Homeಮುಖಪುಟವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

- Advertisement -
- Advertisement -

“ಪುನರಾವರ್ತಿತ” ಲೈಂಗಿಕ ಕಿರುಕುಳ ಎಸಗಿದ್ದ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ ಅನಿರ್ದಿಷ್ಟಾವಧಿಗೆ ಹೊರಹಾಕಿದ್ದು, ಇದು ಅವರ “ಶೈಕ್ಷಣಿಕ ಸಾವಿಗೆ” ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.  ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವಾಗ ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

ಸಂಸ್ಥೆಯ ಆಂತರಿಕ ದೂರುಗಳ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಅವರನ್ನು ಉಚ್ಚಾಟಿಸಿ ಜೂನ್ 21 ರಂದು ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿಗಳು ಹೊರಡಿಸಿದ ಆದೇಶದ ವಿರುದ್ಧ ವಿದ್ಯಾರ್ಥಿಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿದ್ಯಾರ್ಥಿಯು ಎರಡು ವರ್ಷಗಳಿಂದ ವಿಶ್ವವಿದ್ಯಾನಿಲಯದಲ್ಲಿ ಹಲವಾರು ಹುಡುಗಿಯರಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತರುವಾಯ, ಆಂತರಿಕ ದೂರುಗಳ ಸಮಿತಿಯು ಎರಡು ವಿಚಾರಣೆಗಳಲ್ಲಿ ಅವರನ್ನು ತಪ್ಪಿತಸ್ಥರೆಂದು ಕಂಡುಕೊಂಡಿದ್ದು, ಹಾಗಾಗಿ ಅವರನ್ನು ಉಚ್ಚಾಟನೆ ಮಾಡಲಾಗಿತ್ತು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ

ಗುರುವಾರ ಪೀಠವು, ಅನಿರ್ದಿಷ್ಟ ಅವಧಿಗೆ ವಿದ್ಯಾರ್ಥಿಯನ್ನು ಉಚ್ಚಾಟನೆ ಮಾಡುವ ಆದೇಶವು ಕಠಿಣವಾಗಿದ್ದು, ಇದು ಅವರ ‘ಶೈಕ್ಷಣಿಕ ಮರಣ’ಕ್ಕೆ ಕಾರಣವಾಗುತ್ತದೆ. ಅಂತಹ ಉಚ್ಚಾಟನೆಯ ಪರಿಣಾಮವು ವಿದ್ಯಾರ್ಥಿಯ ಶೈಕ್ಷಣಿಕ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದೆ. “ಈ ರೀತಿಯ ಉಚ್ಛಾಟನೆ ಶಿಕ್ಷಣದ ನಿರಾಕರಣೆಗೆ ಕಾರಣವಾಗುತ್ತದೆ … ಅನಿರ್ದಿಷ್ಟ ಅವಧಿಗೆ ಹೊರಹಾಕುವ ಆದೇಶದಿಂದ ಪರಿಣಾಮಗಳು ತೀವ್ರವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ: ಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

ವಿಶ್ವವಿದ್ಯಾನಿಲಯವು ವಿಧಿಸಿರುವ ಅನಿರ್ದಿಷ್ಟ ಅವಧಿಗೆ ವಿರುದ್ಧವಾಗಿ ಕೇವಲ ಒಂದು ಶೈಕ್ಷಣಿಕ ವರ್ಷಕ್ಕೆ ಉಚ್ಚಾಟನೆ ಮಾಡಬೇಕು ಎಂದು ಪೀಠವು ಆದೇಶಿಸಿದೆ. ಅರ್ಜಿದಾರರಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಸಮುದಾಯ ಸೇವೆ ಮಾಡುವಂತೆ ಆದೇಶ ನೀಡಿದ್ದು, ವಿಶ್ವವಿದ್ಯಾಲಯವು ಪೂರ್ಣಗೊಂಡ ನಂತರ ಅವರ ಫಲಿತಾಂಶಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

ತನ್ನ ಅರ್ಜಿಯಲ್ಲಿ ವಿದ್ಯಾರ್ಥಿಯು ತಾನು ಅತ್ಯುತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದೇನೆ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. “ತನ್ನ ವಿರುದ್ಧದ ವಿಚಾರಣೆ ಪ್ರಕ್ರಿಯೆಯು ದೋಷಪೂರಿತ, ಪಕ್ಷಪಾತ ಮತ್ತು ಸಹಜ ನ್ಯಾಯದ ತತ್ವಗಳನ್ನು ಉಲ್ಲಂಘಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಆದಾಗ್ಯೂ, ದೂರುದಾರರೊಬ್ಬರ ಪರ ವಕೀಲರು, ವಿದ್ಯಾರ್ಥಿಯು “ಪುನರಾವರ್ತಿತ ಅಪರಾಧಿ”ಯಾಗಿದ್ದು, ಎರಡು ವರ್ಷಗಳಲ್ಲಿ “ಅನೇಕ ಹುಡುಗಿಯರಿಗೆ ಕಿರುಕುಳ” ನೀಡಿದ್ದಾರೆ ಎಂದು ಹೇಳಿದ್ದಾರೆ. 2022 ರಲ್ಲಿ ಬೇರೊಬ್ಬ ಹುಡುಗಿ ಸಲ್ಲಿಸಿದ ದೂರಿನ ಮೇಲೆ ಆಂತರಿಕ ದೂರುಗಳ ಸಮಿತಿಯಿಂದ ವಿಚಾರಣೆಯನ್ನು ಎದುರಿಸಿದ್ದರು ಎಂದು ವಕೀಲರು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

ವಿಡಿಯೊ ನೋಡಿ: ನಮ್ಮನ್ನು ಬಂಧಿಸಿ ಎಷ್ಟು ಬಾರಿ ಠಾಣೆಯಲ್ಲಿ ಕೂರಿಸಿದ್ರು ಕೂಡಾ ನಾವು ಮತ್ತೆ ಮತ್ತೆ ಬರುತ್ತೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...