣ ರಿಕವರಿ ಏಜೆಂಟ್‌ಗಳ ಕಿರುಕುಳದಿಂದ ಬೇಸೆತ್ತ 22 ವರ್ಷದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ.

ಜಾಲಹಳ್ಳಿಯ ಎಚ್‌ಎಂಟಿ ಸ್ಟಾಫ್ ಕ್ವಾರ್ಟರ್ಸ್ ನಿವಾಸಿ ತೇಜಸ್ ನಾಯರ್ ಎಂಬುವವರೆ ಆ ದುರ್ಧೈವಿಯಾಗಿದ್ದು, ಅವರು ಯಲಹಂಕ ಸಮೀಪದ ಖಾಸಗಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಸುಮಾರು 46,000 ರೂ. ಸಾಲ ಬಾಕಿ ಉಳಿಸಿಕೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನನ್ನ ಹೆಸರಿನಲ್ಲಿ ಇರುವ ಸಾಲಗಳನ್ನು ಪಾವತಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ನನ್ನ ಅಂತಿಮ ನಿರ್ಧಾರವಾಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿದ್ದು ತೇಜಸ್ ಸಾವಿಗೆ ಶರಣಾಗಿದ್ದಾರೆ.

ಈ ಕುರಿತು ಅವರ ತಂದೆ ಗೋಪಿನಾಥ್‌ರವರು ನೀಡಿದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ತೇಜಸ್ ಮೊಬೈಲ್ ಫೋನ್ ಅನ್ನು ಸೈಬರ್ ಕ್ರೈಮ್ ವಿಭಾಗಕ್ಕೆ ಕಳಿಸಿದ್ದಾರೆ.

ಮೃತರ ತಂದೆ ಮಾತನಾಡಿ, “ತೇಜಸ್ ಸ್ನೇಹಿತನೊಬ್ಬನಿಗೆ ತುರ್ತು ಎಂದು ಆ್ಯಪ್‌ ಮೂಲಕ ಸಾಲ ತೆಗೆದುಕೊಟ್ಟಿದ್ದಾನೆ. ಆದರೆ ಆತನ ಸ್ನೇಹಿತ ಎಇಎಂ ಮರುಪಾವತಿ ಮಾಡಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ತೇಜಸ್ ಆ ಸಾಲ ತೀರಿಸಲು ಬೇರೆ ಆ್ಯಪ್‌ಗಳ ಮೂಲಕ ಮತ್ತೆ ಸಾಲ ಮಾಡಿದ್ದಾನೆ. ಅವುಗಳನ್ನು ತೀರಿಸಲು ಸಂಬಂಧಿಕರೊಬ್ಬರಿಂದ ಹಣಕ್ಕೆ ಬೇಡಿಕೆಯಿಟ್ಟಾಗಲಷ್ಟೇ ನಮಗೆ ವಿಷಯ ಗೊತ್ತಾಯಿತು” ಎಂದಿದ್ದಾರೆ.

ಸಾಲ ವಾಪಸ್ ಮಾಡದ ಕಾರಣ ಆತನ ಫೋಟೊಗಳನ್ನು ತಿರುಚಿ ವಾಟ್ಸಾಪ್ ಮೂಲಕ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕಳಿಸಲಾಗಿದೆ. ಇದರಿಂದ ಬೇಸೆತ್ತ ಆತ ಆತ್ಮಹತ್ಯೆ ಮೊರೆ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ತುರ್ತು ಸಾಲಕ್ಕೆ ಮರುಳಾಗಿ ವಂಚಕರ ಬಲೆಗೆ ಬೀಳಬೇಡಿ

ತೇಜಸ್ ಒಬ್ಬರೆ ಈ ರೀತಿಯ ದೌರ್ಜನ್ಯಕ್ಕೆ ಒಳಗಾಗಿಲ್ಲ. ಬದಲಿಗೆ ಸಾವಿರಾರು ಜನರು ಈ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ತುರ್ತಿಗೆ ಎಂದು ಮೊಬೈಲ್ ಆ್ಯಪ್‌ಗಳ ಮೂಲಕ ಕಿರು ಸಾಲ ಪಡೆದು, ದುಬಾರಿ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದಾರೆ. ಹಲವಾರು ಜನ ತಮ್ಮ ಜೀವನ, ನೆಮ್ಮದಿ ಹಾಳು ಮಾಡಿಕೊಂಡಿದ್ದಾರೆ.

