Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...