Homeಕರ್ನಾಟಕಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ :...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

- Advertisement -
- Advertisement -

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್, ಎಸ್ಎಫ್ಐ, ಎಐಡಿಎಸ್ಓ, ಎಐಎಸ್ಎ ಹಾಗೂ ಕೆವಿಎಸ್ ಸಂಘಟನೆಗಳ ಪ್ರತಿನಿಧಿಗಳು ಸರ್ಕಾರದ ಆದೇಶ ಪ್ರತಿ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೊಂದರಂತೆ ಕೇವಲ 6 ಸಾವಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲೇ 900 ಮ್ಯಾಗ್ನೆಟ್ ಶಾಲೆ ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು 1-5 ಕಿಲೋ ಮೀಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈಗಾಗಲೇ ಚನ್ನಪಟ್ಟಣದ ಹೊಂಗನೂರಿನಲ್ಲಿ 50, 70, 80, ಹಾಗೂ 100 ದಾಖಲಾತಿ ಇರುವ ಶಾಲೆಗಳನ್ನು ವಿಲೀನ ಮಾಡಲು ಆದೇಶ ಹೊರಡಿಸಲಾಗಿದೆ. ಅಲ್ಲದೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡುವುದು ಎಸ್‌ಡಿಎಂಸಿ, ಅಂದರೆ ಪೋಷಕರ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಶಾಲೆಗಳನ್ನು ನಡೆಸಲು ಹೊರಗುತ್ತಿಗೆ ನೀಡಲಾಗುವುದು ಹಾಗೂ ಶಾಲೆಗಳು ತಮ್ಮ ಆದಾಯವನ್ನು ತಾವೇ ಉತ್ಪತ್ತಿ ಮಾಡಿಕೊಳ್ಳಬೇಕು ಎಂಬ ಗಂಭೀರ ಮತ್ತು ಆಘಾತಕಾರಿ ಅಂಶಗಳು ಸುತ್ತೋಲೆಯಲ್ಲಿ ಇವೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯಲು ಕಾರ್ಪೊರೇಟ್ ದೇಣಿಗೆಯನ್ನು ಪಡೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆ ಶಾಲೆಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಆರೋಪಿಸಿದರು.

ಈ ಉದ್ದೇಶಕ್ಕಾಗಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2,500 ಕೋಟಿ ರೂಪಾಯಿ ಸಾಲ ಪಡೆಯಲಾಗಿದೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗಾಗಿ ಇರುವ ಕೆಕೆಆರ್‌ಡಿಬಿ ಮತ್ತು ಗಣಿಗಾರಿಕೆಯಿಂದ ಬದುಕು ಕಳೆದುಕೊಂಡ 10 ತಾಲೂಕಿನ ಜನರ ಪುನಶ್ಚೇತನಕ್ಕಾಗಿ ಇರುವ ಕೆಎಂಇಆರ್‌ಸಿ ನಿಧಿಗಳಿಂದ 700 ಕೋಟಿ ರೂಪಾಯಿ ಹಣ ಪಡೆಯಲಾಗಿದೆ. ಅಲ್ಪಸಂಖ್ಯಾತರ ನಿಧಿಯಿಂದ 100ಕೋಟಿ ಪಡೆಯಲಾಗಿದೆ. ಜನಕಲ್ಯಾಣಕ್ಕಾಗಿ ಬಳಸಬೇಕಾದ ನಿಧಿಯನ್ನು ಅದೇ ಜನರ ಮಕ್ಕಳು ಓದುವ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಳಸಲಾಗುತ್ತಿದೆ. ಇದು ಈ ಜನರಿಗೆ ಮಾಡುತ್ತಿರುವ ವಿಶ್ವಾಸ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯಲ್ಲಿ 59 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 21,000 ಶಾಲೆಗಳು ದುರಸ್ತಿ ಕಾಣದೆ ನಲುಗುತ್ತಿವೆ. 7 ಸಾವಿರ ಶಾಲೆಗಳಲ್ಲಿ ಏಕೋಪಾಧ್ಯಾಯ ಶಿಕ್ಷಕರಿದ್ದಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಶಾಲೆಗಳನ್ನು ಅಭಿವೃದ್ಧಿಪಡಿಸದೇ, ಶಾಲೆಗಳನ್ನು ವಿಲೀನ ಮಾಡಿ ಮುಚ್ಚಿ ಹಾಕುತ್ತಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ ಎಂದರು.