ಕ್ಯಾಶ್ ಗುರು, ಮನಿ ಗುರು, ದಾನಿ ಆಪ್, ಮನಿಟ್ಯಾಪ್, ಎಎಲ್‌ಪಿ ಕ್ಯಾಶ್ ಆಪ್ ನಂತರ 300ಕ್ಕೂ ಹೆಚ್ಚು ಆನ್‌ಲೈನ್ ಮೂಲಕ ಸಾಲ ನೀಡುವ ಆಪ್‌ಗಳಿವೆ. 5,000 ರೂಗಳಿಂದ ಆರಂಭವಾಗಿ 15,000,00 ರೂ ಗಳವರೆಗೂ ಯಾವುದೇ ದಾಖಲೆಗಳನ್ನು ಕೇಳದೇ ಕ್ಷಣಾರ್ಧದಲ್ಲಿ ಸಾಲ ಕೊಡುವುದಾಗಿ ಹೇಳಿ ದುಪ್ಪಟ್ಟು ವಸೂಲಿ ಮಾಡುವುದು ಇವುಗಳ ಉದ್ದೇಶ. ಆದರೆ ತಕ್ಷಣಕ್ಕೆ ಹಣ ಬೇಕಾದವರು ಮುಂದಕ್ಕೆ ನೋಡಿಕೊಳ್ಳೋಣ, ಹೇಗಾದರೂ ಮಾಡಿ ತೀರಿಸಿದರೆ ಆಯ್ತು ಎಂದುಕೊಂಡು ಸಾಲ ಪಡೆದವರು ಈ ಆ್ಯಪ್‌ಗಳ ರಿಕವರಿ ಏಜೆಂಟ್‌ಗಳಿಂದ ನಿತ್ಯನರಕ ಅನುಭಿಸುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.

ರಿಕವರಿ ಏಜೆಂಟ್‌ಗಳು ಕಳಿಸುವ ಸಂದೇಶಗಳು

ತಕ್ಷಣಕ್ಕೆ ಹಣ ಬೇಕಾದವರು ಆ್ಯಪ್‌ ಇನ್ಸ್ಟಾಲ್ ಮಾಡುವಾಗಲೇ ಕಂಪನಿಯ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರುತ್ತಾರೆ. ಅಂದರೆ ಆ್ಯಪ್‌ ಕಂಪನಿಯವರು ಆ ಮೊಬೈಲ್‌ನಲ್ಲಿ ಎಲ್ಲಾ ಸಂಪರ್ಕ ಸಂಖ್ಯೆ ಮತ್ತು ಫೋಟೊ ವಿಡಿಯೋಗಳನ್ನು ಅಕ್ಸಸ್ ಮಾಡುವ ಒಪ್ಪಿಗೆ ಪಡೆದುಕೊಂಡಿರುತ್ತದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನಂಬರ್ ಜೊತೆಗೆ ಅಕೌಂಟ್ ನಂಬರ್ ಕೊಟ್ಟರೆ 5 ನಿಮಿಷದಲ್ಲಿ ಸಾಲ ಮಂಜೂರು ಮಾಡುತ್ತಾರೆ. ಆದರೆ ಆನಂತರವೇ ನಿಮಗೆ ತಿಳಿಯುವುದು ಅದರ ಜಿಗಣೆ ರೀತಿಯ ಬಡ್ಡಿದರ.

