Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...