Homeಮುಖಪುಟಶಾಲಾ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಬಾಲಕ ಸಾವು : ತನಿಖೆ ತೀವ್ರಗೊಳಿಸಿದ ಪೊಲೀಸರು

ಶಾಲಾ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಬಾಲಕ ಸಾವು : ತನಿಖೆ ತೀವ್ರಗೊಳಿಸಿದ ಪೊಲೀಸರು

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ನಡುವಿನ ಜಗಳದ ನಂತರ ಬಾಲಕನೋರ್ವ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಮಾರ್ಚ್ 1ರಂದು ನಡೆದ ಎರಡು ಶಾಲೆಗಳ ವಿದ್ಯಾರ್ಥಿಗಳ ಮಾರಾಮಾರಿಯ ಬಳಿಕ ಮೊಹಮ್ಮದ್ ಶಹಬಾಝ್ ಎಂಬ 16 ವರ್ಷದ ಬಾಲಕ ಅಸ್ವಸ್ತಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರಕರಣ ತನಿಖೆ ಚುರುಕುಗೊಳಿಸಿರುವ ಪೊಲೀಸರು ಶಹಬಾಝ್ ಮೇಲೆ ದಾಳಿ ನಡೆಸಲು ಬಳಸಲಾಗಿದೆ ಎನ್ನಲಾದ ‘ನನ್ಚಾಕು’ ಎಂಬ ಆಯುಧವನ್ನು ವಶಕ್ಕೆ ಪಡೆದಿದ್ದಾರೆ.

‘ನನ್ಚಾಕು’ ಎಂಬುದು ಕರಾಟೆ ಮತ್ತು ಕೊಬುಡೊಗೆ ಸಂಬಂಧಿಸಿದ ಸಮರ ಕಲೆಗಳ ಆಯುಧವಾಗಿದೆ. ಇದನ್ನು ಸಾಂದರ್ಭಿಕವಾಗಿ ಟೇಕ್ವಾಂಡೋ, ಕುಂಗ್ ಫೂ ಮತ್ತು ಇತರ ಆಧುನಿಕ ಸಮರ ಕಲೆಗಳ ಶಸ್ತ್ರಾಸ್ತ್ರ ತರಬೇತಿಯಲ್ಲಿ ಬಳಸಲಾಗುತ್ತದೆ.

ಪ್ರಕರಣದ ಐವರು ಆರೋಪಿಗಳ ಮನೆಗಳಿಂದ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರೆಲ್ಲರೂ ತಾಮರಶ್ಶೇ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.

ಕೋಝಿಕ್ಕೋಡ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಇ ಬೈಜು ಮಾಧ್ಯಮಗಳಿಗೆ ಮಾಹಿತಿ ನೀಡಿ, “ಈ ಕೊಲೆ ಯೋಜಿತ ಕೃತ್ಯ” ಎಂದು ತಿಳಿಸಿದ್ದಾರೆ. “ಶಹಬಾಝ್ ಮೇಲೆ ಹಲ್ಲೆ ನಡೆಸುವ ಮೊದಲು ಮತ್ತು ನಂತರ ಆರೋಪಿತ ವಿದ್ಯಾರ್ಥಿಗಳು ಈ ಸಂಬಂಧ ಚಾಟ್ ನಡೆಸಿದ್ದಾರೆ. ಇದು ಯೋಜಿತ ಅಪರಾಧ ಎಂಬುವುದನ್ನು ಬಹಿರಂಗಪಡಿಸಿದೆ” ಎಂದು ತಿಳಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಪೊಲೀಸರು ಆರೋಪಿಗಳು ಸಂವಹನ ನಡೆಸಲು ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಗುಂಪುಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ನಡುವೆ, ಆರೋಪಿ ವಿದ್ಯಾರ್ಥಿಗಳಿಗೆ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರವನ್ನು ವಿರೋಧಿಸಿ, ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು) ಮತ್ತು ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ (ಎಂಎಸ್‌ಎಫ್) ಆರೋಪಿಗಳನ್ನು ಬಂಧಿಸಿಟ್ಟಿರುವ ವೆಲ್ಲಿಮಡುಕುನ್ನುವಿನಲ್ಲಿರುವ ವೀಕ್ಷಣಾ ಗೃಹಕ್ಕೆ ಮೆರವಣಿಗೆ ನಡೆಸಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಹಬಾಸ್ ತಂದೆ ಕೂಡ ಆರೋಪಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡುವ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನನ್ನ ಮಗ ಬದುಕಿದ್ದರೆ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿತ್ತು. ಯಾರಾದರು ವಿದ್ಯಾರ್ಥಿಗಳು ನಕಲು ಮಾಡಿದರೂ ಅವರಿಗೆ ಈ ಪರೀಕ್ಷೆ ಬರೆಯಲು ಅಥವಾ ಬೇರೆ ಯಾವುದೇ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿರಲಿಲ್ಲ. ಇಲ್ಲಿ, ಈ ವಿದ್ಯಾರ್ಥಿಗಳು ಕೊಲೆಗಾರರು. ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ. ಕನಿಷ್ಠ ಪಕ್ಷ ಈ ವರ್ಷ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿ 27ರಂದು ತಾಮರಶ್ಶೇರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಮತ್ತು ಎಂ.ಜೆ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಫೆಬ್ರವರಿ 23 ರಂದು ನಡೆದ ಟ್ಯೂಷನ್ ಸೆಂಟರ್‌ನ ವಿದಾಯ ಪಾರ್ಟಿಯಲ್ಲಿ ನಡೆದ ವಿವಾದದಿಂದಾಗಿ ಈ ಜಗಳ ನಡೆದಿತ್ತು.

ವರದಿಗಳ ಪ್ರಕಾರ, ಮೃತ ಶಹಬಾಸ್ ಟ್ಯೂಷನ್ ಸೆಂಟರ್‌ನ ವಿದ್ಯಾರ್ಥಿಯಾಗಿರಲಿಲ್ಲ. ಆದರೂ ಆತ, ಅವರ ಸ್ನೇಹಿತರ ಆಹ್ವಾನದ ಮೇರೆಗೆ ಹಾಜರಾಗಿದ್ದರು. ಈ ವಿಚಾರವಾಗಿ ನಡೆದ ಜಗಳದಲ್ಲಿ ಶಹಬಾಸ್‌ಗೆ ಯಾವುದೇ ಗಾಯಗಳಾಗಿರುವುದು ಕಂಡು ಬಂದಿರಲಿಲ್ಲ. ಆದರೆ, ಆಸ್ವಸ್ತಗೊಂಡಿದ್ದ ಅವರನ್ನು ಸ್ನೇಹಿತರು ಮನೆಗೆ ಕರೆದೊಯ್ದಿದ್ದರು. ರಾತ್ರಿ ಶಹಬಾಝ್ ವಾಂತಿ ಮಾಡಿಕೊಂಡಿದ್ದು, ಪ್ರಜ್ಞೆ ತಪ್ಪಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧರಾಗಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಂಧಿಸಿ ವೆಲ್ಲಿಮಡುಕುನ್ನುವಿನ ವೀಕ್ಷಣಾ ಗೃಹಕ್ಕೆ ಕಳುಹಿಸಿದ್ದಾರೆ.

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...