Homeಮುಖಪುಟವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

- Advertisement -
- Advertisement -

“ಪುನರಾವರ್ತಿತ” ಲೈಂಗಿಕ ಕಿರುಕುಳ ಎಸಗಿದ್ದ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ ಅನಿರ್ದಿಷ್ಟಾವಧಿಗೆ ಹೊರಹಾಕಿದ್ದು, ಇದು ಅವರ “ಶೈಕ್ಷಣಿಕ ಸಾವಿಗೆ” ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.  ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವಾಗ ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

ಸಂಸ್ಥೆಯ ಆಂತರಿಕ ದೂರುಗಳ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಅವರನ್ನು ಉಚ್ಚಾಟಿಸಿ ಜೂನ್ 21 ರಂದು ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿಗಳು ಹೊರಡಿಸಿದ ಆದೇಶದ ವಿರುದ್ಧ ವಿದ್ಯಾರ್ಥಿಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿದ್ಯಾರ್ಥಿಯು ಎರಡು ವರ್ಷಗಳಿಂದ ವಿಶ್ವವಿದ್ಯಾನಿಲಯದಲ್ಲಿ ಹಲವಾರು ಹುಡುಗಿಯರಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತರುವಾಯ, ಆಂತರಿಕ ದೂರುಗಳ ಸಮಿತಿಯು ಎರಡು ವಿಚಾರಣೆಗಳಲ್ಲಿ ಅವರನ್ನು ತಪ್ಪಿತಸ್ಥರೆಂದು ಕಂಡುಕೊಂಡಿದ್ದು, ಹಾಗಾಗಿ ಅವರನ್ನು ಉಚ್ಚಾಟನೆ ಮಾಡಲಾಗಿತ್ತು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ

ಗುರುವಾರ ಪೀಠವು, ಅನಿರ್ದಿಷ್ಟ ಅವಧಿಗೆ ವಿದ್ಯಾರ್ಥಿಯನ್ನು ಉಚ್ಚಾಟನೆ ಮಾಡುವ ಆದೇಶವು ಕಠಿಣವಾಗಿದ್ದು, ಇದು ಅವರ ‘ಶೈಕ್ಷಣಿಕ ಮರಣ’ಕ್ಕೆ ಕಾರಣವಾಗುತ್ತದೆ. ಅಂತಹ ಉಚ್ಚಾಟನೆಯ ಪರಿಣಾಮವು ವಿದ್ಯಾರ್ಥಿಯ ಶೈಕ್ಷಣಿಕ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದೆ. “ಈ ರೀತಿಯ ಉಚ್ಛಾಟನೆ ಶಿಕ್ಷಣದ ನಿರಾಕರಣೆಗೆ ಕಾರಣವಾಗುತ್ತದೆ … ಅನಿರ್ದಿಷ್ಟ ಅವಧಿಗೆ ಹೊರಹಾಕುವ ಆದೇಶದಿಂದ ಪರಿಣಾಮಗಳು ತೀವ್ರವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ: ಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

ವಿಶ್ವವಿದ್ಯಾನಿಲಯವು ವಿಧಿಸಿರುವ ಅನಿರ್ದಿಷ್ಟ ಅವಧಿಗೆ ವಿರುದ್ಧವಾಗಿ ಕೇವಲ ಒಂದು ಶೈಕ್ಷಣಿಕ ವರ್ಷಕ್ಕೆ ಉಚ್ಚಾಟನೆ ಮಾಡಬೇಕು ಎಂದು ಪೀಠವು ಆದೇಶಿಸಿದೆ. ಅರ್ಜಿದಾರರಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಸಮುದಾಯ ಸೇವೆ ಮಾಡುವಂತೆ ಆದೇಶ ನೀಡಿದ್ದು, ವಿಶ್ವವಿದ್ಯಾಲಯವು ಪೂರ್ಣಗೊಂಡ ನಂತರ ಅವರ ಫಲಿತಾಂಶಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

ತನ್ನ ಅರ್ಜಿಯಲ್ಲಿ ವಿದ್ಯಾರ್ಥಿಯು ತಾನು ಅತ್ಯುತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದೇನೆ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. “ತನ್ನ ವಿರುದ್ಧದ ವಿಚಾರಣೆ ಪ್ರಕ್ರಿಯೆಯು ದೋಷಪೂರಿತ, ಪಕ್ಷಪಾತ ಮತ್ತು ಸಹಜ ನ್ಯಾಯದ ತತ್ವಗಳನ್ನು ಉಲ್ಲಂಘಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಆದಾಗ್ಯೂ, ದೂರುದಾರರೊಬ್ಬರ ಪರ ವಕೀಲರು, ವಿದ್ಯಾರ್ಥಿಯು “ಪುನರಾವರ್ತಿತ ಅಪರಾಧಿ”ಯಾಗಿದ್ದು, ಎರಡು ವರ್ಷಗಳಲ್ಲಿ “ಅನೇಕ ಹುಡುಗಿಯರಿಗೆ ಕಿರುಕುಳ” ನೀಡಿದ್ದಾರೆ ಎಂದು ಹೇಳಿದ್ದಾರೆ. 2022 ರಲ್ಲಿ ಬೇರೊಬ್ಬ ಹುಡುಗಿ ಸಲ್ಲಿಸಿದ ದೂರಿನ ಮೇಲೆ ಆಂತರಿಕ ದೂರುಗಳ ಸಮಿತಿಯಿಂದ ವಿಚಾರಣೆಯನ್ನು ಎದುರಿಸಿದ್ದರು ಎಂದು ವಕೀಲರು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...