Homeಮುಖಪುಟಶಾಲಾ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಬಾಲಕ ಸಾವು : ತನಿಖೆ ತೀವ್ರಗೊಳಿಸಿದ ಪೊಲೀಸರು

ಶಾಲಾ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಬಾಲಕ ಸಾವು : ತನಿಖೆ ತೀವ್ರಗೊಳಿಸಿದ ಪೊಲೀಸರು

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ನಡುವಿನ ಜಗಳದ ನಂತರ ಬಾಲಕನೋರ್ವ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಮಾರ್ಚ್ 1ರಂದು ನಡೆದ ಎರಡು ಶಾಲೆಗಳ ವಿದ್ಯಾರ್ಥಿಗಳ ಮಾರಾಮಾರಿಯ ಬಳಿಕ ಮೊಹಮ್ಮದ್ ಶಹಬಾಝ್ ಎಂಬ 16 ವರ್ಷದ ಬಾಲಕ ಅಸ್ವಸ್ತಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರಕರಣ ತನಿಖೆ ಚುರುಕುಗೊಳಿಸಿರುವ ಪೊಲೀಸರು ಶಹಬಾಝ್ ಮೇಲೆ ದಾಳಿ ನಡೆಸಲು ಬಳಸಲಾಗಿದೆ ಎನ್ನಲಾದ ‘ನನ್ಚಾಕು’ ಎಂಬ ಆಯುಧವನ್ನು ವಶಕ್ಕೆ ಪಡೆದಿದ್ದಾರೆ.

‘ನನ್ಚಾಕು’ ಎಂಬುದು ಕರಾಟೆ ಮತ್ತು ಕೊಬುಡೊಗೆ ಸಂಬಂಧಿಸಿದ ಸಮರ ಕಲೆಗಳ ಆಯುಧವಾಗಿದೆ. ಇದನ್ನು ಸಾಂದರ್ಭಿಕವಾಗಿ ಟೇಕ್ವಾಂಡೋ, ಕುಂಗ್ ಫೂ ಮತ್ತು ಇತರ ಆಧುನಿಕ ಸಮರ ಕಲೆಗಳ ಶಸ್ತ್ರಾಸ್ತ್ರ ತರಬೇತಿಯಲ್ಲಿ ಬಳಸಲಾಗುತ್ತದೆ.

ಪ್ರಕರಣದ ಐವರು ಆರೋಪಿಗಳ ಮನೆಗಳಿಂದ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರೆಲ್ಲರೂ ತಾಮರಶ್ಶೇ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.

ಕೋಝಿಕ್ಕೋಡ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಇ ಬೈಜು ಮಾಧ್ಯಮಗಳಿಗೆ ಮಾಹಿತಿ ನೀಡಿ, “ಈ ಕೊಲೆ ಯೋಜಿತ ಕೃತ್ಯ” ಎಂದು ತಿಳಿಸಿದ್ದಾರೆ. “ಶಹಬಾಝ್ ಮೇಲೆ ಹಲ್ಲೆ ನಡೆಸುವ ಮೊದಲು ಮತ್ತು ನಂತರ ಆರೋಪಿತ ವಿದ್ಯಾರ್ಥಿಗಳು ಈ ಸಂಬಂಧ ಚಾಟ್ ನಡೆಸಿದ್ದಾರೆ. ಇದು ಯೋಜಿತ ಅಪರಾಧ ಎಂಬುವುದನ್ನು ಬಹಿರಂಗಪಡಿಸಿದೆ” ಎಂದು ತಿಳಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಪೊಲೀಸರು ಆರೋಪಿಗಳು ಸಂವಹನ ನಡೆಸಲು ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಗುಂಪುಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ನಡುವೆ, ಆರೋಪಿ ವಿದ್ಯಾರ್ಥಿಗಳಿಗೆ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರವನ್ನು ವಿರೋಧಿಸಿ, ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು) ಮತ್ತು ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ (ಎಂಎಸ್‌ಎಫ್) ಆರೋಪಿಗಳನ್ನು ಬಂಧಿಸಿಟ್ಟಿರುವ ವೆಲ್ಲಿಮಡುಕುನ್ನುವಿನಲ್ಲಿರುವ ವೀಕ್ಷಣಾ ಗೃಹಕ್ಕೆ ಮೆರವಣಿಗೆ ನಡೆಸಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಹಬಾಸ್ ತಂದೆ ಕೂಡ ಆರೋಪಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡುವ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನನ್ನ ಮಗ ಬದುಕಿದ್ದರೆ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿತ್ತು. ಯಾರಾದರು ವಿದ್ಯಾರ್ಥಿಗಳು ನಕಲು ಮಾಡಿದರೂ ಅವರಿಗೆ ಈ ಪರೀಕ್ಷೆ ಬರೆಯಲು ಅಥವಾ ಬೇರೆ ಯಾವುದೇ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿರಲಿಲ್ಲ. ಇಲ್ಲಿ, ಈ ವಿದ್ಯಾರ್ಥಿಗಳು ಕೊಲೆಗಾರರು. ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ. ಕನಿಷ್ಠ ಪಕ್ಷ ಈ ವರ್ಷ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿ 27ರಂದು ತಾಮರಶ್ಶೇರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಮತ್ತು ಎಂ.ಜೆ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಫೆಬ್ರವರಿ 23 ರಂದು ನಡೆದ ಟ್ಯೂಷನ್ ಸೆಂಟರ್‌ನ ವಿದಾಯ ಪಾರ್ಟಿಯಲ್ಲಿ ನಡೆದ ವಿವಾದದಿಂದಾಗಿ ಈ ಜಗಳ ನಡೆದಿತ್ತು.

ವರದಿಗಳ ಪ್ರಕಾರ, ಮೃತ ಶಹಬಾಸ್ ಟ್ಯೂಷನ್ ಸೆಂಟರ್‌ನ ವಿದ್ಯಾರ್ಥಿಯಾಗಿರಲಿಲ್ಲ. ಆದರೂ ಆತ, ಅವರ ಸ್ನೇಹಿತರ ಆಹ್ವಾನದ ಮೇರೆಗೆ ಹಾಜರಾಗಿದ್ದರು. ಈ ವಿಚಾರವಾಗಿ ನಡೆದ ಜಗಳದಲ್ಲಿ ಶಹಬಾಸ್‌ಗೆ ಯಾವುದೇ ಗಾಯಗಳಾಗಿರುವುದು ಕಂಡು ಬಂದಿರಲಿಲ್ಲ. ಆದರೆ, ಆಸ್ವಸ್ತಗೊಂಡಿದ್ದ ಅವರನ್ನು ಸ್ನೇಹಿತರು ಮನೆಗೆ ಕರೆದೊಯ್ದಿದ್ದರು. ರಾತ್ರಿ ಶಹಬಾಝ್ ವಾಂತಿ ಮಾಡಿಕೊಂಡಿದ್ದು, ಪ್ರಜ್ಞೆ ತಪ್ಪಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧರಾಗಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಂಧಿಸಿ ವೆಲ್ಲಿಮಡುಕುನ್ನುವಿನ ವೀಕ್ಷಣಾ ಗೃಹಕ್ಕೆ ಕಳುಹಿಸಿದ್ದಾರೆ.

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...