Homeಕರ್ನಾಟಕಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ...

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

- Advertisement -
- Advertisement -

ಮಂಗಳೂರಿನ ಪರಂಗಿಪೇಟೆಯಲ್ಲಿ ಇತ್ತಿಚೆಗೆ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರುಗಳಾದ ಭರತ್‌ ಶೆಟ್ಟಿ, ಹರೀಶ್ ಪೂಂಜಾ ಸಹಿತ ಬಿಜೆಪಿಯ ಸಹ ಸಂಘಟನೆಗಳ ದುಷ್ಕರ್ಮಿಗಳ ವಿರುದ್ಧ ಸ್ವಯಂ ಪ್ರೇರಿತ ಮೊಕದ್ದಮೆ ಹೂಡಿ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ’ಯ ನಿಯೋಗ ಜಿಲ್ಲಾ ಎಸ್‌ಪಿ ಅವರನ್ನು ಭೇಟಿ ಮಾಡಿ ಸೋಮವಾರ ಒತ್ತಾಯಿಸಿದೆ. ಮಂಗಳೂರು

ಫೆಬ್ರವರಿ 25 ರಂದು ಸಂಜೆ 7 ಗಂಟೆಗೆ ಕಾಣೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಕೊನೆಗೂ ಶನಿವಾರ ಮಾರ್ಚ್ 8 ರಂದು ಸುರಕ್ಷಿತವಾಗಿ ಪತ್ತೆಯಾಗಿದ್ದರು. ಅವರ ನಿಗೂಢ ನಾಪತ್ತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ವೇಳೆ ಫರಂಗಿಪೇಟೆಯ ಅಂಗಡಿ ಮುಂಗಟ್ಟನ್ನು ಬಂದ್ ಮಾಡಬೇಕೆಂದು ಬಿಜೆಪಿ ಪರ ಸಂಘಟನೆಗಳು ಕರೆ ಕೊಟ್ಟಿದ್ದವು. ಪಟ್ಟಣದ ಎಲ್ಲರೂ ಜಾತಿ ಧರ್ಮವೆನ್ನದೆ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದರು.

ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಾಪತ್ತೆ ಪ್ರಕರಣ ಸದನದಲ್ಲೂ ಸದ್ದು ಮಾಡಿತ್ತು. ಸಂಘ ಪರಿವಾರದ ಸಂಘಟನೆಗಳು ಹಾಗೂ ಬಿಜೆಪಿ ನಾಪತ್ತೆ ಪ್ರಕರಣಕ್ಕೆ ಹಿಂದೂ ಮುಸ್ಲಿಂ ಬಣ್ಣ ಹಚ್ಚಲು ಗರಿಷ್ಠ ಪ್ರಯತ್ನ ಮಾಡಿದ್ದವು. ಫರಂಗಿಪೇಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಎಂಬ ಕಾರಣಕ್ಕೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಹಾಗೂ ಇಡೀ ಊರಿಗೆ ಕ್ರಿಮಿನಲ್ ಹಣೆಪಟ್ಟಿ ಕಟ್ಟಲು ಬಿಜೆಪಿ ಮತ್ತು ಅದರ ಸಂಘಟನೆಗಳ ದುಷ್ಕರ್ಮಿಗಳು ಮುಂದಾಗಿದ್ದರು. ದ್ವೆಷ ಭಾಷಣದ ಜೊತೆಗೆ ಮುಸ್ಲಿಮರು ಹೆಚ್ಚಾಗಿ ಇರುವ ಪ್ರದೇಶವನ್ನು ತಪ್ಪಾಗಿ ಮತ್ತು ಭಯ ಹುಟ್ಟಿಸುವ ಎಲ್ಲಾ ಪ್ರಪೊಗಾಂಡವನ್ನು ಬಿಜೆಪಿ ಮಾಡಿತ್ತು.

ಈ ನಡುವೆ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದು, ದ್ವಿತೀಯ ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದಾಗಿ ಪೋಲಿಸರು ತಿಳಿಸಿದ್ದಾರೆ. ಫರಂಗಿಪೇಟೆಯಿಂದ ತೆರಳಿದ್ದ ಬಾಲಕ ಶಿವಮೊಗ್ಗ, ಮೈಸೂರು, ಕೆಂಗೇರಿ, ನಂದಿಬೆಟ್ಟ ಸುತ್ತಿ ಉಡುಪಿಗೆ ತೆರಳಿದ್ದರು. ಅಲ್ಲಿ ಬಟ್ಟೆ ಖರೀದಿ ವೇಳೆ ಪತ್ತೆಯಾಗಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಬಾಲಮಂದಿರಕ್ಕೆ ಸೇರಿಸಲಾಗಿದೆ ಎಂದು ವರದಿಯಾಗಿದೆ. ಮಂಗಳೂರು

ಮಾರ್ಚ್‌ 12ರಂದು ಅವರನ್ನು ಹೈಕೋರ್ಟ್‌ ಹಾಜರುಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ. ಅವರ ಹೆತ್ತವರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್ ಮುಂದೆ ಹಾಜರುಪಡಿಸಿ, ಕೋರ್ಟ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

“ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ” ನಿಯೋಗದಲ್ಲಿ ವೇದಿಕೆಯ ಸಂಚಾಲಕ, ಸಿಪಿಐಎಂ ದ.ಕ‌. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ರಾಜ್ಯ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಬಿ, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಾಜಿ ಮೇಯರ್ ಕೆ ಅಶ್ರಫ್, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ ಇದ್ದರು.

ಜೊತೆಗೆ ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಎಐಟಿಯುಸಿ ಮುಂದಾಳು ಎಚ್ ವಿ ರಾವ್, ಕಾರ್ಮಿಕ ಮುಂದಾಳುಗಳಾದ ವಿ ಕುಕ್ಯಾನ್, ಸೀತಾರಾಮ ಬೇರಿಂಜೆ, ಡಿವೈಎಫ್ಐ ನ ಬಿ ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಶೆಟ್ಟಿ, ಪ್ರಮೀಳಾ ಕೆ, ಎಸ್ಎಫ್ಐ ನ ವಿನುಷ ರಮಣ, ಸಮುದಾಯ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು, ವಿವಿಧ ಸಂಘಟನೆಗಳ ಮುಂದಾಳುಗಳಾದ ಸರೋಜಿನಿ ಬಂಟ್ವಾಳ, ಕರುಣಾಕರ ಮಾರಿಪಳ್ಳ, ಸಮರ್ಥ್ ಭಟ್, ನೀತ್ ಶರಣ್, ರಾಜೇಶ್ ದೇವಾಡಿಗಾ ಮುಂತಾದವರು ಉಪಸ್ಥಿತರಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...