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

ಕೇವಲ 5,000 ಸಾಲ ಪಡೆದವರು ವಾಪಸ್ 20,000-25,000 ರೂ ವರೆಗೂ ಮರುಪಾವತಿ ಮಾಡಬೇಕಾದ ಸಂದರ್ಭಗಳು ಬಂದಿವೆ. ಇನ್ನು ಲಕ್ಷಾಂತರ ರೂ ಹಣ ಪಡೆದವರು 34% ನಷ್ಟು ದುಬಾರಿ ಬಡ್ಡಿ, ಜಿಎಸ್‌ಟಿ, ಸಂಸ್ಕರಣ ವೆಚ್ಚವನ್ನು ಕಟ್ಟಲಾಗದೆ ಹೈರಾಣಾಗಿದ್ದಾರೆ. ಆಗ ರಿಕವರಿ ಏಜೆಂಟ್‌ಗಳು ಪದೇ ಪದೇ ಫೋನ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ. ಅದಕ್ಕೂ ತಲೆಕೆಡಿಸಿಕೊಳ್ಳದಿದ್ದರೆ ಅವರ ಕಾಂಟಾಕ್ಟ್ ಲಿಸ್ಟ್‌ ಪ್ರವೇಶಿಸಿ ಸಿಕ್ಕ ಸಿಕ್ಕವರ ನಂಬರ್‌ಗೆಲ್ಲಾ ಫೋನ್ ಮಾಡಿ ನಿಮ್ಮ ಸ್ನೇಹಿತರು ಲೋನ್ ಇಎಂಐ ಕಟ್ಟಿಲ್ಲ ಎಂದು ಬೈಯ್ದು ಮರ್ಯಾದೆ ಕಳೆಯುತ್ತಾರೆ. ಕೆಲವರು ಲೋನ್ ಕಟ್ಟಲಾಗದೇ ಸಿಮ್ ಬದಲಿಸಿದರೂ ಬಿಡದ ಅವರ ತಿರುಚಿದ ಚಿತ್ರಗಳನ್ನು ಅವರ ಸಂಪರ್ಕ ಸ್ನೇಹಿತರಿಗೆಲ್ಲ ಕಳಿಸಿ ಇವರ ಫ್ರಾಡ್ ಎಂಬ ಹಣೆಪಟ್ಟೆ ಕಟ್ಟುವ ಮಟ್ಟಕ್ಕೆ ಬೆಳೆದು ನಿಂತಿವೆ ಈ ಲೋನ್ ಆ್ಯಪ್‌ಗಳು.

ಈ ರೀತಿಯಾಗಿ ಒಬ್ಬ ವ್ಯಕ್ತಿಯ ಸಂಪೂರ್ಣ ನೆಮ್ಮದಿ ಹಾಳು ಮಾಡಲು ಈ ಆ್ಯಪ್‌ಗಳು ಹಿಂದೆ ಮುಂದೆ ನೋಡುವುದಿಲ್ಲ. ಹೇಗಾದರೂ ಮಾಡಿ ಸಾಲ ವಸೂಲಿ ಮಾಡುವುದು ಅವರ ಉದ್ದೇಶವಾಗಿರುತ್ತದೆ. ಹಾಗಾಗಿ ದಯವಿಟ್ಟು ಯಾರೂ ಕೂಡ ಯಾವುದೇ ಕಾರಣಕ್ಕೂ ಈ ಇನ್‌ಸ್ಟಂಟ್ ಲೋನ್ ಆಪ್‌ಗಳ ಮೊರೆ ಹೋಗಬೇಡಿ ಎಂದು ಪೊಲೀಸರು ಮನಿವಿ ಮಾಡಿದ್ದಾರೆ.

ಐಟಿ ಕಾಯ್ದೆಯ ಪ್ರಕಾರ ಲೋನ್ ಆ್ಯಪ್‌ಗಳು ಹೀಗೆ ಖಾಸಗಿ ಮಾಹಿತಿ ಕದ್ದು ಬ್ಲಾಕ್‌ಮೇಲ್ ಮಾಡುವುದು ಅಪರಾಧ. ಆದರೆ ಅದೀಗ ಎಗ್ಗಿಲ್ಲದೆ ನಡೆಯುತ್ತಿದೆ. ಲೋನ್ ತೆಗೆದುಕೊಳ್ಳುವವರು ಇರುವವರೆಗೂ ಈ ಕಿರುಕುಳ ಇದ್ದೆ ಇರುತ್ತದೆ. ಇದಕ್ಕಿರುವ ಪರಿಹಾರವೆಂದರೆ ಯಾರೂ ಕೂಡ ಸಾಲ ತೆಗೆದುಕೊಳ್ಳದಂತೆ ಜೀವನ ನಿರ್ವಹಣೆ ಮಾಡಬೇಕು. ಅದರಲ್ಲಿಯೂ ಈ ಲೋನ್‌ ಆ್ಯಪ್‌ಗಳ ಸಹವಾಸದಿಂದ ದೂರವಿದ್ದರೆ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...