ಊರಿನ ಶಾಲೆಗಳನ್ನು ಕೊಂದು ಸ್ಥಾಪಿಸಲಾಗುತ್ತಿರುವ ಈ ಕೆಪಿಎಸ್ ಶಾಲೆಗಳಲ್ಲಿ ಕೌಶಲ್ಯದ ಹೆಸರಿನಲ್ಲಿ ಬಡ ಮಕ್ಕಳನ್ನು ಕಾರ್ಮಿಕರನ್ನಾಗಿಸುವ ವೃತ್ತಿ ಶಿಕ್ಷಣವನ್ನು 6ನೇ ತರಗತಿಯಿಂದಲೇ ಕಡ್ಡಾಯಗೊಳಿಸಲಾಗಿದೆ. ಮಣ್ಣಿನ ಹಣತೆ ತಯಾರಿಸುವುದು, ಅಡಿಕೆ ಸುಲಿಯುವುದು, ಟೈಲರಿಂಗ್ ಸೇರಿದಂತೆ ಮುಂತಾದ ಕಸುಬುಗಳನ್ನು ಕಲಿಸಲಾಗುವ ಪಠ್ಯಕ್ರಮವನ್ನು ಉದ್ಯಮ ಪಾಲುದಾರರೊಂದಿಗೆ ರೂಪಿಸಲು ಹೊರಟಿರುವ ಸರ್ಕಾರವು, ರೈತ-ಕಾರ್ಮಿಕರ ಮಕ್ಕಳನ್ನು ಮತ್ತೆ ಅವರ ಕಾರ್ಖಾನೆಗಳಲ್ಲಿ ಅಗ್ಗದ ಕೂಲಿಗೆ ದೂಡುವ ಹುನ್ನಾರವನ್ನು ರಚಿಸಿದೆ. ಶಿಕ್ಷಣವು ಚಾರಿತ್ರ್ಯ ನಿರ್ಮಾಣದ ಪ್ರಕ್ರಿಯೆಯಾಗಬೇಕೆಂಬ ದೇಶದ ಮಹಾನ್ ವ್ಯಕ್ತಿಗಳ ಆಶಯಕ್ಕೆ ತಿಲಾಂಜಲಿಯಿಟ್ಟು ಕನಿಷ್ಟ ವಿಷಯಗಳ ಜ್ಞಾನ ಹೊಂದಿರದ, ಚಿಂತನೆಯ ಪರಿವೆಯಿಲ್ಲದ ಯಂತ್ರಮಾನವರನ್ನು ಸೃಷ್ಟಿಸುವ ನಾಗರಿಕತೆ ವಿರೋಧಿ ಕೆಲಸಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ನಡೆ ವಿರುದ್ಧ ರಾಜ್ಯದಲ್ಲೆಡೆ ಜನ ಹೋರಾಟ ಭುಗಿಲೆದ್ದಿದೆ. ಸಾವಿರಾರು ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಬೀದಿಗಿಳಿದು ಊರಿನ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ತೀವ್ರ ಜನವಿರೋಧದ ನಡುವೆಯೂ ಸರ್ಕಾರವು ಈ ಕುಕೃತ್ಯವನ್ನು ಮುಂದುವರೆಸಿದೆ. ಜನಾಭಿಪ್ರಾಯವನ್ನು ಧಿಕ್ಕರಿಸಿರುವ ಸರ್ಕಾರದ ಈ ನಿರಂಕುಶ ಮತ್ತು ಅಪ್ರಜಾತಾಂತ್ರಿಕ ನಡೆಯನ್ನು ಎಡ ವಿದ್ಯಾರ್ಥಿ ಸಂಘಟನೆಗಳು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತವೆ. ಈ ಕೂಡಲೇ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕು ಮತ್ತು ಶಿಕ್ಷಕರು ಹಾಗೂ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಸೌಲಭ್ಯ ನೀಡಿ ಅಭಿವೃದ್ಧಿಪಡಿಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಶಿಕ್ಷಣ ಪ್ರೇಮಿ ಜನತೆಯ ಪರವಾಗಿ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಎಸ್ಎಫ್ ರಾಜ್ಯಾಧ್ಯಕ್ಷೆ ವೀಣಾ ನಾಯಕ್, ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಟಿಎಸ್, ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಎಐಎಸ್ಎ ಜಿಲ್ಲಾ ಮಂಡಳಿ ಸದಸ್ಯ ಸುಶಾಂತ್, ಹಾಗೂ ಕೆವಿಎಸ್ ರಾಜ್ಯ ಕಾರ್ಯದರ್ಶಿ ದುರ್ಗೇಶ್ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ....