Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...