Homeಮುಖಪುಟಶಿಕ್ಷಕರಿಂದ ಕಿರುಕುಳ ಆರೋಪ; ನೋಯ್ಡಾದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಶಿಕ್ಷಕರಿಂದ ಕಿರುಕುಳ ಆರೋಪ; ನೋಯ್ಡಾದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

- Advertisement -
- Advertisement -

ಹರಿಯಾಣದ ಗುರುಗ್ರಾಮ್‌ನ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಜ್ಯೋತಿ ಶರ್ಮಾ ಶುಕ್ರವಾರ ರಾತ್ರಿ ಗ್ರೇಟರ್ ನೋಯ್ಡಾದ ಖಾಸಗಿ ವಿಶ್ವವಿದ್ಯಾಲಯದ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವಿಶ್ವವಿದ್ಯಾಲಯದ ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಗ್ರೇಟರ್ ನೋಯ್ಡಾದ ಹೆಚ್ಚುವರಿ ಡಿಸಿಪಿ ಸುಧೀರ್ ಕುಮಾರ್ ಮಾತನಾಡಿ, “ವಿದ್ಯಾರ್ಥಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ, ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಅವರು ಹೇಳಿದರು.

ಜ್ಯೋತಿಯ ಕೋಣೆಯಲ್ಲಿ ಪತ್ತೆಯಾದ ಆತ್ಮಹತ್ಯೆ ಪತ್ರದಲ್ಲಿ ಇಬ್ಬರು ಪ್ರಾಧ್ಯಾಪಕರು ಮತ್ತು ವಿಶ್ವವಿದ್ಯಾಲಯ ಆಡಳಿತವು ಮಾನಸಿಕ ಕಿರುಕುಳ ನೀಡಿದೆ ಎಂದು ಆರೋಪಿಸಿದ್ದಾರೆ. ತನಗೆ ದೀರ್ಘಕಾಲದಿಂದ ಮಾನಸಿಕ ಕಿರುಕುಳ ಮತ್ತು ಅವಮಾನವಾಗಿದೆ ಎಂದು ಅವರು ಬರೆದಿದ್ದಾರೆ. ಆರೋಪಿಗಳು ಕಾನೂನು ಕ್ರಮ ಎದುರಿಸಬೇಕೆಂದು ಜ್ಯೋತಿ ಬಯಕೆ ವ್ಯಕ್ತಪಡಿಸಿದ್ದಾರೆ.

“ಅವರು ಕಂಬಿಯ ಹಿಂದೆ ಹೋಗಬೇಕೆಂದು ನಾನು ಬಯಸುತ್ತೇನೆ. ಅವರು ನನಗೆ ಮಾನಸಿಕ ಕಿರುಕುಳ ನೀಡಿದರು. ಅವರು ನನ್ನನ್ನು ಅವಮಾನಿಸಿದರು. ನಾನು ಬಹಳ ಸಮಯದಿಂದ ಈ ಒತ್ತಡದಲ್ಲಿದ್ದೇನೆ. ಅವರೂ ಅದೇ ರೀತಿ ಭಾವಿಸಬೇಕೆಂದು ನಾನು ಬಯಸುತ್ತೇನೆ” ಎಂದು ಜ್ಯೋತಿ ತನ್ನ ಆತ್ಮಹತ್ಯಾ ಪತ್ರದಲ್ಲಿ ಬರೆದಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ, ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿ, ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು. ಸಹಿಗಳನ್ನು ನಕಲಿ ಮಾಡಿದ ಆರೋಪದಿಂದಾಗಿ ಜ್ಯೋತಿ ಒತ್ತಡಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದರು. ಪ್ರತಿಭಟನೆಯ ಸಮಯದಲ್ಲಿ ಪೊಲೀಸರೊಂದಿಗೆ ಸಣ್ಣ ಘರ್ಷಣೆಯೂ ನಡೆಯಿತು.

“ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಮೃತರ ಕುಟುಂಬ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಕೋಪವಿತ್ತು, ಇದನ್ನು ಪೊಲೀಸ್ ಅಧಿಕಾರಿಗಳ ಮಾತುಕತೆಯ ಮೂಲಕ ಪರಿಹರಿಸಲಾಯಿತು. ಸ್ಥಳದಲ್ಲಿ ಶಾಂತಿ ಪುನಃಸ್ಥಾಪಿಸಲಾಗಿದೆ ಮತ್ತು ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಹೇಳಿದರು.

ಈ ಮಧ್ಯೆ, ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಅಜಿತ್ ಕುಮಾರ್, ಇಬ್ಬರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ದೃಢಪಡಿಸಿದರು. “ಸದ್ಯಕ್ಕೆ, ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ಸಹ ರಚಿಸಲಾಗಿದೆ. ಸಮಿತಿಯ ವರದಿಯ ಆಧಾರದ ಮೇಲೆ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...