Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...