Homeಕರ್ನಾಟಕಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ...

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

- Advertisement -
- Advertisement -

ಮಂಗಳೂರಿನ ಪರಂಗಿಪೇಟೆಯಲ್ಲಿ ಇತ್ತಿಚೆಗೆ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರುಗಳಾದ ಭರತ್‌ ಶೆಟ್ಟಿ, ಹರೀಶ್ ಪೂಂಜಾ ಸಹಿತ ಬಿಜೆಪಿಯ ಸಹ ಸಂಘಟನೆಗಳ ದುಷ್ಕರ್ಮಿಗಳ ವಿರುದ್ಧ ಸ್ವಯಂ ಪ್ರೇರಿತ ಮೊಕದ್ದಮೆ ಹೂಡಿ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ’ಯ ನಿಯೋಗ ಜಿಲ್ಲಾ ಎಸ್‌ಪಿ ಅವರನ್ನು ಭೇಟಿ ಮಾಡಿ ಸೋಮವಾರ ಒತ್ತಾಯಿಸಿದೆ. ಮಂಗಳೂರು

ಫೆಬ್ರವರಿ 25 ರಂದು ಸಂಜೆ 7 ಗಂಟೆಗೆ ಕಾಣೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಕೊನೆಗೂ ಶನಿವಾರ ಮಾರ್ಚ್ 8 ರಂದು ಸುರಕ್ಷಿತವಾಗಿ ಪತ್ತೆಯಾಗಿದ್ದರು. ಅವರ ನಿಗೂಢ ನಾಪತ್ತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ವೇಳೆ ಫರಂಗಿಪೇಟೆಯ ಅಂಗಡಿ ಮುಂಗಟ್ಟನ್ನು ಬಂದ್ ಮಾಡಬೇಕೆಂದು ಬಿಜೆಪಿ ಪರ ಸಂಘಟನೆಗಳು ಕರೆ ಕೊಟ್ಟಿದ್ದವು. ಪಟ್ಟಣದ ಎಲ್ಲರೂ ಜಾತಿ ಧರ್ಮವೆನ್ನದೆ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದರು.

ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಾಪತ್ತೆ ಪ್ರಕರಣ ಸದನದಲ್ಲೂ ಸದ್ದು ಮಾಡಿತ್ತು. ಸಂಘ ಪರಿವಾರದ ಸಂಘಟನೆಗಳು ಹಾಗೂ ಬಿಜೆಪಿ ನಾಪತ್ತೆ ಪ್ರಕರಣಕ್ಕೆ ಹಿಂದೂ ಮುಸ್ಲಿಂ ಬಣ್ಣ ಹಚ್ಚಲು ಗರಿಷ್ಠ ಪ್ರಯತ್ನ ಮಾಡಿದ್ದವು. ಫರಂಗಿಪೇಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಎಂಬ ಕಾರಣಕ್ಕೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಹಾಗೂ ಇಡೀ ಊರಿಗೆ ಕ್ರಿಮಿನಲ್ ಹಣೆಪಟ್ಟಿ ಕಟ್ಟಲು ಬಿಜೆಪಿ ಮತ್ತು ಅದರ ಸಂಘಟನೆಗಳ ದುಷ್ಕರ್ಮಿಗಳು ಮುಂದಾಗಿದ್ದರು. ದ್ವೆಷ ಭಾಷಣದ ಜೊತೆಗೆ ಮುಸ್ಲಿಮರು ಹೆಚ್ಚಾಗಿ ಇರುವ ಪ್ರದೇಶವನ್ನು ತಪ್ಪಾಗಿ ಮತ್ತು ಭಯ ಹುಟ್ಟಿಸುವ ಎಲ್ಲಾ ಪ್ರಪೊಗಾಂಡವನ್ನು ಬಿಜೆಪಿ ಮಾಡಿತ್ತು.

ಈ ನಡುವೆ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದು, ದ್ವಿತೀಯ ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದಾಗಿ ಪೋಲಿಸರು ತಿಳಿಸಿದ್ದಾರೆ. ಫರಂಗಿಪೇಟೆಯಿಂದ ತೆರಳಿದ್ದ ಬಾಲಕ ಶಿವಮೊಗ್ಗ, ಮೈಸೂರು, ಕೆಂಗೇರಿ, ನಂದಿಬೆಟ್ಟ ಸುತ್ತಿ ಉಡುಪಿಗೆ ತೆರಳಿದ್ದರು. ಅಲ್ಲಿ ಬಟ್ಟೆ ಖರೀದಿ ವೇಳೆ ಪತ್ತೆಯಾಗಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಬಾಲಮಂದಿರಕ್ಕೆ ಸೇರಿಸಲಾಗಿದೆ ಎಂದು ವರದಿಯಾಗಿದೆ. ಮಂಗಳೂರು

ಮಾರ್ಚ್‌ 12ರಂದು ಅವರನ್ನು ಹೈಕೋರ್ಟ್‌ ಹಾಜರುಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ. ಅವರ ಹೆತ್ತವರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್ ಮುಂದೆ ಹಾಜರುಪಡಿಸಿ, ಕೋರ್ಟ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

“ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ” ನಿಯೋಗದಲ್ಲಿ ವೇದಿಕೆಯ ಸಂಚಾಲಕ, ಸಿಪಿಐಎಂ ದ.ಕ‌. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ರಾಜ್ಯ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಬಿ, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಾಜಿ ಮೇಯರ್ ಕೆ ಅಶ್ರಫ್, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ ಇದ್ದರು.

ಜೊತೆಗೆ ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಎಐಟಿಯುಸಿ ಮುಂದಾಳು ಎಚ್ ವಿ ರಾವ್, ಕಾರ್ಮಿಕ ಮುಂದಾಳುಗಳಾದ ವಿ ಕುಕ್ಯಾನ್, ಸೀತಾರಾಮ ಬೇರಿಂಜೆ, ಡಿವೈಎಫ್ಐ ನ ಬಿ ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಶೆಟ್ಟಿ, ಪ್ರಮೀಳಾ ಕೆ, ಎಸ್ಎಫ್ಐ ನ ವಿನುಷ ರಮಣ, ಸಮುದಾಯ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು, ವಿವಿಧ ಸಂಘಟನೆಗಳ ಮುಂದಾಳುಗಳಾದ ಸರೋಜಿನಿ ಬಂಟ್ವಾಳ, ಕರುಣಾಕರ ಮಾರಿಪಳ್ಳ, ಸಮರ್ಥ್ ಭಟ್, ನೀತ್ ಶರಣ್, ರಾಜೇಶ್ ದೇವಾಡಿಗಾ ಮುಂತಾದವರು ಉಪಸ್ಥಿತರಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...